AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Day 3: ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದ ಪ್ರಶಾಂತ್​ ಸಂಬರಗಿ

ಧನುಶ್ರೀ ಸ್ನಾನ ಮುಗಿಸಿ ಹೊರ ಬಂದಿದ್ದರು. ಧನುಶ್ರೀ ನೋಡಿ ಅಚ್ಚರಿ ಹೊರ ಹಾಕಿದ್ದರು ಮಂಜು! ಏಕೆಂದರೆ, ಧನುಶ್ರೀ ಮೇಕಪ್​ ಹಾಕಿಕೊಂಡಿದ್ದರು!

Bigg Boss Kannada Day 3: ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದ ಪ್ರಶಾಂತ್​ ಸಂಬರಗಿ
ಧನುಶ್ರೀ- ಪ್ರಶಾಂತ್​
ರಾಜೇಶ್ ದುಗ್ಗುಮನೆ
|

Updated on: Mar 03, 2021 | 10:03 PM

Share

ಬಿಗ್​ ಬಾಸ್​ ಮನೆಗೆ ಬಂದ ನಂತರ ಧನುಶ್ರೀ ಮೇಕಪ್​ ಇಲ್ಲದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು. ಇದನ್ನು ನೋಡಿದ ಅಭಿಮಾನಿಗಳು, ಈ ಧನುಶ್ರೀ ಅದೆಷ್ಟು ಮೇಕಪ್​ ಮಾಡಿಕೊಳ್ಳುತ್ತಿದ್ರಪ್ಪ. ಅವರ ನಿಜವಾದ ಬಣ್ಣ ಈಗ ಬಯಲಾಗಿದೆ ಎಂದು ಅಚ್ಚರಿ ವ್ಯಕ್ತಪಡಿಸಿದ್ದರು. ಈಗ ಈ ವಿಚಾರ ಮನೆ ಒಳಗೂ ಚರ್ಚೆ ಆಗಿದೆ. ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದು ನಕ್ಕಿದ್ದಾರೆ. ಬಿಗ್​ ಬಾಸ್​ ಮೂರನೇ ದಿನದಲ್ಲಿ ಬೆಳಗ್ಗೆ 8 ಗಂಟೆಗೆ ಸಾಂಗ್​ ಪ್ರಸಾರವಾಗಿತ್ತು. ಈ ವೇಳೆ ಮಂಜು ಹೊರಗೆ ಹಲ್ಲು ಉಜ್ಜುತ್ತಿದ್ದರು. ಆಗ ಧನುಶ್ರೀ ಸ್ನಾನ ಮುಗಿಸಿ ಹೊರ ಬಂದಿದ್ದರು. ಧನುಶ್ರೀ ನೋಡಿ ಅಚ್ಚರಿ ಹೊರ ಹಾಕಿದ್ದರು ಮಂಜು! ಏಕೆಂದರೆ, ಧನುಶ್ರೀ ಮೇಕಪ್​ ಹಾಕಿಕೊಂಡಿದ್ದರು!

ಸ್ನಾನದ ಮನೆಯಿಂದ ಮೇಕಪ್​ ಮಾಡಿಕೊಂಡು ಬಂದಿರೇ ಎಂದು ಧನುಶ್ರೀ ಅವರನ್ನು ಮಂಜು ಪ್ರಶ್ನೆ ಮಾಡಿದ್ದಾರೆ. ಆಗ ಧನುಶ್ರೀ, ಇಲ್ಲ, ನಾನು ಮೇಕಪ್​ ಮಾಡಿಕೊಂಡೇ ಸ್ನಾನ ಮಾಡೋಕೆ ಹೋಗಿದ್ದೆ ಎಂದಿದ್ದಾರೆ. ಇದನ್ನು ಕೇಳಿ ಮಂಜು ಶಾಕ್​ ಆಗಿದ್ದರು.

ಈ ವಿಚಾರದ ಬಗ್ಗೆ ಕೆಲ ನಿಮಿಷಗಳ ಕಾಲ ಚರ್ಚೆ ನಡೆದಿದೆ. ಆಗ ಮಧ್ಯೆ ಬಂದ ಪ್ರಶಾಂತ್​, ಆ ಮೇಕಪ್​ ತೆಗೆಯೋಕೆ ಏನಿಲ್ಲವೆಂದರೂ ಒಂದು ವರ್ಷ ಬೇಕು ಎಂದು ನಕ್ಕರು. ಇದನ್ನು ಕೇಳಿದ ಮನೆಯವರೆಲ್ಲರೂ ನಗೆಗಡಲಲ್ಲಿ ತೇಲಿದ್ದಾರೆ.

ಇದನ್ನೂ ಓದಿ: Bigg Boss Kannada : ಈ 5 ಸವಾಲುಗಳನ್ನು ಎದುರಿಸಿ ಯಶಸ್ವಿ ಆಗುತ್ತಾ ಈ ಬಾರಿಯ ಕನ್ನಡ ಬಿಗ್​ ಬಾಸ್​​?

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!