AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Day 1: ಬಿಗ್​ ಬಾಸ್​ ಮನೆಯಲ್ಲಿ ಧನುಶ್ರೀ ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸಿದ ನಿರ್ಮಲಾ

ಧನುಶ್ರೀ ಈ ಸ್ಪರ್ಧೆಯಲ್ಲಿ ಅಷ್ಟಾಗಿ ಆ್ಯಕ್ಟಿವ್​ ಆಗಿ ನಡೆದುಕೊಂಡಿರಲಿಲ್ಲ. ಹೀಗಾಗಿ, ತಂಡ ಸೋಲಲು ಧನುಶ್ರೀಯೇ ಕಾರಣ ಎನ್ನುವ ಮಾತು ಕೇಳಿ ಬಂದಿತ್ತು.

Bigg Boss Kannada Day 1: ಬಿಗ್​ ಬಾಸ್​ ಮನೆಯಲ್ಲಿ ಧನುಶ್ರೀ ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸಿದ ನಿರ್ಮಲಾ
ಧನುಶ್ರೀ-ನಿರ್ಮಲಾ
ರಾಜೇಶ್ ದುಗ್ಗುಮನೆ
| Edited By: |

Updated on: Mar 02, 2021 | 3:12 PM

Share

ಬಿಗ್​ ಬಾಸ್​ ಮೊದಲನೇ ದಿನವೇ ಸಾಕಷ್ಟು ಹೈಡ್ರಾಮಾಗಳು ನಡೆದಿವೆ. ಶುಭಾ ಪೂಂಜಾ ಕಣ್ಣೀರಿಟ್ಟರು. ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗರನ್ನು ಎತ್ತಿಕೊಂಡು ಹೋಗಿದ್ದ ವಿಚಾರ ಕೂಡ ಚರ್ಚೆಗೆ ಕಾರಣವಾಗಿತ್ತು. ಈ ಮಧ್ಯೆ, ಧನುಶ್ರೀ ಮಾಡಿದ ತಪ್ಪಿಗೆ ನಿರ್ಮಲಾ ಶಿಕ್ಷೆ ಅನುಭವಿಸಿದ್ದಾರೆ. ಅಷ್ಟಕ್ಕೂ ಬಿಗ್​ ಬಾಸ್​ ಮನೆಯಲ್ಲಿ ಮೊದಲ ದಿನ ಆಗಿದ್ದೇನು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ಬಿಗ್​ ಬಾಸ್​ ಮನೆಯಲ್ಲಿ ಮೊದಲ ದಿನ 17 ಸದಸ್ಯರು ಮನೆಯೊಳಗೆ ಕೂತಿದ್ದರು. ಈ ವೇಳೆ ಪ್ರತಿಯೊಬ್ಬರಿಗೂ ಒಂದೊಂದು ಬಾಲ್​ಗಳನ್ನು ನೀಡಲಾಯಿತು. ಹೀಗೆ ನೀಡಿದ ಬಾಲ್​ಗಳಲ್ಲಿ ನೀಲಿ, ಕೆಂಪು ಹಸಿರು ಹಾಗೂ ಹಳದಿ ಬಣ್ಣದ ಚಾವಿ ಇತ್ತು. ಬಣ್ಣದ ಆಧಾರದ ಮೇಳೆ ನಾಲ್ಕು ಸದಸ್ಯರ ಒಂದು ಟೀಂ ಮಾಡಲಾಯಿತು. ಶಮಂತ್​ ಅಲಿಯಾಸ್​ ಬ್ರೋ ಗೌಡ ಲೀಡರ್​ ಆದರು. ಈ ವೇಳೆ ಟಾಸ್ಕ್​ ಒಂದನ್ನು ಬಿಗ್​ ಬಾಸ್​ ನೀಡಿತ್ತು.

ಮೂರು ಕಡೆಗಳಲ್ಲಿ ಹಗ್ಗ ಇತ್ತು. ಹಗ್ಗದ ತುದಿ ಸೇರುವ ಜಾಗದಲ್ಲಿ ಒಂದು ಪ್ಲೇಟ್​ ರೀತಿಯ ವಸ್ತು ಇತ್ತು. ಪ್ಲೇಟ್​ ಮೇಲೆ ಸ್ಪಂಜ್​ ಮಾದರಿಯ ಆಯಾತಾಕರದ ವಸ್ತುಗಳನ್ನು ಜೋಡಿಸುತ್ತಾ ಬರಬೇಕು. ಹೀಗೆ ಜೋಡಿಸುವ ಸ್ಪರ್ಧೆಯಲ್ಲಿ, ಶುಭಾ ಪೂಂಜಾ, ನಿರ್ಮಲಾ, ಧನುಶ್ರೀ, ನಿಧಿ ಇದ್ದ ತಂಡ ಸೋತಿತ್ತು.

ಧನುಶ್ರೀ ಈ ಸ್ಪರ್ಧೆಯಲ್ಲಿ ಅಷ್ಟಾಗಿ ಆ್ಯಕ್ಟಿವ್​ ಆಗಿ ನಡೆದುಕೊಂಡಿರಲಿಲ್ಲ. ಹೀಗಾಗಿ, ತಂಡ ಸೋಲಲು ಧನುಶ್ರೀಯೇ ಕಾರಣ ಎನ್ನುವ ಮಾತು ಕೇಳಿ ಬಂದಿತ್ತು. ಬಿಗ್​ ಬಾಸ್​ ಆದೇಶದಂತೆ ಸೋಲಿನ ಹೊಣೆಯನ್ನು ತಂಡದ ಓರ್ವ ಸದಸ್ಯ ಮಾತ್ರ ಹೊತ್ತುಕೊಳ್ಳಬೇಕಿತ್ತು. ಆಗ ನಿರ್ಮಲಾ ಸೋಲಿನ ಹೊಣೆಯನ್ನು ತಾವೇ ಹೊತ್ತಿಕೊಳ್ಳುತ್ತೇವೆ ಎಂದರು. ಈ ಕಾರಣಕ್ಕೆ, ಈ ವಾರದ ಎಲಿಮಿನೇಷನ್​ಗೆ ನಿರ್ಮಲಾ ನೇರವಾಗಿ ನಾಮಿನೇಟ್​ ಆದರು.

ಈ ವಾರ ನಾಮಿನೇಟ್​ ಆದವರ ಪಟ್ಟಿ.. ಈ ವಾರದ ಎಲಿಮಿನೇಷನ್​ಗೆ ಒಟ್ಟು ಐದು ಜನರು ನಾಮಿನೇಷನ್​ ಆಗಿದ್ದಾರೆ. ನಿರ್ಮಲಾ ನೇರವಾಗಿ ನಾಮಿನೇಟ್​ ಆದರೆ, ಧನುಶ್ರೀ, ನಿಧಿ ಸುಬ್ಬಯ್ಯ, ಪ್ರಶಾಂತ್​ ಸಂಬರಗಿ ಹಾಗೂ ಮಂಜು ಪಾವಗಡ ಅವರನ್ನು ಮನೆಯ ಸದಸ್ಯರು ನಾಮಿನೇಟ್​ ಮಾಡಿದ್ದರು. ಶಂಕರ್​ ಅಶ್ವತ್ಥ್​ ಅವರು ಕೂಡ ನಾಮಿನೇಟ್ ಆಗಿದ್ದರು, ಆದರೆ ಮನೆಯ ಲೀಡರ್​ ಬ್ರೋ ಗೌಡ ಅವರಿಗೆ ಇದ್ದ ಅಧಿಕಾರದಿಂದ ಶಂಕರ್​ ಅವರನ್ನು ಉಳಿಸಿದರು.

ಇದನ್ನೂ ಓದಿ: Bigg Boss Kannada Day 1: ಹ್ಯಾಂಡ್ ಶೇಕ್ ಮಾಡಲು ಬಂದ ದಿವ್ಯಾರನ್ನು ಅನಾಮತ್ತು ಎತ್ತಿಕೊಂಡ ಪ್ರಶಾಂತ್ ಸಂಬರಗಿ

Follow Us
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!