AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Day 1: ಹ್ಯಾಂಡ್ ಶೇಕ್ ಮಾಡಲು ಬಂದ ದಿವ್ಯಾರನ್ನು ಅನಾಮತ್ತು ಎತ್ತಿಕೊಂಡ ಪ್ರಶಾಂತ್ ಸಂಬರಗಿ

ಬಿಗ್​ ಬಾಸ್​ ಮನೆ ಒಳಗೆ ಸೇರಿದ ನಂತರ ಇಬ್ಬರ ನಡುವೆ ಆತ್ಮೀಯತೆ ಬೆಳೆಯುವುದು ಹೊಸದೇನಲ್ಲ. ಈ ಮೊದಲು ಮನೆ ಒಳಗೆ ಹೋದ ಅನೇಕ ನಡುವೆ ಪ್ರೀತಿ ಬೆಳೆದಿದ್ದಿದೆ.

Bigg Boss Kannada Day 1: ಹ್ಯಾಂಡ್ ಶೇಕ್ ಮಾಡಲು ಬಂದ ದಿವ್ಯಾರನ್ನು ಅನಾಮತ್ತು ಎತ್ತಿಕೊಂಡ ಪ್ರಶಾಂತ್ ಸಂಬರಗಿ
ಪ್ರಶಾಂತ್​ ಸಂಬರಗಿ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 02, 2021 | 2:09 PM

ಈ ಬಾರಿ ಬಿಗ್​ ಬಾಸ್​ ಮನೆ ಸೇರಿ 17 ಸದಸ್ಯರ ಪೈಕಿ ಒಬ್ಬರಿಗಿಂತ ಒಬ್ಬರು ಭಿನ್ನವಾಗಿದ್ದಾರೆ. ಕೆಲವರು ತುಂಬಾನೇ ಸೈಲೆಂಟ್​, ಇನ್ನೂ ಕೆಲವರು ತುಂಬಾನೇ ವೈಲೆಂಟ್​, ಕೆಲವರು ತುಂಬಾನೇ ಭಾವುಕರಾದರೆ, ಕೆಲವರು ತುಂಬಾನೇ ಸೀರಿಯಸ್​. ಹೀಗಾಗಿ, ಮೊದಲ ದಿನವೇ ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಡ್ರಾಮಾಗಳು ನಡೆದಿವೆ. ಇದರಲ್ಲಿ ಪ್ರಶಾಂತ್​ ಸಂಬರಗಿ ನಡೆದುಕೊಂಡ ರೀತಿ ಕೂಡ ಒಂದು. ಇದು ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಬಿಗ್​ ಬಾಸ್​ ಮನೆ ಒಳಗೆ ಸೇರಿದ ನಂತರ ಇಬ್ಬರ ನಡುವೆ ಆತ್ಮೀಯತೆ ಬೆಳೆಯುವುದು ಹೊಸದೇನಲ್ಲ. ಈ ಮೊದಲು ಮನೆ ಒಳಗೆ ಹೋದ ಅನೇಕ ನಡುವೆ ಪ್ರೀತಿ ಬೆಳೆದಿದ್ದಿದೆ. ಅದೇ ರೀತಿ ಈಗ ಪ್ರಶಾಂತ್​ ಸಂಬರಗಿ ಹಾಗೂ ದಿವ್ಯಾ ಜತೆ ಆತ್ಮೀಯತೆ ಬೆಳೆಯುತ್ತಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ನಿನ್ನೆ ಪ್ರಶಾಂತ್​ ಅವರಿಗೆ ದಿವ್ಯಾ ಉರುಡುಗ ಶೇಕ್​ ಹ್ಯಾಂಡ್​ ಮಾಡಲು ಬಂದಿದ್ದರು. ಈ ವೇಳೆ ದಿವ್ಯಾರನ್ನು ಪ್ರಶಾಂತ್​ ಎತ್ತಿಕೊಂಡು ಹೋಗಿದ್ದಾರೆ. ಈ ಬಗ್ಗೆ ದಿವ್ಯಾ ಸ್ವಲ್ಪ ಗಲಿಬಿಲಿಗೊಂಡಂತೆ ಕಂಡರು. ನಂತರ ಇಬ್ಬರೂ ಮನೆ ಒಳಗೆ ಕೂತು ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಹೀಗಾಗಿ, ಇಬ್ಬರೂ ತುಂಬಾನೇ ಆತ್ಮೀಯರಾಗುತ್ತಿದ್ದಾರೆ ಎನ್ನುವ ಮಾತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪ್ರೇಕ್ಷಕರ ಗಮನವನ್ನು ತಮ್ಮತ್ತ ಸೆಳೆದುಕೊಳ್ಳಲು ಸಂಬರಗಿ ಈ ರೀತಿ ಮಾಡುತ್ತಿದ್ದಾರೆ ಎನ್ನುವ ಮಾತು ಕೂಡ ಕೇಳಿ ಬಂದಿದೆ.

ಯಾರು ಈ ಪ್ರಶಾಂತ್​ ಸಂಬರಗಿ? ಈ ಬಾರಿಯ ಕನ್ನಡ ಬಿಗ್​ಬಾಸ್​ಗೆ ಹೋದ ಸೆಲೆಬ್ರೆಟಿಸ್​ಗಳ ಪಟ್ಟಿಯಲ್ಲಿ ಎದ್ದು ಕಾಣುತ್ತಿರುವ ಹೆಸರೆಂದರೆ ಅದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ. ಏಕೆಂದರೆ ಸಾಮಾಜಿಕ ಜಾಲತಾಣದಲ್ಲಿ ಒಂದಲ್ಲ ಒಂದು ವಿಚಾರದ ಬಗ್ಗೆ ವಿವಾದ ಹುಟ್ಟುಹಾಕಿ ಸದಾ ಸುದ್ದಿಯಾಗುವ ಸಂಬರಗಿ, ಈಗ ಬಿಗ್​ಬಾಸ್ ಮನೆಗೆ ಹೋಗಿ ಮತ್ತ್ಯಾವ ವಿವಾದ ಸೃಷ್ಟಿಸುತ್ತಾರೆ ಎಂಬುದನ್ನು ನೋಡಲು ವೀಕ್ಷಕರು ಕಾದು ಕುಳಿತ್ತಿದ್ದಾರೆ. ಮೂಲತಃ ಬೆಳಗಾವಿಯವರಾಗಿರುವ ಸಂಬರಗಿ, ಬೆಳೆದಿದ್ದು ಬೆಂಗಳೂರಿನಲ್ಲಿ. ಪ್ರಶಾಂತ್ ಉದ್ಯಮಿ ಆಗಿದ್ದು, ಅರ್ಜುನ್ ಸರ್ಜಾ ಅವರಿಗೆ ಆಪ್ತರಾಗಿದ್ದಾರೆ. ಅಲ್ಲದೆ ಡಬ್ಬಿಂಗ್ ಪರ ಹೋರಾಡಿದವರಲ್ಲಿ ಪ್ರಶಾಂತ್ ಕೂಡ ಪ್ರಮುಖರು. ಪ್ರಶಾಂತ್ ಸಂಬರಗಿ ಬಿಗ್ ಬಾಸ್ ಸೀಸನ್ 8ರ 14ನೇ ಅಭ್ಯರ್ಥಿಯಾಗಿ ಮನೆ ಪ್ರವೇಶಿಸಿದ್ದರು.

 ಇದನ್ನೂ ಓದಿ: Prashanth Sambargi Profile: ಸದಾ ವಿವಾದಗಳ ಬೆನ್ನತ್ತುವ ಪ್ರಶಾಂತ್ ಸಂಬರಗಿ ಈ ಬಾರಿಯ ಬಿಗ್​ಬಾಸ್​ ಸ್ಪರ್ಧಿ

ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ