AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Day 1: ಬ್ರೋ ಗೌಡಗೆ ದಿವ್ಯಾ ಸುರೇಶ್ ಮೇಲೆ ಪ್ರೀತಿ?; ಬಿಗ್​ ಬಾಸ್​ ಮನೆಯಲ್ಲಿ ತ್ರಿಕೋನ ಪ್ರೇಮ ಕಥೆ!

ಶಮಂತ್​ ಅಲಿಯಾಸ್​ ಬ್ರೋ ಗೌಡ ಪ್ರೀತಿ ವಿಚಾರ ಹರಿಬಿಟ್ಟಿದ್ದರು. ಗೀತಾ ಹಾಗೂ ನಿರ್ಮಾಲಾ ಜತೆ ಸುದ್ದಿ ಹೇಳುವಾಗ ಮಾತನಾಡಿದ್ದ ಬ್ರೋ ಗೌಡ, ತಾವು ಬಿಗ್​ ಬಾಸ್​ ಮನೆಯಲ್ಲಿ ಒಬ್ಬರನ್ನು ಪ್ರೀತಿ ಮಾಡುತ್ತಿದ್ದೇವೆ ಎಂದರು.

Bigg Boss Kannada Day 1: ಬ್ರೋ ಗೌಡಗೆ ದಿವ್ಯಾ ಸುರೇಶ್ ಮೇಲೆ ಪ್ರೀತಿ?; ಬಿಗ್​ ಬಾಸ್​ ಮನೆಯಲ್ಲಿ ತ್ರಿಕೋನ ಪ್ರೇಮ ಕಥೆ!
ರಾಜೇಶ್ ದುಗ್ಗುಮನೆ
|

Updated on:Mar 02, 2021 | 3:46 PM

Share

ಬಿಗ್​ ಬಾಸ್ ಮನೆಯಲ್ಲಿ ಪ್ರೇಮ ಕಥೆಗಳಿಗೇನೂ ಬರಗಾಲ ಇರುವುದಿಲ್ಲ. ಪ್ರತಿ ಸೀಸನ್​ನಲ್ಲೂ ಒಂದೊಂದು ಲವ್​ ಸ್ಟೋರಿ ಹುಟ್ಟಿಕೊಳ್ಳುತ್ತದೆ. ಕೆಲವು ಅರ್ಧಕ್ಕೆ ನಿಂತರೆ ಇನ್ನೂ ಕೆಲವು ಮದುವೆಯಲ್ಲಿ ಪೂರ್ಣಗೊಂಡಿವೆ. ಈ ಬಾರಿಯ ಬಿಗ್​ ಬಾಸ್​ ಮನೆಯಲ್ಲಿ ತ್ರಿಕೋನ ಪ್ರೇಮ ಸರಣಿ ಹುಟ್ಟಿಕೊಳ್ಳುವ ಎಲ್ಲಾ ಲಕ್ಷಣ ಗೋಚರವಾಗಿದೆ. ಇದಕ್ಕೆಲ್ಲ ಕೇಂದ್ರಬಿಂದು ದಿವ್ಯಾ ಸುರೇಶ್​! ಮೊದಲನೇ ದಿನ ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದವು. ದಿವ್ಯಾ ಸುರೇಶ್​ ಬಟ್ಟೆ ಮಡಚುವಾಗ ತೆರಳಿದ್ದ ಮಂಜು, ನೇರವಾಗಿ ಫ್ಲರ್ಟ್​ ಮಾಡಿದ್ದರು. ನಿಮಗೋಸ್ಕರ ಏನು ಬೇಕಾದರೂ ಮಾಡಲು ಸಿದ್ಧನಿದ್ದೇನೆ ಎಂದು ಹೇಳಿದ್ದರು. ಇಬ್ಬರೂ ಅನೇಕ ಬಾರಿ ತುಂಬಾನೇ ಕ್ಲೋಸ್​ ಆಗಿ ಕಾಣಿಸಿಕೊಂಡಿದ್ದರಿಂದ, ಇಬ್ಬರ ನಡುವೆ ಏನೋ ನಡೆಯುತ್ತಿದೆ ಎನ್ನುವ ಗುಸುಗುಸು ಹರಿದಾಡಿತ್ತು.

ಇದಾದ ಬೆನ್ನಲ್ಲೇ ರಾತ್ರಿ, ಶಮಂತ್​ ಅಲಿಯಾಸ್​ ಬ್ರೋ ಗೌಡ ಪ್ರೀತಿ ಹುಟ್ಟಿರುವ ವಿಚಾರ ಬಹಿರಂಗ ಮಾಡಿದ್ದರು. ಗೀತಾ ಹಾಗೂ ನಿರ್ಮಾಲಾ ಜತೆ ಸುದ್ದಿ ಹೇಳುವಾಗ ಮಾತನಾಡಿದ್ದ ಬ್ರೋ ಗೌಡ, ತಾವು ಬಿಗ್​ ಬಾಸ್​ ಮನೆಯಲ್ಲಿ ಒಬ್ಬರನ್ನು ಪ್ರೀತಿ ಮಾಡುತ್ತಿದ್ದೇವೆ ಎಂದರು. ಇದಕ್ಕೆ ಉತ್ತರಿಸಿದ್ದ ನಿರ್ಮಲಾ, ಈ ಮನೆಯಲ್ಲಿ ಬೆಳ್ಳಗೆ ಚೆನ್ನಾಗಿ ಇರುವವರು ಮೂವರೇ. ಧನುಶ್ರೀ ಮತ್ತು ಇಬ್ಬರು ಚೈತ್ರಾ ಎಂದರು.

ಬ್ರೋ ಗೌಡ, ಧನುಶ್ರೀ ನನಗೆ ಮೊದಲ ದಿನವೇ ಅಣ್ಣಾ ಎಂದಿದ್ದಾರೆ ಎಂದು ಬೇಸರ ಹೊರ ಹಾಕಿದರು. ಆಗ ನಿರ್ಮಲಾ, ಹಾಗಿದ್ರೆ ಉಳಿದುಕೊಂಡವರು ಈಗ ದಿವ್ಯಾ ಸುರೇಶ್​, ದಿವ್ಯಾ ಉರುಡಗ ಮಾತ್ರ. ಅವರಲ್ಲಿ ಯಾರು ಹೇಳು ಎಂದು ಎಷ್ಟೇ ಬೇಡಿಕೊಂಡರೂ ಬ್ರೋ ಗೌಡ ಉತ್ತರ ನೀಡಲಿಲ್ಲ. ಒಂದೊಮ್ಮೆ, ಬ್ರೋ ಗೌಡನಿಗೆ ಲವ್​ ಆಗಿದ್ದು ಚೈತ್ರಾ ಸುರೇಶ್​ ಮೇಲೆ ಆದರೆ, ಬಿಗ್ ಬಾಸ್​ ಮನೆಯಲ್ಲಿ ತ್ರಿಕೋನ ಪ್ರೀತಿ ಕಥೆ ನಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಇದನ್ನೂ ಓದಿ: Bigg Boss Kannada Day 1: ಬಿಗ್​ ಬಾಸ್​ ಮನೆಯಲ್ಲಿ ಧನುಶ್ರೀ ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸಿದ ನಿರ್ಮಲಾ

Published On - 3:43 pm, Tue, 2 March 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು