AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8: ಬಿಗ್​ ಬಾಸ್​ ಮೊದಲ ವಾರದಲ್ಲಿ ಹೊರ ಹೋಗೋದು ಶುಭಾ ಪೂಂಜಾ? ಮೂರನೇ ದಿನ ಹೊಸ ಟ್ವಿಸ್ಟ್​

ಈ ಬಾರಿಯ ಬಿಗ್​ ಬಾಸ್​ನಲ್ಲಿ ಎಲಿಮಿನೇಷನ್​ಗೆ ಮೊದಲ ದಿನ ನಾಲ್ಕು ಜನ ನಾಮಿನೇಟ್​ ಆಗಿದ್ದರು. ನಂತರ ಈ ನಾಮಿನೇಷನ್​ ತೂಗುಗತ್ತಿಯಿಂದ ತಪ್ಪಿಸಿಕೊಳ್ಳಲು ಬಿಗ್​ ಬಾಸ್​ ಅವಕಾಶ ನೀಡಿತ್ತು.

BBK8: ಬಿಗ್​ ಬಾಸ್​ ಮೊದಲ ವಾರದಲ್ಲಿ ಹೊರ ಹೋಗೋದು ಶುಭಾ ಪೂಂಜಾ? ಮೂರನೇ ದಿನ ಹೊಸ ಟ್ವಿಸ್ಟ್​
ಬಿಗ್​ ಬಾಸ್​ ಮನೆಯಲ್ಲಿ ಶುಭಾ
ರಾಜೇಶ್ ದುಗ್ಗುಮನೆ
|

Updated on:Mar 04, 2021 | 11:11 AM

Share

ಬಿಗ್​ ಬಾಸ್​ ಮನೆಯಲ್ಲಿ ಏನೂ ಬೇಕಾದರೂ ನಡೆಯಬಹುದು ಎನ್ನುವುದು ಪದೇ ಪದೇ ಸಾಬೀತಾಗುತ್ತಲೇ ಇದೆ. ಕನ್ನಡ ಬಿಗ್​ ಬಾಸ್​ ಮನೆಯಲ್ಲಿ ಮೂರನೇ ದಿನ ನಡೆದ ಘಟನೆ ಇದಕ್ಕೆ ತಾಜಾ ಉದಾಹರಣೆ. ಮೂರನೇ ದಿನದಲ್ಲಿ ಬಿಗ್ ಬಾಸ್​ ಮನೆಯಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆದವು. ಈ ಬಾರಿಯ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದ ನಿಧಿ ಸುಬ್ಬಯ್ಯ ಸೇಫ್​ ಆಗಿದ್ದು, ಶುಭಾ ಪೂಂಜಾ ನಾಮಿನೇಟ್​ ಆಗಿದ್ದಾರೆ! ಈ ಬಾರಿಯ ಬಿಗ್​ ಬಾಸ್​ನಲ್ಲಿ ಎಲಿಮಿನೇಷನ್​ಗೆ ಮೊದಲ ದಿನ ನಾಲ್ಕು ಜನ ನಾಮಿನೇಟ್​ ಆಗಿದ್ದರು. ನಂತರ ಈ ನಾಮಿನೇಷನ್​ ತೂಗುಗತ್ತಿಯಿಂದ ತಪ್ಪಿಸಿಕೊಳ್ಳಲು ಸ್ಪರ್ಧಿಗಳಿಗೆ ಅವಕಾಶ ನೀಡಲಾಯಿತು. ಅದೇನೆಂದರೆ, ಟಾಸ್ಕ್​ನಲ್ಲಿ ಪೈಪೋಟಿ ನೀಡಿ ತಮ್ಮ ಪ್ರತಿಸ್ಪರ್ಧಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ಟಾಸ್ಕ್​ನಲ್ಲಿ ಗೆದ್ದರೆ ನಾಮಿನೇಟ್​ ಆದವರು ಸೇಫ್​ ಆದಂತೆ. ಪ್ರತಿ ಸ್ಪರ್ಧಿ ನಾಮಿನೇಟ್​ ಆದಂತೆ.

ನಾಮಿನೇಟ್​ ಆದ ನಿಧಿ, ಶುಭಾ ಅವರನ್ನು ಆಯ್ಕೆ ಮಾಡಿಕೊಂಡರು. ಇಬ್ಬರ ನಡುವೆ ಆಟ ಏರ್ಪಡಿಸಲಾಯಿತು. ಆಗ, ನಿಧಿ ಗೆದ್ದರು, ಶುಭಾ ಸೋತರು. ಈ ಮೂಲಕ ನಿಧಿ ಸುಬ್ಬಯ್ಯ ಸೇಫ್​ ಆದರೆ, ನಾಮಿನೇಟ್ ತೂಗುಗತ್ತಿ ಶುಭಾ ಪಾಲಾಯಿತು. ಸದ್ಯ, ನಾಮಿನೇಷನ್​ ಸಾಲಿನಲ್ಲಿ ನಿರ್ಮಲಾ, ಶುಭಾ, ವಿಶ್ವ ಹಾಗೂ ರಘು ಇದ್ದಾರೆ. ಯಾರಿಗೆ ಕಡಿಮೆ ಮತ ಸಿಗುತ್ತದೆಯೋ ಅವರು ಎಲಿಮಿನೇಷನ್​ ಆಗಲಿದ್ದಾರೆ.

ವಿಶ್ವ ಅವರನ್ನು ನಾಮಿನೇಟ್​ ಮಾಡಿದ್ದ ಪ್ರಶಾಂತ್​:

ನಾಮಿನೇಷನ್​ ತೂಗುಗತ್ತಿಯಿಂದ ತಪ್ಪಿಸಿಕೊಳ್ಳಲು ವಿಶೇಷ ಟಾಸ್ಕ್​ನಲ್ಲಿ ಪ್ರಶಾಂತ್​ ಆಯ್ಕೆ ಮಾಡಿಕೊಂಡಿದ್ದು ವಿಶ್ವನಾಥ್​ ಅವರನ್ನು. ‘ನನ್ನ ಸ್ವಾರ್ಥಕ್ಕಾಗಿ ನಾನು ಒಬ್ಬ ವೀಕ್​ ಸ್ಪರ್ಧಿಯನ್ನು ಆಯ್ಕೆ ಮಾಡಿಕೊಂಡಿದ್ದೇನೆ’ ಎಂದು ಪ್ರಶಾಂತ್​ ಒಪ್ಪಿಕೊಂಡರು. ಅದರಂತೆ ಆಟದಲ್ಲಿ ವಿಶ್ವನಾಥ್​ರನ್ನು ಸೋಲಿಸಿ ತಾವು ಸೇಫ್​ ಆದರು.

ಮಂಜು ಎದುರು ಸಮಬಲದ ಸ್ಪರ್ಧಿ! ಪ್ರಶಾಂತ್​ ಸಂಬರಗಿ ರೀತಿಯೇ ಮಂಜು ಪಾವಗಡ ಅವರಿಗೂ ಬಿಗ್​ ಬಾಸ್​ ಈ ರೀತಿ ಅವಕಾಶ ನೀಡಿದರು. ಆಗ ಮಂಜು ಆಯ್ಕೆ ಮಾಡಿಕೊಂಡಿದ್ದು ರಘು ಅವರನ್ನು. ಈ ಆಯ್ಕೆಗೆ ಮಂಜು ಸೂಕ್ತ ಕಾರಣವನ್ನೂ ನೀಡಿದರು. ‘ರಘು ನನಗೆ ಸರಿಯಾದ ಸ್ಪರ್ಧಿ. ಸಮನಾಗಿ ಸ್ಪರ್ಧಿಸುತ್ತಾರೆ ಎಂದುಕೊಂಡಿದ್ದೇನೆ. ಒಂದು ವೇಳೆ ನಾನು ಸೋತರೂ ಸಮಬಲದ ಸ್ಪರ್ಧಿಯ ಜೊತೆ ಸೋತೆ ಅಂತ ನನಗೆ ಗೌರವ ಸಿಗಬೇಕು ಎಂಬ ಕಾರಣಕ್ಕೆ ಅವರನ್ನು ಆಯ್ಕೆ ಮಾಡಿಕೊಂಡಿದ್ದೇನೆ’ ಎಂದು ಅವರು ನೀಡಿದ ಕಾರಣ ನಿಜಕ್ಕೂ ಮೆಚ್ಚುವಂಥದ್ದು. ಬಿಗ್​ ಬಾಸ್​ ನೀಡಿದ ಟಾಸ್ಕ್​ನಲ್ಲಿ ಮಂಜು ಗೆಲ್ಲುವ ಮೂಲಕ ಸೇಫ್ ಆಗಿದ್ದಾರೆ. ರಘು ಈಗ ಎಲಿಮಿನೇಷನ್​ ಭೀತಿಯಲ್ಲಿದ್ದಾರೆ.

ಇದನ್ನೂ ಓದಿ: Bigg Boss Kannada Day 3: ಬ್ರೋ-ಪ್ರಶಾಂತ್​ ನಡುವೆ ಆರಂಭವಾದ ಜಗಳ ಇಡೀ ಮನೆಗೆ ಹೊತ್ತಿಕೊಳ್ಳುತ್ತಾ?

Published On - 11:07 am, Thu, 4 March 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು