‘ಕಂಡವರ ಮಕ್ಕಳ ಬಾವಿಗೆ ತಳ್ಳಿ ಆಟ ನೋಡಬೇಡಿ’; ಟ್ರೋಲ್ ಮಾಡಿದವರಿಗೆ ಪ್ರತಾಪ್ ಎಚ್ಚರಿಕೆ

ಬಿಗ್ ಬಾಸ್​ನಲ್ಲಿ ಪ್ರತಾಪ್ ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರ ಜೀವನದಲ್ಲಿ ಹಲವು ಘಟನೆಗಳು ನಡೆದಿವೆ. ಆ ಬಗ್ಗೆ ಅವರು ಬಿಗ್ ಬಾಸ್ ವೇದಿಕೆ ಮೇಲೆ ಹೇಳಿಕೊಂಡು ಕಣ್ಣೀರು ಹಾಕಿದ್ದಾರೆ.

‘ಕಂಡವರ ಮಕ್ಕಳ ಬಾವಿಗೆ ತಳ್ಳಿ ಆಟ ನೋಡಬೇಡಿ’; ಟ್ರೋಲ್ ಮಾಡಿದವರಿಗೆ ಪ್ರತಾಪ್ ಎಚ್ಚರಿಕೆ
ಡ್ರೋನ್ ಪ್ರತಾಪ್
Follow us
|

Updated on: Dec 01, 2023 | 11:22 AM

ಡ್ರೋನ್ ಪ್ರತಾಪ್ (Drone Prathap) ಅವರು ಬಿಗ್ ಬಾಸ್​ಗೆ ತೆರಳಿ ಸಾಕಷ್ಟು ಜನಪ್ರಿಯತೆ ಪಡೆದರು. ಅವರು ಹೊರಜಗತ್ತಿನಲ್ಲಿ ಸಾಕಷ್ಟು ಅವಮಾನ ಅನುಭವಿಸಿದ್ದರು. ಈಗ ಅದಕ್ಕೆಲ್ಲ ಬಿಗ್ ಬಾಸ್ ಮನೆಯಲ್ಲಿ ಉತ್ತರ ನೀಡಿದ್ದಾರೆ. ಅವರು ಈ ಮೊದಲು ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆ ಬಗ್ಗೆ ಬಿಗ್ ಬಾಸ್​ನಲ್ಲಿ ಮಾತನಾಡಿದ್ದರು. ಈಗ ಅವರು ಮತ್ತೊಮ್ಮೆ ದುಃಖ ತೋಡಿಕೊಂಡಿದ್ದಾರೆ. ‘ಬಿಗ್ ಬಾಸ್’ ಇದಕ್ಕೆ ವೇದಿಕೆ ಕಲ್ಪಿಸಿತ್ತು. ಈ ವೇದಿಕೆಯಲ್ಲಿ ಅವರು ಎಲ್ಲ ವಿಚಾರಗಳನ್ನು ಹೇಳಿಕೊಂಡಿದ್ದಾರೆ.

‘ನನ್ನ ಜೀವನದ ಒಂದು ಭಾಗದ ಕಥೆ ಎಲ್ಲರಿಗೂ ಗೊತ್ತಿದೆ. ನಾನು ಈ ದೇಶ ಬಿಟ್ಟು ಹೋಗಿದ್ದೆ. ಆಗ ನನ್ನ ಬಗ್ಗೆ ಹಲವು ಸ್ಟೋರಿ ಸೃಷ್ಟಿ ಮಾಡಲಾಯಿತು. ನಾನು ಎಲ್ಲರಿಂದ ದುಡ್ಡು ತೆಗೆದುಕೊಂಡಿದ್ದೇನೆ ಎಂದು ಸುದ್ದಿ ಹಬ್ಬಿಸಿದರು. ನಾನು ಒಂದೆರಡು ಮಾತನ್ನು ಬಾಯ್ತಪ್ಪಿ ಹೇಳಿದ್ದೇನೆ. ಅದನ್ನು ಒಪ್ಪಿಕೊಳ್ಳುತ್ತೇನೆ. ಆದರೆ, ಈ ಮಾತಿನಿಂದ ನಾನು ಸಾಕಷ್ಟು ಅನುಭವಿಸಿದ್ದೇನೆ. ಆ ಸಂದರ್ಭದಲ್ಲಿ ನನಗೆ ಪ್ಯಾನಿಕ್ ಅಟ್ಯಾಕ್ ಆಗುವ ಸಮಸ್ಯೆ ಆರಂಭ ಆಯಿತು’ ಎಂದಿದ್ದಾರೆ ಪ್ರತಾಪ್.

‘ನನಗೆ ಕೊವಿಡ್ ಆಯಿತು. ಕ್ವಾರಂಟೈನ್ ಸೀಲ್ ಹಾಕಿದ್ದರು. ಕ್ವಾರಂಟೈನ್ ಅವಧಿ ಮುಗಿಸಿ ಚಿಕ್ಕಮಗಳೂರಿಗೆ ಹೋದೆ. ಆ ಬಳಿಕ ಜನರು ಸುಳ್ಳು ಸುದ್ದಿ ಹಬ್ಬಿಸಿದರು. ನಾನು ಕ್ವಾರಂಟೈನ್ ಆಗಿಲ್ಲ ಎಂದು ಠಾಣೆಗೆ ಕರೆದುಕೊಂಡು ಹೋಗಲಾಯಿತು. ನನ್ನನ್ನು ಜೈಲಿನಲ್ಲಿ ಇರಿಸಿದರು. ಪ್ರತಾಪ್ ವಿರದ್ಧ ಕಂಡಲ್ಲಿ ಗುಂಡು ಆದೇಶ ಬಂದಿದೆ ಎಂದು ಸುದ್ದಿ ಹಬ್ಬಿಸಲಾಯಿತು. ಇವನು ಸುಳ್ಳ, ಕಳ್ಳ ಎಂದೆಲ್ಲ ಊರವರು ಹೇಳೋಕೆ ಶುರು ಮಾಡಿದರು’ ಎಂದು ದುಃಖ ತೋಡಿಕೊಂಡಿದ್ದಾರೆ ಪ್ರತಾಪ್.

ಇದನ್ನೂ ಓದಿ: ಮನೆಯವರ ಎಲ್ಲರ ಆಯ್ಕೆಯೂ ಒಬ್ಬರೇ​; ಡ್ರೋನ್ ಪ್ರತಾಪ್​ಗೆ ಕಳಪೆ ಪಟ್ಟ

‘ನನಗೆ ಎಲ್ಲರೂ ಕೊಡಬಾರದ ಹಿಂಸೆ ಕೊಟ್ಟರು. ತಂಗಿನ ಯಾರು ಮದುವೆ ಆಗುತ್ತಾರೆ ನೋಡ್ತೀವಿ ಎಂದು ಚಾಲೆಂಜ್ ಮಾಡಿದರು. ನಿಮ್ಮಮ್ಮ ಹುಚ್ಚಿತರ ರೋಡ್​ನಲ್ಲಿ ಅಲೆಯುವಂತೆ ಮಾಡುತ್ತೇವೆ ಎಂದರು. ನಾನು ಮಾನಸಿಕ ರೋಗಿ ಎಂದು ಬಿಂಬಿಸುವ ಹುನ್ನಾರ ನಡೆಯಿತು. ಎಲ್ಲಕಡೆ ಪ್ರೀತಿ ಮಾಡುವವರು ಇದ್ದೇ ಇದ್ದಾರೆ. ಈ ವೇದಿಕೆಗೆ ಬರಬಾರದು ಎಂದುಕೊಂಡಿದ್ದೆ. ನಾನು ತೆಗೆದುಕೊಂಡ ನಿರ್ಧಾರದಿಂದ ನನಗೆ ಬೂಸ್ಟ್ ಸಿಕ್ಕಿದೆ. ದಯವಿಟ್ಟು ನಿಮ್ಮ ಮಕ್ಕಳ ಬಾವಿಗೆ ತಳ್ಳಿ, ಕಂಡವರ ಮನೆಯವರ ಮಕ್ಕಳನ್ನು ತಳ್ಳಿ ಆಟ ನೋಡಬೇಡಿ’ ಎಂದು ಪ್ರತಾಪ್ ಮನವಿ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ