Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss: ತನ್ನನ್ನೇ ತಾನು ನಂಬದ ಶಮಂತ್​ ಮೇಲೆ ಜನರಿಗೆ ಯಾಕಿಷ್ಟು ನಂಬಿಕೆ? ಇದು ಬಿಗ್​ ಬಾಸ್ ರಹಸ್ಯ!

Bigg Boss Kannada 8 | Shamanth Bro Gowda: ಮೂರನೇ ವಾರದ ಎಲಿಮಿನೇಷನ್​ನಲ್ಲಿ ಗೀತಾ ಭಾರತಿ ಭಟ್​ ಮತ್ತು ಶಮಂತ್​ ಮಧ್ಯೆ ಪೈಪೋಟಿ ನಡೆದಿತ್ತು. ‘ಈ ವಾರ ನಾನೇ ಔಟ್​ ಆಗೋದು ಅನಿಸುತ್ತೆ’ ಎಂದು ಶಮಂತ್​ ಆತ್ಮವಿಶ್ವಾಸ ಕಳೆದುಕೊಂಡು ಮಾತನಾಡಿದ್ದರು. ಆದರೂ ಅವರು ಸೇಫ್​ ಆಗಿದ್ದು ಅಚ್ಚರಿ!

Bigg Boss: ತನ್ನನ್ನೇ ತಾನು ನಂಬದ ಶಮಂತ್​ ಮೇಲೆ ಜನರಿಗೆ ಯಾಕಿಷ್ಟು ನಂಬಿಕೆ? ಇದು ಬಿಗ್​ ಬಾಸ್ ರಹಸ್ಯ!
ಶಮಂತ್​ ಬ್ರೋ ಗೌಡ
Follow us
ಮದನ್​ ಕುಮಾರ್​
| Updated By: Praveen Sahu

Updated on:Mar 26, 2021 | 5:00 PM

ಬಿಗ್​ ಬಾಸ್​ ಆಟದ ಲೆಕ್ಕಾಚಾರವೇ ಬೇರೆ. ಒಂದು ವಾರ ವೀಕ್​ ಆಗಿದ್ದವರು ಮತ್ತೊಂದು ವಾರ ಸಖತ್​ ಪರ್ಫಾಮೆನ್ಸ್​ ನೀಡಬಹುದು. ಆದರೆ ಶಮಂತ್​ ಬ್ರೋ ಗೌಡ ವಿಚಾರದಲ್ಲಿ ಈ ಲೆಕ್ಕ ಯಾಕೋ ತಪ್ಪಾಗುತ್ತಿದೆ. ಕಳೆದ ಮೂರು ವಾರದಿಂದ ಅವರು ಬೇರೆಯದೇ ಹಾದಿಯಲ್ಲಿ ಸಾಗುತ್ತಿದ್ದಾರೆ. ಮೂರನೇ ವಾರದ ಎಲಿಮಿನೇಷನ್​ನಲ್ಲಿ ಅವರು ಮನೆಯಿಂದ ಹೊರನಡೆಯುತ್ತಾರೆ ಎಂದೇ ಊಹಿಸಲಾಗಿತ್ತು. ಆದರೆ ಜಸ್ಟ್​ ಮಿಸ್​!

ಮೂರನೇ ವಾರದ ಎಲಿಮಿನೇಷನ್​ನಲ್ಲಿ ಗೀತಾ ಭಾರತಿ ಭಟ್​ ಮತ್ತು ಶಮಂತ್​ ಬ್ರೋ ಗೌಡ ಮಧ್ಯೆ ಭಾರಿ ಪೈಪೋಟಿ ನಡೆದಿತ್ತು. ಈ ಸಂದರ್ಭದಲ್ಲಿ ಯಾರು ಮನೆಯಿಂದ ಹೊರಹೋಗಬಹುದು ಎಂದು ಎಲ್ಲ ಸದಸ್ಯರಿಗೂ ಸುದೀಪ್​ ಪ್ರಶ್ನೆ ಕೇಳಿದರು. ಆಗ ಹೆಚ್ಚು ಜನರು ಶಮಂತ್​ ಹೆಸರನ್ನು ಹೇಳಿದರು. ಶಮಂತ್​ ಮನೆಯಿಂದ ಹೊರನಡೆಯಬೇಕು ಎಂಬ ಅಭಿಪ್ರಾಯ ಬಹುತೇಕರಿಂದ ಕೇಳಿಬಂತು…

ಸ್ವತಃ ಶಮಂತ್​ಗೂ ಸುದೀಪ್​ ಈ ಪ್ರಶ್ನೆ ಕೇಳಿದರು. ‘ಈ ವಾರ ನಾನೇ ಔಟ್​ ಆಗೋದು ಅನಿಸುತ್ತೆ ಸರ್​. ಯಾಕೆಂದರೆ ಎಲ್ಲರೂ ನನ್ನ ಹೆಸರನ್ನೇ ಹೇಳ್ತಾ ಇದಾರೆ’ ಎಂದು ಶಮಂತ್​ ಸಂಪೂರ್ಣ ಆತ್ಮವಿಶ್ವಾಸ ಕಳೆದುಕೊಂಡು ಮಾತನಾಡಿದರು! ಅಂದರೆ ಸ್ವತಃ ಶಮಂತ್​ಗೆ ತಮ್ಮ ಮೇಲೆ ಆತ್ಮವಿಶ್ವಾಸ ಇಲ್ಲ ಎಂಬುದು ಸಾಬೀತಾಯಿತು. ಆದರೆ ಅಂತಿಮವಾಗಿ ಎಲಿಮಿನೇಟ್​ ಆಗಿದ್ದು ಮಾತ್ರ ಗೀತಾ. ಅಷ್ಟಕ್ಕೂ ಮನೆ ಮಂದಿಗೆಲ್ಲ ಬೇಡವಾದ, ಆತ್ಮ ವಿಶ್ವಾಸವೇ ಇಲ್ಲದ ಶಮಂತ್​ ಸೇಫ್​ ಆಗಿದ್ದು ಹೇಗೆ ಎಂಬ ಅನುಮಾನ ಅನೇಕರಿಗೆ ಕಾಡುತ್ತಿದೆ…

ವೀಕ್ಷಕರು ವೋಟ್​ ಮಾಡಿದ್ದರಿಂದಾಗಿ ಶಮಂತ್​ ಸೇಫ್​ ಆಗಿದ್ದಾರೆ. ಮೂರನೇ ವಾರವೂ ಜನರು ಅವರ ಕೈ ಹಿಡಿದಿದ್ದಾರೆ. ಆದರೆ ಯಾರಿಗೆ ಎಷ್ಟು ವೋಟ್​ ಬಂದಿದೆ ಎಂಬುದನ್ನು ವಾಹಿನಿ ಬಹಿರಂಗ ಪಡಿಸುವುದಿಲ್ಲ. ಹಾಗಾಗಿ ಇದೊಂದು ರಹಸ್ಯವೇ ಸರಿ. ಪ್ರತಿ ಬಾರಿಯೂ ‘ಇನ್ಮೇಲೆ ನನ್ನ ಆಟ ಶುರು ಮಾಡ್ತೀನಿ’ ಎಂದು ಹೇಳುವ ಶಮಂತ್​ ಈವರೆಗೂ ಅಸಲಿ ಆಟ ಶುರು ಮಾಡಿಲ್ಲ. ಎರಡನೇ ವಾರ ಕಳಪೆ ಹಣೆಪಟ್ಟಿಯಿಂದ ಅವರು ಜೈಲು ಶಿಕ್ಷೆ ಕೂಡ ಅನುಭವಿಸಿದ್ದರು. ಮುಂದೆ ಏನು ಮಾಡುತ್ತಾರೋ ಕಾದು ನೋಡಬೇಕು.

ಇದನ್ನೂ ಓದಿ: BBK8: ಲ್ಯಾಗ್​ ಮಂಜು ಬಿಗ್​ ಬಾಸ್​ ವಿನ್ನರ್​; ಶಮಂತ್​ ಶೀಘ್ರವೇ ಔಟ್​! ಹೀಗೆ ಭವಿಷ್ಯ ನುಡಿದಿದ್ದು ಯಾರು?

‘ಶಮಂತ್​ಗೆ ಕ್ಯಾಪ್ಟನ್ಸಿ ಕೊಟ್ಟಿದ್ದ ನನಗೆ ನಾನೇ ಚಪ್ಪಲ್ಲಿಯಲ್ಲಿ ಹೊಡೆದುಕೊಳ್ಳಬೇಕು‘

Published On - 2:29 pm, Mon, 22 March 21

ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ