ಬಿಗ್​ ಬಾಸ್​ ಅಭ್ಯರ್ಥಿಗಳ ಕುತಂತ್ರ ಬುದ್ಧಿ ಬಗ್ಗೆ ಸುದೀಪ್​ ಬಳಿ ಅಳಲು ತೋಡಿಕೊಂಡ ಶಂಕರ್​ ಅಶ್ವತ್ಥ್​ ​

ಬಿಗ್​ ಬಾಸ್​ ಮನೆ ಸೇರಿದ ಪ್ರತಿ ಅಭ್ಯರ್ಥಿಗೂ ಗೆಲ್ಲಬೇಕು ಎನ್ನುವ ಛಲ ಇರುತ್ತದೆ. ಇದೇ ಕಾರಣಕ್ಕೆ ಒಬ್ಬರ ವಿರುದ್ಧ ಮತ್ತೊಬ್ಬರು ಕತ್ತಿ ಮಸೆಯುತ್ತಲೇ ಇರುತ್ತಾರೆ.

ಬಿಗ್​ ಬಾಸ್​ ಅಭ್ಯರ್ಥಿಗಳ ಕುತಂತ್ರ ಬುದ್ಧಿ ಬಗ್ಗೆ ಸುದೀಪ್​ ಬಳಿ ಅಳಲು ತೋಡಿಕೊಂಡ ಶಂಕರ್​ ಅಶ್ವತ್ಥ್​  ​
ಶಂಕರ್​ ಅಶ್ವತ್ಥ್​
Follow us
| Updated By: ಮದನ್​ ಕುಮಾರ್​

Updated on: Mar 14, 2021 | 3:23 PM

ಕನ್ನಡ ಬಿಗ್​ ಬಾಸ್​ ಎರಡನೇ ವಾರದ ಎಲಿಮಿನೇಷನ್​ಗೆ ಕ್ಷಣಗಣನೆ ಆರಂಭವಾಗಿದೆ. ಗೀತಾ ಅಥವಾ ನಿರ್ಮಾಲಾ ಇವರಲ್ಲಿ ಒಬ್ಬರು ಮನೆಯಿಂದ ಹೊರ ಹೋಗೋದು ಬಹುತೇಕ ಖಚಿತವಾಗಿದೆ. ಈ ಎಲ್ಲ ಪ್ರಶ್ನೆಗಳಿಗೆ ಇಂದು ರಾತ್ರಿ ಉತ್ತರ ಸಿಗಲಿದೆ. ಈ ಮಧ್ಯೆ ಮನೆಯಲ್ಲಿ ನಡೆಯುತ್ತಿರುವ ಕುತಂತ್ರ ಬುದ್ಧಿ ಬಗ್ಗೆ ಶಂಕರ್​ ಅಶ್ವತ್ಥ್​​ ಮೌನ ಮುರಿದಿದ್ದಾರೆ. ಯಾರು ಹೇಗೆ ಎನ್ನುವ ವಿಚಾರದ ಬಗ್ಗೆ ‘ಸೂಪರ್ ಸಂಡೆ ವಿತ್ ಸುದೀಪ’​ದಲ್ಲಿ ಹೇಳಿಕೊಂಡಿದ್ದಾರೆ. ಬಿಗ್​ ಬಾಸ್​ ಮನೆ ಸೇರಿದ ಪ್ರತಿ ಅಭ್ಯರ್ಥಿಗೂ ಗೆಲ್ಲಬೇಕು ಎನ್ನುವ ಛಲ ಇರುತ್ತದೆ. ಇದೇ ಕಾರಣಕ್ಕೆ ಒಬ್ಬರ ವಿರುದ್ಧ ಮತ್ತೊಬ್ಬರು ಕತ್ತಿ ಮಸೆಯುತ್ತಲೇ ಇರುತ್ತಾರೆ. ಗೆಳೆಯರಂತೆ ಕಂಡವರೂ ಹಿಂದಿನಿಂದ ಚಾಕು ಹಾಕುತ್ತಾರೆ. ಇದು ಇಂದು ನಿನ್ನೆಯ ಕಥೆಯಲ್ಲ. ಬಿಗ್​ ಬಾಸ್​ ಆರಂಭವಾದಾಗಿನಿಂದಲೂ ಇದು ಮನೆಯಲ್ಲಿ ನಡೆದೇ ಇದೆ.

ಈ ಬಾರಿಯೂ ಹಾಗೆಯೇ ಆಗಿದೆ. ಶುಭಾ ಪೂಂಜಾ ಹಾಗೂ ನಿಧಿ ಸುಬ್ಬಯ್ಯ ತುಂಬಾನೇ ಕ್ಲೋಸ್​ ಫ್ರೆಂಡ್ಸ್​​​ ಆಗಿದ್ದರು. ಆದರೆ, ವೈರಸ್​ ಟಾಸ್ಕ್​ ನಂತರ ಇಬ್ಬರ ಗೆಳೆತನದಲ್ಲಿ ಬಿರುಕು ಮೂಡಿದೆ. ಹೀಗೆ ಅನೇಕರ ನಡುವೆ ವೈಷಮ್ಯ ಮೂಡಿದೆ. ಈಗ ಅಶ್ವತ್ಥ್​ ನಾರಾಯಣ್​ ಮನೆಯಲ್ಲಿ ಇರುವ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಕಲರ್ಸ್​ ಕನ್ನಡ ವಾಹಿನಿ ಇಂದು ಪ್ರೋಮೋ ಒಂದನ್ನು ತನ್ನ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ. ಸುದೀಪ್​ ನೇರವಾಗಿ ಮಾತನಾಡುವ ಒಂದು ಟಾಸ್ಕ್​ ನೀಡಿದ್ದರು. ಇದರನ್ವಯ ಪ್ರತಿ ಅಭ್ಯರ್ಥಿ ಯಾರು ಫೇಕ್​, ಯಾರು ಒಳ್ಳೆಯವರು ಎಂದು ಹೇಳಬೇಕು. ಕೆಲವರು ಗೀತಾ ಅವರ ಹೆಸರನ್ನು ಆಯ್ಕೆ ಮಾಡಿಕೊಂಡರೆ ಇನ್ನೂ ಕೆಲವರು ಚಂದ್ರಕಲಾ ಹೆಸರನ್ನು ಸೂಚಿಸಿದರು.

ಶಂಕರ್​ ಅಶ್ವತ್ಥ್​ ಮಾತ್ರ ಸಂಪೂರ್ಣ ಭಿನ್ನವಾಗಿ ಮಾತನಾಡಿದರು. ಇಲ್ಲಿರುವ ಅಷ್ಟೂ ಅಭ್ಯರ್ಥಿಗಳು ಫೇಕ್​. ನೇರವಾಗಿ ಹೇಳಬೇಕು ಎಂದು ನೀವು ಕೇಳುತ್ತಿದ್ದೀರಿ. ಆದರೆ, ಯಾರು ಒಳ್ಳೆಯವರು ಯಾರು ಫೇಕ್​ ಎಂದು ಹೇಳೋಕೆ ಆಗಲ್ಲ. ಹೇಳಿದ್ರೆ ಪಕ್ಕದಲ್ಲಿದ್ದವರು ಯಾರು ಚುಚ್ಚುತ್ತಾರೋ ಎನ್ನುವ ಭಯ ಇರತ್ತದೆ. ಇಲ್ಲವೇ, ಕುತಂತ್ರದ ಬುದ್ಧಿ ತಲೆಯಲ್ಲಿ ಓಡುತ್ತಿರುತ್ತದೆ ಎಂದು ಹೇಳಿದ್ದಾರೆ. ಇದಕ್ಕೆ ಅಭಿಮಾನಿಗಳು ಕಮೆಂಟ್​ ಮಾಡಿದ್ದು, ಶಂಕರ್​ ಅಶ್ವಥ್ ಸರ್ ಸರಿಯಾಗಿ ಹೇಳಿದ್ದೀರಿ ಎಂದು ಮೆಚ್ಚುಗೆ ಹೊರ ಹಾಕಿದ್ದಾರೆ.

ಇದನ್ನೂ ಓದಿ: Bigg Boss Elimination: ಬಿಗ್​ ಬಾಸ್​ನಿಂದ ಹೊರಬಿದ್ದ ಗೀತಾ? ‘ಬ್ರಹ್ಮಗಂಟು’ ನಟಿಯ ಈ ಒಂದು ಗುಣ ಯಾರಿಗೂ ಇಷ್ಟ ಆಗಲಿಲ್ಲ!