AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss: ತನ್ನನ್ನೇ ತಾನು ನಂಬದ ಶಮಂತ್​ ಮೇಲೆ ಜನರಿಗೆ ಯಾಕಿಷ್ಟು ನಂಬಿಕೆ? ಇದು ಬಿಗ್​ ಬಾಸ್ ರಹಸ್ಯ!

Bigg Boss Kannada 8 | Shamanth Bro Gowda: ಮೂರನೇ ವಾರದ ಎಲಿಮಿನೇಷನ್​ನಲ್ಲಿ ಗೀತಾ ಭಾರತಿ ಭಟ್​ ಮತ್ತು ಶಮಂತ್​ ಮಧ್ಯೆ ಪೈಪೋಟಿ ನಡೆದಿತ್ತು. ‘ಈ ವಾರ ನಾನೇ ಔಟ್​ ಆಗೋದು ಅನಿಸುತ್ತೆ’ ಎಂದು ಶಮಂತ್​ ಆತ್ಮವಿಶ್ವಾಸ ಕಳೆದುಕೊಂಡು ಮಾತನಾಡಿದ್ದರು. ಆದರೂ ಅವರು ಸೇಫ್​ ಆಗಿದ್ದು ಅಚ್ಚರಿ!

Bigg Boss: ತನ್ನನ್ನೇ ತಾನು ನಂಬದ ಶಮಂತ್​ ಮೇಲೆ ಜನರಿಗೆ ಯಾಕಿಷ್ಟು ನಂಬಿಕೆ? ಇದು ಬಿಗ್​ ಬಾಸ್ ರಹಸ್ಯ!
ಶಮಂತ್​ ಬ್ರೋ ಗೌಡ
ಮದನ್​ ಕುಮಾರ್​
| Updated By: Praveen Sahu|

Updated on:Mar 26, 2021 | 5:00 PM

Share

ಬಿಗ್​ ಬಾಸ್​ ಆಟದ ಲೆಕ್ಕಾಚಾರವೇ ಬೇರೆ. ಒಂದು ವಾರ ವೀಕ್​ ಆಗಿದ್ದವರು ಮತ್ತೊಂದು ವಾರ ಸಖತ್​ ಪರ್ಫಾಮೆನ್ಸ್​ ನೀಡಬಹುದು. ಆದರೆ ಶಮಂತ್​ ಬ್ರೋ ಗೌಡ ವಿಚಾರದಲ್ಲಿ ಈ ಲೆಕ್ಕ ಯಾಕೋ ತಪ್ಪಾಗುತ್ತಿದೆ. ಕಳೆದ ಮೂರು ವಾರದಿಂದ ಅವರು ಬೇರೆಯದೇ ಹಾದಿಯಲ್ಲಿ ಸಾಗುತ್ತಿದ್ದಾರೆ. ಮೂರನೇ ವಾರದ ಎಲಿಮಿನೇಷನ್​ನಲ್ಲಿ ಅವರು ಮನೆಯಿಂದ ಹೊರನಡೆಯುತ್ತಾರೆ ಎಂದೇ ಊಹಿಸಲಾಗಿತ್ತು. ಆದರೆ ಜಸ್ಟ್​ ಮಿಸ್​!

ಮೂರನೇ ವಾರದ ಎಲಿಮಿನೇಷನ್​ನಲ್ಲಿ ಗೀತಾ ಭಾರತಿ ಭಟ್​ ಮತ್ತು ಶಮಂತ್​ ಬ್ರೋ ಗೌಡ ಮಧ್ಯೆ ಭಾರಿ ಪೈಪೋಟಿ ನಡೆದಿತ್ತು. ಈ ಸಂದರ್ಭದಲ್ಲಿ ಯಾರು ಮನೆಯಿಂದ ಹೊರಹೋಗಬಹುದು ಎಂದು ಎಲ್ಲ ಸದಸ್ಯರಿಗೂ ಸುದೀಪ್​ ಪ್ರಶ್ನೆ ಕೇಳಿದರು. ಆಗ ಹೆಚ್ಚು ಜನರು ಶಮಂತ್​ ಹೆಸರನ್ನು ಹೇಳಿದರು. ಶಮಂತ್​ ಮನೆಯಿಂದ ಹೊರನಡೆಯಬೇಕು ಎಂಬ ಅಭಿಪ್ರಾಯ ಬಹುತೇಕರಿಂದ ಕೇಳಿಬಂತು…

ಸ್ವತಃ ಶಮಂತ್​ಗೂ ಸುದೀಪ್​ ಈ ಪ್ರಶ್ನೆ ಕೇಳಿದರು. ‘ಈ ವಾರ ನಾನೇ ಔಟ್​ ಆಗೋದು ಅನಿಸುತ್ತೆ ಸರ್​. ಯಾಕೆಂದರೆ ಎಲ್ಲರೂ ನನ್ನ ಹೆಸರನ್ನೇ ಹೇಳ್ತಾ ಇದಾರೆ’ ಎಂದು ಶಮಂತ್​ ಸಂಪೂರ್ಣ ಆತ್ಮವಿಶ್ವಾಸ ಕಳೆದುಕೊಂಡು ಮಾತನಾಡಿದರು! ಅಂದರೆ ಸ್ವತಃ ಶಮಂತ್​ಗೆ ತಮ್ಮ ಮೇಲೆ ಆತ್ಮವಿಶ್ವಾಸ ಇಲ್ಲ ಎಂಬುದು ಸಾಬೀತಾಯಿತು. ಆದರೆ ಅಂತಿಮವಾಗಿ ಎಲಿಮಿನೇಟ್​ ಆಗಿದ್ದು ಮಾತ್ರ ಗೀತಾ. ಅಷ್ಟಕ್ಕೂ ಮನೆ ಮಂದಿಗೆಲ್ಲ ಬೇಡವಾದ, ಆತ್ಮ ವಿಶ್ವಾಸವೇ ಇಲ್ಲದ ಶಮಂತ್​ ಸೇಫ್​ ಆಗಿದ್ದು ಹೇಗೆ ಎಂಬ ಅನುಮಾನ ಅನೇಕರಿಗೆ ಕಾಡುತ್ತಿದೆ…

ವೀಕ್ಷಕರು ವೋಟ್​ ಮಾಡಿದ್ದರಿಂದಾಗಿ ಶಮಂತ್​ ಸೇಫ್​ ಆಗಿದ್ದಾರೆ. ಮೂರನೇ ವಾರವೂ ಜನರು ಅವರ ಕೈ ಹಿಡಿದಿದ್ದಾರೆ. ಆದರೆ ಯಾರಿಗೆ ಎಷ್ಟು ವೋಟ್​ ಬಂದಿದೆ ಎಂಬುದನ್ನು ವಾಹಿನಿ ಬಹಿರಂಗ ಪಡಿಸುವುದಿಲ್ಲ. ಹಾಗಾಗಿ ಇದೊಂದು ರಹಸ್ಯವೇ ಸರಿ. ಪ್ರತಿ ಬಾರಿಯೂ ‘ಇನ್ಮೇಲೆ ನನ್ನ ಆಟ ಶುರು ಮಾಡ್ತೀನಿ’ ಎಂದು ಹೇಳುವ ಶಮಂತ್​ ಈವರೆಗೂ ಅಸಲಿ ಆಟ ಶುರು ಮಾಡಿಲ್ಲ. ಎರಡನೇ ವಾರ ಕಳಪೆ ಹಣೆಪಟ್ಟಿಯಿಂದ ಅವರು ಜೈಲು ಶಿಕ್ಷೆ ಕೂಡ ಅನುಭವಿಸಿದ್ದರು. ಮುಂದೆ ಏನು ಮಾಡುತ್ತಾರೋ ಕಾದು ನೋಡಬೇಕು.

ಇದನ್ನೂ ಓದಿ: BBK8: ಲ್ಯಾಗ್​ ಮಂಜು ಬಿಗ್​ ಬಾಸ್​ ವಿನ್ನರ್​; ಶಮಂತ್​ ಶೀಘ್ರವೇ ಔಟ್​! ಹೀಗೆ ಭವಿಷ್ಯ ನುಡಿದಿದ್ದು ಯಾರು?

‘ಶಮಂತ್​ಗೆ ಕ್ಯಾಪ್ಟನ್ಸಿ ಕೊಟ್ಟಿದ್ದ ನನಗೆ ನಾನೇ ಚಪ್ಪಲ್ಲಿಯಲ್ಲಿ ಹೊಡೆದುಕೊಳ್ಳಬೇಕು‘

Published On - 2:29 pm, Mon, 22 March 21

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ