AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಅಭ್ಯರ್ಥಿಗಳ ಕುತಂತ್ರ ಬುದ್ಧಿ ಬಗ್ಗೆ ಸುದೀಪ್​ ಬಳಿ ಅಳಲು ತೋಡಿಕೊಂಡ ಶಂಕರ್​ ಅಶ್ವತ್ಥ್​ ​

ಬಿಗ್​ ಬಾಸ್​ ಮನೆ ಸೇರಿದ ಪ್ರತಿ ಅಭ್ಯರ್ಥಿಗೂ ಗೆಲ್ಲಬೇಕು ಎನ್ನುವ ಛಲ ಇರುತ್ತದೆ. ಇದೇ ಕಾರಣಕ್ಕೆ ಒಬ್ಬರ ವಿರುದ್ಧ ಮತ್ತೊಬ್ಬರು ಕತ್ತಿ ಮಸೆಯುತ್ತಲೇ ಇರುತ್ತಾರೆ.

ಬಿಗ್​ ಬಾಸ್​ ಅಭ್ಯರ್ಥಿಗಳ ಕುತಂತ್ರ ಬುದ್ಧಿ ಬಗ್ಗೆ ಸುದೀಪ್​ ಬಳಿ ಅಳಲು ತೋಡಿಕೊಂಡ ಶಂಕರ್​ ಅಶ್ವತ್ಥ್​  ​
ಶಂಕರ್​ ಅಶ್ವತ್ಥ್​
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Mar 14, 2021 | 3:23 PM

Share

ಕನ್ನಡ ಬಿಗ್​ ಬಾಸ್​ ಎರಡನೇ ವಾರದ ಎಲಿಮಿನೇಷನ್​ಗೆ ಕ್ಷಣಗಣನೆ ಆರಂಭವಾಗಿದೆ. ಗೀತಾ ಅಥವಾ ನಿರ್ಮಾಲಾ ಇವರಲ್ಲಿ ಒಬ್ಬರು ಮನೆಯಿಂದ ಹೊರ ಹೋಗೋದು ಬಹುತೇಕ ಖಚಿತವಾಗಿದೆ. ಈ ಎಲ್ಲ ಪ್ರಶ್ನೆಗಳಿಗೆ ಇಂದು ರಾತ್ರಿ ಉತ್ತರ ಸಿಗಲಿದೆ. ಈ ಮಧ್ಯೆ ಮನೆಯಲ್ಲಿ ನಡೆಯುತ್ತಿರುವ ಕುತಂತ್ರ ಬುದ್ಧಿ ಬಗ್ಗೆ ಶಂಕರ್​ ಅಶ್ವತ್ಥ್​​ ಮೌನ ಮುರಿದಿದ್ದಾರೆ. ಯಾರು ಹೇಗೆ ಎನ್ನುವ ವಿಚಾರದ ಬಗ್ಗೆ ‘ಸೂಪರ್ ಸಂಡೆ ವಿತ್ ಸುದೀಪ’​ದಲ್ಲಿ ಹೇಳಿಕೊಂಡಿದ್ದಾರೆ. ಬಿಗ್​ ಬಾಸ್​ ಮನೆ ಸೇರಿದ ಪ್ರತಿ ಅಭ್ಯರ್ಥಿಗೂ ಗೆಲ್ಲಬೇಕು ಎನ್ನುವ ಛಲ ಇರುತ್ತದೆ. ಇದೇ ಕಾರಣಕ್ಕೆ ಒಬ್ಬರ ವಿರುದ್ಧ ಮತ್ತೊಬ್ಬರು ಕತ್ತಿ ಮಸೆಯುತ್ತಲೇ ಇರುತ್ತಾರೆ. ಗೆಳೆಯರಂತೆ ಕಂಡವರೂ ಹಿಂದಿನಿಂದ ಚಾಕು ಹಾಕುತ್ತಾರೆ. ಇದು ಇಂದು ನಿನ್ನೆಯ ಕಥೆಯಲ್ಲ. ಬಿಗ್​ ಬಾಸ್​ ಆರಂಭವಾದಾಗಿನಿಂದಲೂ ಇದು ಮನೆಯಲ್ಲಿ ನಡೆದೇ ಇದೆ.

ಈ ಬಾರಿಯೂ ಹಾಗೆಯೇ ಆಗಿದೆ. ಶುಭಾ ಪೂಂಜಾ ಹಾಗೂ ನಿಧಿ ಸುಬ್ಬಯ್ಯ ತುಂಬಾನೇ ಕ್ಲೋಸ್​ ಫ್ರೆಂಡ್ಸ್​​​ ಆಗಿದ್ದರು. ಆದರೆ, ವೈರಸ್​ ಟಾಸ್ಕ್​ ನಂತರ ಇಬ್ಬರ ಗೆಳೆತನದಲ್ಲಿ ಬಿರುಕು ಮೂಡಿದೆ. ಹೀಗೆ ಅನೇಕರ ನಡುವೆ ವೈಷಮ್ಯ ಮೂಡಿದೆ. ಈಗ ಅಶ್ವತ್ಥ್​ ನಾರಾಯಣ್​ ಮನೆಯಲ್ಲಿ ಇರುವ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಕಲರ್ಸ್​ ಕನ್ನಡ ವಾಹಿನಿ ಇಂದು ಪ್ರೋಮೋ ಒಂದನ್ನು ತನ್ನ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ. ಸುದೀಪ್​ ನೇರವಾಗಿ ಮಾತನಾಡುವ ಒಂದು ಟಾಸ್ಕ್​ ನೀಡಿದ್ದರು. ಇದರನ್ವಯ ಪ್ರತಿ ಅಭ್ಯರ್ಥಿ ಯಾರು ಫೇಕ್​, ಯಾರು ಒಳ್ಳೆಯವರು ಎಂದು ಹೇಳಬೇಕು. ಕೆಲವರು ಗೀತಾ ಅವರ ಹೆಸರನ್ನು ಆಯ್ಕೆ ಮಾಡಿಕೊಂಡರೆ ಇನ್ನೂ ಕೆಲವರು ಚಂದ್ರಕಲಾ ಹೆಸರನ್ನು ಸೂಚಿಸಿದರು.

ಶಂಕರ್​ ಅಶ್ವತ್ಥ್​ ಮಾತ್ರ ಸಂಪೂರ್ಣ ಭಿನ್ನವಾಗಿ ಮಾತನಾಡಿದರು. ಇಲ್ಲಿರುವ ಅಷ್ಟೂ ಅಭ್ಯರ್ಥಿಗಳು ಫೇಕ್​. ನೇರವಾಗಿ ಹೇಳಬೇಕು ಎಂದು ನೀವು ಕೇಳುತ್ತಿದ್ದೀರಿ. ಆದರೆ, ಯಾರು ಒಳ್ಳೆಯವರು ಯಾರು ಫೇಕ್​ ಎಂದು ಹೇಳೋಕೆ ಆಗಲ್ಲ. ಹೇಳಿದ್ರೆ ಪಕ್ಕದಲ್ಲಿದ್ದವರು ಯಾರು ಚುಚ್ಚುತ್ತಾರೋ ಎನ್ನುವ ಭಯ ಇರತ್ತದೆ. ಇಲ್ಲವೇ, ಕುತಂತ್ರದ ಬುದ್ಧಿ ತಲೆಯಲ್ಲಿ ಓಡುತ್ತಿರುತ್ತದೆ ಎಂದು ಹೇಳಿದ್ದಾರೆ. ಇದಕ್ಕೆ ಅಭಿಮಾನಿಗಳು ಕಮೆಂಟ್​ ಮಾಡಿದ್ದು, ಶಂಕರ್​ ಅಶ್ವಥ್ ಸರ್ ಸರಿಯಾಗಿ ಹೇಳಿದ್ದೀರಿ ಎಂದು ಮೆಚ್ಚುಗೆ ಹೊರ ಹಾಕಿದ್ದಾರೆ.

ಇದನ್ನೂ ಓದಿ: Bigg Boss Elimination: ಬಿಗ್​ ಬಾಸ್​ನಿಂದ ಹೊರಬಿದ್ದ ಗೀತಾ? ‘ಬ್ರಹ್ಮಗಂಟು’ ನಟಿಯ ಈ ಒಂದು ಗುಣ ಯಾರಿಗೂ ಇಷ್ಟ ಆಗಲಿಲ್ಲ!

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ