AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ‘ಪ್ರಶಾಂತ್​ ಸಂಬರಗಿ ಕ್ಯಾರೆಕ್ಟರ್​ ಸರಿ ಇಲ್ಲ’! ನಿಧಿ ಸುಬ್ಬಯ್ಯ ಹೊರಿಸಿದ ಈ ಗಂಭೀರ ಆರೋಪಕ್ಕೆ ಕಾರಣ ಏನು?

BBK8: ಪ್ರಶಾಂತ್​ ಸಂಬರಗಿ ವರ್ತನೆಯಿಂದ ಅನೇಕರಿಗೆ ಕಿರಿಕಿರಿ ಆಗುತ್ತಿದೆ. ತಮ್ಮ ಅಸಮಾಧಾನವನ್ನು ನಟಿ ನಿಧಿ ಸುಬ್ಬಯ್ಯ ನೇರವಾಗಿ ಹೇಳಿಕೊಂಡಿದ್ದಾರೆ. ಇದರಿಂದ ದೊಡ್ಡ ಕಿಡಿ ಹೊತ್ತಿಕೊಳ್ಳುವ ಸಾಧ್ಯತೆ ಇದೆ!

Bigg Boss Kannada: ‘ಪ್ರಶಾಂತ್​ ಸಂಬರಗಿ ಕ್ಯಾರೆಕ್ಟರ್​ ಸರಿ ಇಲ್ಲ’! ನಿಧಿ ಸುಬ್ಬಯ್ಯ ಹೊರಿಸಿದ ಈ ಗಂಭೀರ ಆರೋಪಕ್ಕೆ ಕಾರಣ ಏನು?
ನಿಧಿ ಸುಬ್ಬಯ್ಯ - ಪ್ರಶಾಂತ್​ ಸಂಬರಗಿ
ಮದನ್​ ಕುಮಾರ್​
|

Updated on: Mar 24, 2021 | 12:31 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಆಟ ಈಗ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಬೇರೆ ಬೇರೆ ಕ್ಷೇತ್ರದಿಂದ ಬಂದಿರುವ, ಭಿನ್ನ ಮನಸ್ಥಿತಿಯ ಹಲವು ಸ್ಪರ್ಧಿಗಳ ನಡುವೆ ಹೊಂದಿಕೊಂಡು ಜೀವನ ಮಾಡುವುದು ಕಷ್ಟದ ವಿಚಾರ. ಅದರ ಮಧ್ಯೆ ಯಾರಾದರೂ ಅನಗತ್ಯ ಕಿರಿಕಿರಿ ಮಾಡಿದರೆ ಮನೆಯೊಳಗಿನ ವಾತಾವರಣ ಇನ್ನಷ್ಟು ಕೆಡುವುದು ಗ್ಯಾರಂಟಿ. ಸದ್ಯ ಪ್ರಶಾಂತ್​ ಸಂಬರಗಿ ಮೇಲೆ ಅನೇಕರು ಅಂಥ ಆರೋಪ ಹೊರಿಸುತ್ತಿದ್ದಾರೆ.

ಪ್ರಶಾಂತ್​ ಸಂಬರಗಿ ಮೇಲೆ ಹಲವರಿಗೆ ಅಸಮಾಧಾನ ಇದೆ ಎಂಬುದು ನಿಜ. ಆದರೆ ನಟಿ ನಿಧಿ ಸುಬ್ಬಯ್ಯ ಅವರು ಒಂದು ಹೆಜ್ಜೆ ಮುಂದೆ ಹೋಗಿ ಪ್ರಶಾಂತ್​ ಅವರ ಕ್ಯಾರೆಕ್ಟರ್​ ಬಗ್ಗೆ ಮಾತನಾಡಿದ್ದಾರೆ. ‘ಆ ಮನುಷ್ಯನ ಕ್ಯಾರೆಕ್ಟರ್​ ಸರಿ ಇಲ್ಲ’ ಎಂದು ಎಲ್ಲರ ಎದುರಿನಲ್ಲಿ ನೇರವಾಗಿ ಹೇಳಿದ್ದಾರೆ. ಆದರೆ ಇದಿನ್ನೂ ಪ್ರಶಾಂತ್​ ಸಂಬರಗಿ ಕಿವಿಗೆ ಬಿದ್ದಿಲ್ಲ. ಒಂದು ವೇಳೆ ಈ ವಿಚಾರ ಪ್ರಶಾಂತ್​ಗೆ ಗೊತ್ತಾದರೆ ದೊಡ್ಮನೆಯಲ್ಲಿ ಅವರು ರಂಪಾಟ ಮಾಡುವ ಸಾಧ್ಯತೆ ಹೆಚ್ಚಿದೆ.

ಅಷ್ಟಕ್ಕೂ ನಿಧಿಗೆ ಪ್ರಶಾಂತ್​ ಮೇಲೆ ಇಂತಹ ಭಾವನೆ ಬರಲು ಕಾರಣ ಏನು? ಪ್ರಶಾಂತ್​ ಅವರದ್ದು ಸ್ವಲ್ಪ ಮೊಂಡುತನ ಜಾಸ್ತಿ. ತಾವು ಹೇಳಿದ್ದೇ ಸರಿ ಎಂದು ಅವರು ಆಗಾಗ ವಾದ ಮಾಡುತ್ತಾರೆ. ಇತರೆ ಸ್ಪರ್ಧಿಗಳನ್ನು ಹಲವು ಬಾರಿ ಅವರು ಕೀಳಾಗಿ ಕಂಡ ಉದಾಹರಣೆ ಇದೆ. ಇತ್ತೀಚೆಗೆ ನಡೆದ ಒಂದು ಟಾಸ್ಕ್​ನಲ್ಲಿ ನಿಧಿಗೂ ಇದೇ ರೀತಿ ಫೀಲ್​ ಆಗಿದೆ. ನಿಧಿ ಅವರನ್ನು ಪ್ರಶಾಂತ್​ ಪದೇಪದೇ ವೀಕ್ ಎಂದು​ ಹೇಳಿದ್ದು ಅವರಿಗೆ ಇಷ್ಟ ಆಗಿಲ್ಲ. ಬೇರೆಯವರಿಗೆ ಸ್ವಾತಂತ್ರ್ಯ ನೀಡದೇ ಎಲ್ಲರ ಮೇಲೂ ತಮ್ಮ ಅಭಿಪ್ರಾಯವನ್ನು ಹೇರಲು ಪ್ರಯತ್ನಿಸುತ್ತಿರುವ ಪ್ರಶಾಂತ್​ರನ್ನು ಕಂಡರೆ ಸದ್ಯಕ್ಕೆ ಅನೇಕರಿಗೆ ಹಿಡಿಸುತ್ತಿಲ್ಲ.

ಈ ವಾರ ಕ್ಯಾಪ್ಟನ್​ ಅರವಿಂದ್​ ಕೆ.ಪಿ. ಅವರನ್ನು ಹೊರತುಪಡಿಸಿ ಬೇರೆ ಎಲ್ಲ ಸದಸ್ಯರೂ ನಾಮಿನೇಟ್​ ಆಗಿದ್ದಾರೆ. ಹಾಗಾಗಿ ಎಲ್ಲರ ಮೇಲೂ ಎಲಿಮಿನೇಷನ್​ ಕತ್ತಿ ತೂಗುತ್ತಿದೆ. ತಮ್ಮ ಅಸ್ಥಿತ್ವವನ್ನು ಉಳಿಸಿಕೊಳ್ಳುವ ಸಲುವಾಗಿ ಇನ್ನಷ್ಟು ಆಕ್ರಮಣಕಾರಿಯಾಗಿ ಆಟ ಆಡಬೇಕಾದ ಪರಿಸ್ಥಿತಿ ನಿರ್ಮಾಣ ಆಗಿದೆ. ಇಂಥ ಸಂದರ್ಭದಲ್ಲಿ ಪ್ರಶಾಂತ್​ ಸಂಬರಗಿ ತೋರಿಸುತ್ತಿರುವ ವರ್ತನೆಗೆ ನಿಧಿ ಸುಬ್ಬಯ್ಯ ಮಾತ್ರವಲ್ಲದೆ ರಘು ಗೌಡ ಕೂಡ ಬೇಸತ್ತಿದ್ದಾರೆ. ಮುಂದೇನಾಗುತ್ತದೆ ಎಂಬ ಕೌತುಕ ವೀಕ್ಷಕರಲ್ಲೂ ಮನೆ ಮಾಡಿದೆ.

ಇದನ್ನೂ ಓದಿ: ಹೆಂಡತಿಯನ್ನು ನೆನಪಿಸಿಕೊಂಡು ಗಳಗಳನೆ ಅತ್ತ ಪ್ರಶಾಂತ್​ ಸಂಬರಗಿ..

ಅಧಿಕಪ್ರಸಂಗ ನಂಗೆ ಇಷ್ಟ ಆಗಲ್ಲ; ತಮ್ಮದೇ ಟೀಂನವರಿಗೆ ಎಚ್ಚರಿಕೆ ಕೊಟ್ಟ ನಿಧಿ ಸುಬ್ಬಯ್ಯ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್