AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Day 2: ಶಂಕರ್​ ಅಶ್ವತ್ಥ್​ ಪತ್ನಿ ಮಾಡಿದ ಅಡುಗೆ ತಿಂದು 10-15 ಜನ ಸತ್ತಹೋಗಿದ್ರಾ? ಇಲ್ಲಿದೆ ಅಸಲಿ ವಿಷಯ!

Bigg Boss Kannada Day 2 Updates: ಬಿಗ್​ ಬಾಸ್​ ಮನೆಯೊಳಗಿರುವ ಸದಸ್ಯರು ತಮ್ಮ ಖಾಸಗಿ ಬದುಕಿನ ಅನೇಕ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಹಿರಿಯ ನಟ ಶಂಕರ್​ ಅಶ್ವತ್ಥ್​​ ಅವರು ತಮ್ಮ ಪತ್ನಿಯ ಅಡುಗೆ ಬಗ್ಗೆ ಹೇಳಿದ ಮಾತು ಕೇಳಿ ಇನ್ನುಳಿದ ಸ್ಪರ್ಧಿಗಳೆಲ್ಲ ಅಚ್ಚರಿಪಟ್ಟಿದ್ದಾರೆ.

Bigg Boss Kannada Day 2: ಶಂಕರ್​ ಅಶ್ವತ್ಥ್​ ಪತ್ನಿ ಮಾಡಿದ ಅಡುಗೆ ತಿಂದು 10-15 ಜನ ಸತ್ತಹೋಗಿದ್ರಾ? ಇಲ್ಲಿದೆ ಅಸಲಿ ವಿಷಯ!
ಶಂಕರ್​ ಅಶ್ವತ್ಥ್​
ರಾಜೇಶ್ ದುಗ್ಗುಮನೆ
| Edited By: |

Updated on:Mar 03, 2021 | 3:34 PM

Share

‘ಮದುವೆ ಆದಾಗ ನನ್ನ ಹೆಂಡತಿಗೆ ಒಂದು ಕಾಫಿ ಮಾಡಲು ಕೂಡ ಬರುತ್ತಿರಲಿಲ್ಲ. ಆದರೆ ಈಗ 300 ಜನಕ್ಕೆ ಒಬ್ಬಳೇ ಅಡುಗೆ ಮಾಡುತ್ತಾಳೆ. ಕ್ಯಾಟರಿಂಗ್​ ಮಾಡುತ್ತಾಳೆ. ಕಳೆದ 11 ವರ್ಷಗಳಲ್ಲಿ ನನ್ನ ಹೆಂಡತಿ ಕೊಟ್ಟ ಊಟವನ್ನು ತಿಂದವರ ಪೈಕಿ ಸುಮಾರು 10-15 ಜನ ಸತ್ತುಹೋಗಿದ್ದಾರೆ’ ಎಂದು ಹೇಳುವ ಮೂಲಕ ಶಂಕರ್ ಅಶ್ವತ್ಥ್​ ಅವರು ಒಂದು ಕ್ಷಣ ಎಲ್ಲರನ್ನೂ ದಂಗಾಗಿಸಿದರು. ಅಷ್ಟಕ್ಕೂ ಅವರ ಮಾತಿನ ಅರ್ಥವೇನು? ನಿಜಕ್ಕೂ ಅವರ ಹೆಂಡತಿಯ ಅಡುಗೆ ತಿಂದವರು ಸತ್ತು ಹೋಗಿದ್ದಾರಾ? ಇಂಥ ಪ್ರಶ್ನೆ ಮೂಡುವುದು ಸಹಜ. ಹಾಗಾಗಿ ಮರುಕ್ಷಣವೇ ಅಸಲಿ ವಿಚಾರ ಏನು ಎಂಬುದನ್ನು ಎಳೆಎಳೆಯಾಗಿ ವಿವರಿಸಿದರು.

‘ನಾನು ನೇರವಾಗಿ ಹೇಳುತ್ತೇನೆ. ನಾವು ದುಡಿದು ಬದುಕಬೇಕು ಎಂದು ನಮ್ಮ ತಂದೆ ಕಲಿಸಿದ್ದಾರೆ. ಕೂತು ತಿಂದರೆ ಎಷ್ಟಿದ್ದರೂ ಸಾಲದು. ರೋಗವೂ ಬರುತ್ತದೆ. ನನ್ನ ಹೆಂಡತಿ ಕ್ಯಾಟರಿಂಗ್​ ಮಾಡುತ್ತಾಳೆ. ನಾನು ಈಗ ಹೇಳುವುದು ಕೇಳಿ ಎಲ್ಲರೂ ತಪ್ಪು ತಿಳಿದುಕೊಳ್ಳುತ್ತಾರೆ. ಆದರೆ ನಿಧಾನವಾಗಿ ಗ್ರಹಿಸಬೇಕು. ನನ್ನ ಹೆಂಡತಿಯ ಊಟ ತಿಂದು 10-15 ಜನರು ಸತ್ತು ಹೋಗಿದ್ದಾರೆ. ಅಂದರೆ ಅಷ್ಟು ಕೆಟ್ಟದಾಗಿ ಅಡುಗೆ ಮಾಡುತ್ತಾರೆ ಅಂತ ನೀವೆಲ್ಲ ಅಂದುಕೊಳ್ಳುತ್ತೀರಿ. ಆದರೆ ವಿಷಯ ಅದಲ್ಲ. 10-15 ಜನರು ಸಾಯುವ ಕೊನೇ ಕಾಲದಲ್ಲಿ ಇವಳು ಊಟ ಕೊಟ್ಟಿದ್ದಾಳೆ’ ಎಂದು ಶಂಕರ್​ ಅಶ್ವತ್ಥ್​ ವಿವರಿಸಿದಾಗ ಅವರ ಮಾತಿನ ಅರ್ಥ ಎಲ್ಲರಿಗೂ ತಿಳಿಯಿತು.

‘ಹಾಸಿಗೆ ಹಿಡಿದ ಅನೇಕರಿಗೆ ಅವಳು ಊಟ ನೀಡಿದ್ದಾಳೆ. ನೀವು ನಂಬುವುದಿಲ್ಲ. ಅವಳು ಮಾಡಿದ ಸಹಾಯವನ್ನು ನೆನೆದು, ಅವಳನ್ನು ಕರೆದು ಎಷ್ಟೋ ಕಡೆ ಬಾಗಿನ ನೀಡಿದ್ದಾರೆ. ಯಾರಾದರೂ ಕಷ್ಟಪಡುತ್ತಿದ್ದಾರೆ ಎಂಬುದು ಗೊತ್ತಾದರೆ ನನ್ನ ಹೆಂಡತಿ ಅಳುತ್ತಾಳೆ’ ಎಂದಿದ್ದಾರೆ ಶಂಕರ್​ ಅಶ್ವತ್ಥ್​.

ಇನ್ನು, ಅಡುಗೆಗೆ ಸಂಬಂಧಿಸಿದಂತೆ ಬಿಗ್​ ಬಾಸ್​ ಮನೆಯಲ್ಲಿ ಭಾರಿ ಚೆರ್ಚೆ ನಡೆದಿದೆ. ಈ ಹಿಂದಿನ ಸೀಸನ್​ಗಳಲ್ಲಿ ಎಷ್ಟೋ ಬಾರಿ ಜಗಳ ಆರಂಭ ಆಗಿದ್ದು ಅಡುಗೆ ಮನೆಯಿಂದಲೇ! ಬಿಗ್​ ಬಾಸ್​ಗೆ ಎಂಟ್ರಿ ನೀಡುವುದಕ್ಕೂ ಮುನ್ನ ‘ನಿಮಗೆ ಅಡುಗೆ ಮಾಡೋಕೆ ಬರುತ್ತಾ’ ಎಂಬ ಪ್ರಶ್ನೆಯನ್ನು ಸುದೀಪ್​ ಎಲ್ಲರಿಗೂ ಕೇಳಿದ್ದರು. ಸ್ವತಃ ಸುದೀಪ್​ ಅವರಿಗೂ ಅಡುಗೆ ಬಗ್ಗೆ ಅಪಾರ ಆಸಕ್ತಿ ಇದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲೇ ಮದುವೆಯಾದ ಮಂಜು ಪಾವಗಡ – ದಿವ್ಯಾ ಸುರೇಶ್​!

Published On - 2:53 pm, Wed, 3 March 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
4,500 ಕೋಟಿ ವಂಚನೆ ಕೇಸ್​: ಹೂಡಿಕೆಗಿಂತ ಹೆಚ್ಚು ಲಾಭ ಪಡೆದವರಿಗೂ ಈಗ ನಡುಕ
4,500 ಕೋಟಿ ವಂಚನೆ ಕೇಸ್​: ಹೂಡಿಕೆಗಿಂತ ಹೆಚ್ಚು ಲಾಭ ಪಡೆದವರಿಗೂ ಈಗ ನಡುಕ
ಸ್ತ್ರೀ ಜಾತಕದಲ್ಲಿ ಯಾವ ಗ್ರಹ ಬಲವಾಗಿದ್ರೆ ಅದೃಷ್ಟ ಗೊತ್ತಾ?
ಸ್ತ್ರೀ ಜಾತಕದಲ್ಲಿ ಯಾವ ಗ್ರಹ ಬಲವಾಗಿದ್ರೆ ಅದೃಷ್ಟ ಗೊತ್ತಾ?
ಇಂದು ಈ ರಾಶಿಯವರು ಹಿತಶತ್ರುಗಳಿಂದ ಜಾಗರೂಕರಾಗಿರಿ
ಇಂದು ಈ ರಾಶಿಯವರು ಹಿತಶತ್ರುಗಳಿಂದ ಜಾಗರೂಕರಾಗಿರಿ
ನನ್ನ ತಮ್ಮ ಹಾಗೂ ಶಿವಣ್ಣನ ನಂಬಿ ರೈತರು ಸ್ಟೇಡಿಯಂಗೆ ಜಮೀನು ಕೊಟ್ಟಿದ್ದಾರೆ
ನನ್ನ ತಮ್ಮ ಹಾಗೂ ಶಿವಣ್ಣನ ನಂಬಿ ರೈತರು ಸ್ಟೇಡಿಯಂಗೆ ಜಮೀನು ಕೊಟ್ಟಿದ್ದಾರೆ
ಭೂಪಾಲ್​ನಲ್ಲಿ ‘ಪೆದ್ದಿ ಹವಾ, ರಾಮ್ ಚರಣ್ ಜೊತೆ ಇನ್ಯಾರೆಲ್ಲ ಹಾಜರಿ
ಭೂಪಾಲ್​ನಲ್ಲಿ ‘ಪೆದ್ದಿ ಹವಾ, ರಾಮ್ ಚರಣ್ ಜೊತೆ ಇನ್ಯಾರೆಲ್ಲ ಹಾಜರಿ
ಮೋದಿ ಭೇಟಿಯಾದ ಮಾರ್ಕೊ ರುಬಿಯೋ: ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ
ಮೋದಿ ಭೇಟಿಯಾದ ಮಾರ್ಕೊ ರುಬಿಯೋ: ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ
ಎಐ ಬಳಸಿ ಬಿಕಿನಿ ವಿಡಿಯೋ: ರುಕ್ಮಿಣಿ ವಸಂತ್ ಹೇಳಿದ್ದೇನು?
ಎಐ ಬಳಸಿ ಬಿಕಿನಿ ವಿಡಿಯೋ: ರುಕ್ಮಿಣಿ ವಸಂತ್ ಹೇಳಿದ್ದೇನು?
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಡಾ ರಾಜ್​ಕುಮಾರ್ ಹಾಡಿದ ರಾಯರ ಹಾಡುಗಳ ನೆನೆದ ನಟಿ ತಾರಾ
ಡಾ ರಾಜ್​ಕುಮಾರ್ ಹಾಡಿದ ರಾಯರ ಹಾಡುಗಳ ನೆನೆದ ನಟಿ ತಾರಾ
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ