AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Elimination: ಬಿಗ್​ ಬಾಸ್​ ಮನೆಯಿಂದ ಹೊರಬಂದ ಗೀತಾ? ‘ಬ್ರಹ್ಮಗಂಟು’ ನಟಿಯ ಆಟ ಅಂತ್ಯ

ಟಾಸ್ಕ್​ ವಿಚಾರದಲ್ಲಿ ಗೀತಾ ಭಾರತಿ ಭಟ್​ ಆಗಾಗ ಹಿನ್ನಡೆ ಅನುಭವಿಸುತ್ತಿದ್ದರು. ಅಲ್ಲದೆ, ಮೊಸಳೆ ಕಣ್ಣೀರು ಹಾಕುತ್ತಾರೆ ಎಂಬ ಆರೋಪ ಕೂಡ ಅವರ ಮೇಲಿತ್ತು.

Bigg Boss Elimination: ಬಿಗ್​ ಬಾಸ್​ ಮನೆಯಿಂದ ಹೊರಬಂದ ಗೀತಾ? ‘ಬ್ರಹ್ಮಗಂಟು’ ನಟಿಯ ಆಟ ಅಂತ್ಯ
ಬಿಗ್​ ಬಾಸ್​ ಕನ್ನಡ ಸೀಸನ್​ 8
ಮದನ್​ ಕುಮಾರ್​
| Edited By: |

Updated on: Mar 21, 2021 | 2:40 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಮೂರನೇ ವಾರದ ಎಲಿಮಿನೇಷನ್​ ಪ್ರಕ್ರಿಯೆ ನಡೆದಿದೆ. ಮೂಲಗಳ ಪ್ರಕಾರ ನಟಿ ಗೀತಾ ಭಾರತಿ ಭಟ್​ ಅವರು ಎಲಿಮಿನೇಟ್​ ಆಗಿದ್ದಾರೆ. ‘ಬ್ರಹ್ಮಗಂಟು’ ಧಾರಾವಾಹಿ ಮೂಲಕ ಫೇಮಸ್​ ಆಗಿದ್ದ ಗೀತಾ ಅವರು ಬಿಗ್​ ಬಾಸ್​ ಆಟ ಮುಂದುವರಿಸಲು ಸೋತಿದ್ದಾರೆ. ಡೊಡ್ಮನೆಯಲ್ಲಿ ಮೂರು ವಾರಗಳ ಕಾಲ ಅವರು ಪೈಪೋಟಿ ನೀಡಿದ್ದರು.

ಈ ವಾರದ ನಾಮಿನೇಷನ್​ ಪಟ್ಟಿಯಲ್ಲಿ ಶಮಂತ್​ ಬ್ರೋ ಗೌಡ, ನಿಧಿ ಸುಬ್ಬಯ್ಯ, ಗೀತಾ ಭಾರತಿ ಭಟ್​, ರಘು ಗೌಡ, ಅರವಿಂದ್ ಕೆ.ಪಿ., ವಿಶ್ವನಾಥ್​, ದಿವ್ಯಾ ಉರುಡುಗ, ದಿವ್ಯಾ ಸುರೇಶ್, ಪ್ರಶಾಂತ್​ ಸಂಬರಗಿ ಇದ್ದರು. 9 ಸ್ಪರ್ಧಿಗಳ ಪೈಕಿ ಒಬ್ಬರು ಬಿಗ್​ ಬಾಸ್​ ಮನೆಯಿಂದ ಭಾನುವಾರ ಹೊರ ಹೋಗುವುದು ಖಚಿತ ಆಗಿತ್ತು. ಅರವಿಂದ್, ದಿವ್ಯಾ ಸುರೇಶ್​, ಪ್ರಶಾಂತ್​ ಸಂಬರಗಿ, ನಿಧಿ ಸುಬ್ಬಯ್ಯ ಸೇಫ್​ ಆಗಿದ್ದಾರೆ ಎಂದು ಕಿಚ್ಚ ಸುದೀಪ್ ಶನಿವಾರವೇ (ಮಾ.20)​ ಘೋಷಣೆ ಮಾಡಿದ್ದರು.

ಇನ್ನುಳಿದ ಸ್ಪರ್ಧಿಗಳಾದ ಶಮಂತ್​, ಗೀತಾ, ರಘು ಗೌಡ, ವಿಶ್ವನಾಥ್, ದಿವ್ಯಾ ಉರುಡುಗ ಪೈಕಿ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬ ಕೌತುಕ ಮನೆ ಮಾಡಿತ್ತು. ಈಗ ಗೀತಾ ಹೊರಹೋಗಿರುವ ಸುದ್ದಿ ಕೇಳಿಬಂದಿದೆ. ಸೀರಿಯಲ್ ವೀಕ್ಷಕರಿಗೆ ಗೀತೆ ಭಾರತಿ ಭಟ್​ ಹೆಸರು ಚಿರಪರಿಚಿತ. ಈಗ ಬಿಗ್​ ಬಾಸ್​ ಮೂಲಕವೂ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಂತಾಗಿದೆ. ಮೂರನೇ ವಾರದ ಎಲಿಮಿನೇಷನ್​ ಎಪಿಸೋಡ್​ ಮಾ.21ರ ರಾತ್ರಿ ಪ್ರಸಾರ ಆಗಲಿದೆ.

ಟಾಸ್ಕ್​ ವಿಚಾರದಲ್ಲಿ ಗೀತಾ ಆಗಾಗ ಹಿನ್ನಡೆ ಅನುಭವಿಸುತ್ತಿದ್ದರು. ಅಲ್ಲದೆ, ಮೊಸಳೆ ಕಣ್ಣೀರು ಹಾಕುತ್ತಾರೆ ಎಂಬ ಆರೋಪ ಕೂಡ ಅವರ ಮೇಲಿತ್ತು. ಅನವಶ್ಯಕವಾಗಿ ಭಾವುಕರಾಗುತ್ತಾರೆ ಹಾಗೂ ಅದನ್ನೇ ಸ್ಟ್ರ್ಯಾಟಜಿಯಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕೆಲವೊಮ್ಮೆ ಮನೆಯ ಸದಸ್ಯರು ಅಭಿಪ್ರಾಯ ಹಂಚಿಕೊಂಡಿದ್ದುಂಟು. ಅದೇ ಕಾರಣಕ್ಕೆ ವೀಕ್ಷಕರ ವೋಟ್​ ಪಡೆಯುವಲ್ಲಿಯೂ ಅವರು ಎಡವಿರುವ ಸಾಧ್ಯತೆ ಇದೆ. ಸದ್ಯ 14 ಸ್ಪರ್ಧಿಗಳ ನಡುವೆ ಬಿಗ್​ ಬಾಸ್​ ಹಣಾಹಣಿ ಮುಂದುವರಿದಿದೆ.

ಇದನ್ನೂ ಓದಿ: BBK8: ತಂದೆ-ಮಗಳ ಪ್ರೀತಿ ಮೇಲೆಯೇ ಶಂಕರ್​ ಅಶ್ವತ್ಥ್​ಗೆ ಅನುಮಾನ! ಮಾನವೀಯತೆಗೆ ಬೆಲೆ ಇಲ್ವಾ?

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು