Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Elimination: ಬಿಗ್​ ಬಾಸ್​ ಮನೆಯಿಂದ ಹೊರಬಂದ ಗೀತಾ? ‘ಬ್ರಹ್ಮಗಂಟು’ ನಟಿಯ ಆಟ ಅಂತ್ಯ

ಟಾಸ್ಕ್​ ವಿಚಾರದಲ್ಲಿ ಗೀತಾ ಭಾರತಿ ಭಟ್​ ಆಗಾಗ ಹಿನ್ನಡೆ ಅನುಭವಿಸುತ್ತಿದ್ದರು. ಅಲ್ಲದೆ, ಮೊಸಳೆ ಕಣ್ಣೀರು ಹಾಕುತ್ತಾರೆ ಎಂಬ ಆರೋಪ ಕೂಡ ಅವರ ಮೇಲಿತ್ತು.

Bigg Boss Elimination: ಬಿಗ್​ ಬಾಸ್​ ಮನೆಯಿಂದ ಹೊರಬಂದ ಗೀತಾ? ‘ಬ್ರಹ್ಮಗಂಟು’ ನಟಿಯ ಆಟ ಅಂತ್ಯ
ಬಿಗ್​ ಬಾಸ್​ ಕನ್ನಡ ಸೀಸನ್​ 8
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Mar 21, 2021 | 2:40 PM

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಮೂರನೇ ವಾರದ ಎಲಿಮಿನೇಷನ್​ ಪ್ರಕ್ರಿಯೆ ನಡೆದಿದೆ. ಮೂಲಗಳ ಪ್ರಕಾರ ನಟಿ ಗೀತಾ ಭಾರತಿ ಭಟ್​ ಅವರು ಎಲಿಮಿನೇಟ್​ ಆಗಿದ್ದಾರೆ. ‘ಬ್ರಹ್ಮಗಂಟು’ ಧಾರಾವಾಹಿ ಮೂಲಕ ಫೇಮಸ್​ ಆಗಿದ್ದ ಗೀತಾ ಅವರು ಬಿಗ್​ ಬಾಸ್​ ಆಟ ಮುಂದುವರಿಸಲು ಸೋತಿದ್ದಾರೆ. ಡೊಡ್ಮನೆಯಲ್ಲಿ ಮೂರು ವಾರಗಳ ಕಾಲ ಅವರು ಪೈಪೋಟಿ ನೀಡಿದ್ದರು.

ಈ ವಾರದ ನಾಮಿನೇಷನ್​ ಪಟ್ಟಿಯಲ್ಲಿ ಶಮಂತ್​ ಬ್ರೋ ಗೌಡ, ನಿಧಿ ಸುಬ್ಬಯ್ಯ, ಗೀತಾ ಭಾರತಿ ಭಟ್​, ರಘು ಗೌಡ, ಅರವಿಂದ್ ಕೆ.ಪಿ., ವಿಶ್ವನಾಥ್​, ದಿವ್ಯಾ ಉರುಡುಗ, ದಿವ್ಯಾ ಸುರೇಶ್, ಪ್ರಶಾಂತ್​ ಸಂಬರಗಿ ಇದ್ದರು. 9 ಸ್ಪರ್ಧಿಗಳ ಪೈಕಿ ಒಬ್ಬರು ಬಿಗ್​ ಬಾಸ್​ ಮನೆಯಿಂದ ಭಾನುವಾರ ಹೊರ ಹೋಗುವುದು ಖಚಿತ ಆಗಿತ್ತು. ಅರವಿಂದ್, ದಿವ್ಯಾ ಸುರೇಶ್​, ಪ್ರಶಾಂತ್​ ಸಂಬರಗಿ, ನಿಧಿ ಸುಬ್ಬಯ್ಯ ಸೇಫ್​ ಆಗಿದ್ದಾರೆ ಎಂದು ಕಿಚ್ಚ ಸುದೀಪ್ ಶನಿವಾರವೇ (ಮಾ.20)​ ಘೋಷಣೆ ಮಾಡಿದ್ದರು.

ಇನ್ನುಳಿದ ಸ್ಪರ್ಧಿಗಳಾದ ಶಮಂತ್​, ಗೀತಾ, ರಘು ಗೌಡ, ವಿಶ್ವನಾಥ್, ದಿವ್ಯಾ ಉರುಡುಗ ಪೈಕಿ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬ ಕೌತುಕ ಮನೆ ಮಾಡಿತ್ತು. ಈಗ ಗೀತಾ ಹೊರಹೋಗಿರುವ ಸುದ್ದಿ ಕೇಳಿಬಂದಿದೆ. ಸೀರಿಯಲ್ ವೀಕ್ಷಕರಿಗೆ ಗೀತೆ ಭಾರತಿ ಭಟ್​ ಹೆಸರು ಚಿರಪರಿಚಿತ. ಈಗ ಬಿಗ್​ ಬಾಸ್​ ಮೂಲಕವೂ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಂತಾಗಿದೆ. ಮೂರನೇ ವಾರದ ಎಲಿಮಿನೇಷನ್​ ಎಪಿಸೋಡ್​ ಮಾ.21ರ ರಾತ್ರಿ ಪ್ರಸಾರ ಆಗಲಿದೆ.

ಟಾಸ್ಕ್​ ವಿಚಾರದಲ್ಲಿ ಗೀತಾ ಆಗಾಗ ಹಿನ್ನಡೆ ಅನುಭವಿಸುತ್ತಿದ್ದರು. ಅಲ್ಲದೆ, ಮೊಸಳೆ ಕಣ್ಣೀರು ಹಾಕುತ್ತಾರೆ ಎಂಬ ಆರೋಪ ಕೂಡ ಅವರ ಮೇಲಿತ್ತು. ಅನವಶ್ಯಕವಾಗಿ ಭಾವುಕರಾಗುತ್ತಾರೆ ಹಾಗೂ ಅದನ್ನೇ ಸ್ಟ್ರ್ಯಾಟಜಿಯಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕೆಲವೊಮ್ಮೆ ಮನೆಯ ಸದಸ್ಯರು ಅಭಿಪ್ರಾಯ ಹಂಚಿಕೊಂಡಿದ್ದುಂಟು. ಅದೇ ಕಾರಣಕ್ಕೆ ವೀಕ್ಷಕರ ವೋಟ್​ ಪಡೆಯುವಲ್ಲಿಯೂ ಅವರು ಎಡವಿರುವ ಸಾಧ್ಯತೆ ಇದೆ. ಸದ್ಯ 14 ಸ್ಪರ್ಧಿಗಳ ನಡುವೆ ಬಿಗ್​ ಬಾಸ್​ ಹಣಾಹಣಿ ಮುಂದುವರಿದಿದೆ.

ಇದನ್ನೂ ಓದಿ: BBK8: ತಂದೆ-ಮಗಳ ಪ್ರೀತಿ ಮೇಲೆಯೇ ಶಂಕರ್​ ಅಶ್ವತ್ಥ್​ಗೆ ಅನುಮಾನ! ಮಾನವೀಯತೆಗೆ ಬೆಲೆ ಇಲ್ವಾ?

ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ