AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚೂಡಿದಾರ್​ ಹಾಕ್ಕೊಂಡು ಅಡುಗೆನೂ ಮಾಡ್ತೀನಿ; ಚಡ್ಡಿ ಹಾಕ್ಕೊಂಡು ನಿಮ್ಮಪ್ಪನ ಗಾಡಿನೂ ಓಡಿಸ್ತೀನಿ ಅಂದಿದ್ದೆ’: ದಿವ್ಯಾ ಸುರೇಶ್​

ನಾನು ರನ್ನಿಂಗ್​ನಲ್ಲಿ ಓಡಿ ಗೆದ್ದಿದ್ದೆ. ಕಾಲೇಜಿನಲ್ಲಿ ಇದು ನಾನು ಗೆದ್ದ ಮೊದಲ ಪ್ರಶಸ್ತಿ. ಈ ಪ್ರಶಸ್ತಿ ಮೂಲಕ ನಾನು ಎಲ್ಲರಿಗೂ ಏನು ಎನ್ನುವುದನ್ನು ಸಾಬೀತು ಮಾಡಿದ್ದೆ ಎಂದಿದ್ದಾರೆ ದಿವ್ಯಾ.

‘ಚೂಡಿದಾರ್​ ಹಾಕ್ಕೊಂಡು ಅಡುಗೆನೂ ಮಾಡ್ತೀನಿ; ಚಡ್ಡಿ ಹಾಕ್ಕೊಂಡು ನಿಮ್ಮಪ್ಪನ ಗಾಡಿನೂ ಓಡಿಸ್ತೀನಿ ಅಂದಿದ್ದೆ’: ದಿವ್ಯಾ ಸುರೇಶ್​
ದಿವ್ಯಾ ಸುರೇಶ್​
ರಾಜೇಶ್ ದುಗ್ಗುಮನೆ
| Edited By: |

Updated on:Mar 03, 2021 | 9:14 AM

Share

ದಿವ್ಯಾ ಸುರೇಶ್​ ಮಾಡೆಲ್. ಅವರು ಫೋಟೋಗಳಲ್ಲಿ ಸಖತ್​ ಮಾಡರ್ನ್​ ಆಗಿ ಕಾಣಿಸಿಕೊಂಡಿದ್ದಾರೆ. ಆದರೆ, ನಾಲ್ಕು ವರ್ಷಗಳ ಹಿಂದೆ ದಿವ್ಯಾ ಹೀಗಿರಲಿಲ್ಲವಂತೆ! ಅವರು ಕಾಲೇಜಿಗೆ ಚೂಡಿದಾರ್​ ಹಾಕಿಕೊಂಡು, ತಲೆಗೆ ಎಣ್ಣೆ ಹಾಕಿಕೊಂಡು ಹೋಗುತ್ತಿದ್ದರಂತೆ! ಈ ವೇಳೆ ಎಲ್ಲರೂ ದಿವ್ಯಾ ಅವರನ್ನು ಹೀಯಾಳಿಸುತ್ತಿದ್ದರಂತೆ. ಈ ಎಲ್ಲ ಹೀಯಾಳಿಕೆಗೆ ದಿವ್ಯಾ ಒಂದು ದಿನ ಖಡಕ್​ ಆಗಿಯೇ ಉತ್ತರ ನೀಡಿದ್ದರಂತೆ. ಕಾಲೇಜಿನಲ್ಲಿ ಸಿಕ್ಕ ಮೊದಲ ಪ್ರಶಸ್ತಿ ಇದು. ಪಿಯುಸಿ ಮುಗಿದ ಡಿಗ್ರಿಗೆ ಬಂದಾಗ ಮತ್ತೆ ಸ್ಪೋರ್ಟ್ಸ್​​​ ಬೇಡ ಎಂದುಕೊಂಡಿದ್ದೆ. ಎಣ್ಣೆ ಹಚ್ಚಿಕೊಂಡು ಬರುತ್ತಾಳೆ ಎಂದು ಹುಡುಗರು ನನ್ನನ್ನು ಹಿಯಾಳಿಸುತ್ತಿದ್ದರು. ಹೀಗೆ ಹೀಯಾಳಿಸುವವರಿಗೆ ಚೂಡಿದಾರ್​ ಹಾಕ್ಕೊಂದು ಅಡುಗೆನೂ ಮಾಡ್ತೀನಿ.. ಚಡ್ಡಿ ಹಾಕ್ಕೊಂಡು ನಿಮ್ಮಪ್ಪನ ಗಾಡೀನೂ ಓಡಸ್ತೀನಿ ಎನ್ನುವುದನ್ನು ಪ್ರೂವ್​ ಮಾಡಿದ್ದೆ ಎಂದಿದ್ದಾರೆ ದಿವ್ಯಾ. ನಾನು ರನ್ನಿಂಗ್​ನಲ್ಲಿ ಓಡಿ ಗೆದ್ದಿದ್ದೆ. ಕಾಲೇಜಿನಲ್ಲಿ ಇದು ನಾನು ಗೆದ್ದ ಮೊದಲ ಪ್ರಶಸ್ತಿ. ಈ ಪ್ರಶಸ್ತಿ ಮೂಲಕ ನಾನು ಎಲ್ಲರಿಗೂ ಏನು ಎನ್ನುವುದನ್ನು ಸಾಬೀತು ಮಾಡಿದ್ದೆ. ನಂತರ ಅವೇ ನನಗೆ ಫೇಸ್​ಬುಕ್​ನಲ್ಲಿ ಫ್ರೆಂಡ್​ ರಿಕ್ವೆಸ್ಟ್​ ಕಳುಹಿಸಿದ್ದರು ಎಂದು ಹೇಳಿಕೊಂಡಿದ್ದಾರೆ.

ನಿಧಿ ಹೇಳಿದ ಕೆಜಿಎಫ್​ ಕಥೆ: ಕೆಜೆಎಫ್​ ಸಿನಿಮಾ ತೆರೆಕಂಡ ನಂತರ ಯಶ್​ ಕೇವಲ ಸ್ಯಾಂಡಲ್​ವುಡ್​ ಸ್ಟಾರ್​ ಆಗಿ ಮಾತ್ರ ಉಳಿದಿಲ್ಲ. ಸ್ಯಾಂಡಲ್​ವುಡ್​ ಮಾತ್ರವಲ್ಲದೆ, ಟಾಲಿವುಡ್​, ಬಾಲಿವುಡ್​ನಲ್ಲಿ ಯಶ್​ ಅವರದ್ದೇ ಹವಾ. ಯಶ್​ ಧಾರಾವಾಹಿ ಮೂಲಕ ಸಿನಿಮಾಗೆ ಬಂದಿದ್ದರು. ಇದಕ್ಕೂ ಮೊದಲು ಯಶ್​ ಸಾಮಾನ್ಯ ವ್ಯಕ್ತಿಯಾಗಿದ್ದರು. ಅಚ್ಚರಿ ಎಂದರೆ, ನಿಧಿ ಸುಬ್ಬಯ್ಯ ಮನೆ ಒಳಗೆ ಯಶ್​ ಮಾಲೆ ಪಟಾಕಿ (ಸರ ಪಟಾಕಿ) ಎಸೆದಿದ್ದರಂತೆ!. ಈ ಅಚ್ಚರಿಯ ವಿಚಾರವನ್ನು ನಿಧಿ ಸುಬ್ಬಯ್ಯ ಬಿಗ್​ ಬಾಸ್​ ಮನೆಯಲ್ಲಿ ಹೊರ ಹಾಕಿದ್ದಾರೆ. ಬಿಗ್​ ಬಾಸ್​ 8ರ ಎರಡನೇ ದಿನದ ರಾತ್ರಿ ನಿಧಿ ಮಾತನಾಡುತ್ತಾ, ನಾನೂ ಮೈಸೂರಲ್ಲಿ ಕಾಲೇಜು ಓದುತ್ತಿದ್ದ ದಿನಗಳು. ರೋಸ್​ ಡೇ ದಿನ ನನಗೆ 50-60 ರೋಸ್​ಗಳು ಬರುತ್ತಿದ್ದವು. ನಾನು ಈ ಬಗ್ಗೆ ಅಸಮಾಧಾನ ಹೊರ ಹಾಕುತ್ತಿದ್ದೆ. ಆದರೆ, ಒಂದು ದಿನ ನನ್ನ ಬಗ್ಗೆ ಯಾರು ಏನು ಅಂದ್ರೋ ಏನೋ ಒಂದು ಅವಘಡ ನಡೆದು ಹೋಗಿತ್ತು.

ನಾನು ಅಜ್ಜಿಮನೆಯಲ್ಲಿ ಉಳಿದುಕೊಳ್ಳುತ್ತಿದ್ದೆ. ಇವಳಿಗೆ ಪಾಠ ಕಲಿಸಬೇಕು ಎನ್ನುವ ಕಾರಣಕ್ಕೆ ಯಾರೋ ನನ್ನ ಬಗ್ಗೆ ಪಿಟ್ಟಿಂಗ್​ ಇಟ್ಟಿದ್ದರು ಅನಿಸುತ್ತದೆ. ಅಜ್ಜಿ ಮನೆ ಬಳಿ ಅಂದು 4 ಬೈಕ್​ನಲ್ಲಿ 8 ಜನರು ಬಂದಿದ್ದರು. ನಾನು ಮಲಗುವ ಕೋಣೆ ಎಂದುಕೊಂಡು ಮಾಲೆ ಪಟಾಕಿಯನ್ನು ಹಚ್ಚಿ ಎಸೆದಿದ್ದರು. ಆದರೆ, ಅದು ಅಜ್ಜಿಯ ಕೋಣೆ ಆಗಿತ್ತು. ಅಜ್ಜಿ ಕೋಣೆಯ ಕರ್ಟನ್​ ಎಲ್ಲವೂ ಸುಟ್ಟಿ ಹೋಗಿತ್ತು. ಆದರೆ, ಪಟಾಕೆ ಎಸೆದವರು ಯಾರು ಎನ್ನುವುದು ಗೊತ್ತೇ ಆಗಿರಲಿಲ್ಲ ಎಂದರು ನಿಧಿ. ಓದು ಮುಗಿದ ಮೇಲೆ ನಾನು ನಟನೆಗೆ ಬಂದೆ. ಒಂದು ದಿನ ಒಂದು ವ್ಯಕ್ತಿ ಬಂದು ನಿನ್ನ ಬಳಿ ಕ್ಷಮೆ ಕೇಳಬೇಕು ಎಂದರು. ನಾನು ಅಚ್ಚರಿಗೊಂಡೆ. ಏಕೆ ಕ್ಷಮೆ ಎಂದು ಕೇಳಿದೆ. ಅವರು, ಮಾಲೆ ಪಟಾಕಿ ಘಟನೆ ಹೇಳಿದರು. ಅವರು ಬೇರಾರೂ ಅಲ್ಲ. ಯಶ್​ ಎಂದು ನಿಧಿ ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ.

Bigg Boss Day 2: ನಿಧಿ ಸುಬ್ಬಯ್ಯ ಮನೆ ಒಳಗೆ ಮಾಲೆ ಪಟಾಕಿ ಎಸೆದಿದ್ರಂತೆ ಯಶ್​! ಬಿಗ್​ ಬಾಸ್​ ಮನೆಯಲ್ಲಿ ಹೊರ ಬಿತ್ತು ಅಚ್ಚರಿ ವಿಚಾರ

Published On - 10:52 pm, Tue, 2 March 21

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು