AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Elimination: ಬಿಗ್​ ಬಾಸ್​ ಮನೆಯಿಂದ ಹೊರಬಂದ ಗೀತಾ? ‘ಬ್ರಹ್ಮಗಂಟು’ ನಟಿಯ ಆಟ ಅಂತ್ಯ

ಟಾಸ್ಕ್​ ವಿಚಾರದಲ್ಲಿ ಗೀತಾ ಭಾರತಿ ಭಟ್​ ಆಗಾಗ ಹಿನ್ನಡೆ ಅನುಭವಿಸುತ್ತಿದ್ದರು. ಅಲ್ಲದೆ, ಮೊಸಳೆ ಕಣ್ಣೀರು ಹಾಕುತ್ತಾರೆ ಎಂಬ ಆರೋಪ ಕೂಡ ಅವರ ಮೇಲಿತ್ತು.

Bigg Boss Elimination: ಬಿಗ್​ ಬಾಸ್​ ಮನೆಯಿಂದ ಹೊರಬಂದ ಗೀತಾ? ‘ಬ್ರಹ್ಮಗಂಟು’ ನಟಿಯ ಆಟ ಅಂತ್ಯ
ಬಿಗ್​ ಬಾಸ್​ ಕನ್ನಡ ಸೀಸನ್​ 8
ಮದನ್​ ಕುಮಾರ್​
| Edited By: |

Updated on: Mar 21, 2021 | 2:40 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಮೂರನೇ ವಾರದ ಎಲಿಮಿನೇಷನ್​ ಪ್ರಕ್ರಿಯೆ ನಡೆದಿದೆ. ಮೂಲಗಳ ಪ್ರಕಾರ ನಟಿ ಗೀತಾ ಭಾರತಿ ಭಟ್​ ಅವರು ಎಲಿಮಿನೇಟ್​ ಆಗಿದ್ದಾರೆ. ‘ಬ್ರಹ್ಮಗಂಟು’ ಧಾರಾವಾಹಿ ಮೂಲಕ ಫೇಮಸ್​ ಆಗಿದ್ದ ಗೀತಾ ಅವರು ಬಿಗ್​ ಬಾಸ್​ ಆಟ ಮುಂದುವರಿಸಲು ಸೋತಿದ್ದಾರೆ. ಡೊಡ್ಮನೆಯಲ್ಲಿ ಮೂರು ವಾರಗಳ ಕಾಲ ಅವರು ಪೈಪೋಟಿ ನೀಡಿದ್ದರು.

ಈ ವಾರದ ನಾಮಿನೇಷನ್​ ಪಟ್ಟಿಯಲ್ಲಿ ಶಮಂತ್​ ಬ್ರೋ ಗೌಡ, ನಿಧಿ ಸುಬ್ಬಯ್ಯ, ಗೀತಾ ಭಾರತಿ ಭಟ್​, ರಘು ಗೌಡ, ಅರವಿಂದ್ ಕೆ.ಪಿ., ವಿಶ್ವನಾಥ್​, ದಿವ್ಯಾ ಉರುಡುಗ, ದಿವ್ಯಾ ಸುರೇಶ್, ಪ್ರಶಾಂತ್​ ಸಂಬರಗಿ ಇದ್ದರು. 9 ಸ್ಪರ್ಧಿಗಳ ಪೈಕಿ ಒಬ್ಬರು ಬಿಗ್​ ಬಾಸ್​ ಮನೆಯಿಂದ ಭಾನುವಾರ ಹೊರ ಹೋಗುವುದು ಖಚಿತ ಆಗಿತ್ತು. ಅರವಿಂದ್, ದಿವ್ಯಾ ಸುರೇಶ್​, ಪ್ರಶಾಂತ್​ ಸಂಬರಗಿ, ನಿಧಿ ಸುಬ್ಬಯ್ಯ ಸೇಫ್​ ಆಗಿದ್ದಾರೆ ಎಂದು ಕಿಚ್ಚ ಸುದೀಪ್ ಶನಿವಾರವೇ (ಮಾ.20)​ ಘೋಷಣೆ ಮಾಡಿದ್ದರು.

ಇನ್ನುಳಿದ ಸ್ಪರ್ಧಿಗಳಾದ ಶಮಂತ್​, ಗೀತಾ, ರಘು ಗೌಡ, ವಿಶ್ವನಾಥ್, ದಿವ್ಯಾ ಉರುಡುಗ ಪೈಕಿ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬ ಕೌತುಕ ಮನೆ ಮಾಡಿತ್ತು. ಈಗ ಗೀತಾ ಹೊರಹೋಗಿರುವ ಸುದ್ದಿ ಕೇಳಿಬಂದಿದೆ. ಸೀರಿಯಲ್ ವೀಕ್ಷಕರಿಗೆ ಗೀತೆ ಭಾರತಿ ಭಟ್​ ಹೆಸರು ಚಿರಪರಿಚಿತ. ಈಗ ಬಿಗ್​ ಬಾಸ್​ ಮೂಲಕವೂ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಂತಾಗಿದೆ. ಮೂರನೇ ವಾರದ ಎಲಿಮಿನೇಷನ್​ ಎಪಿಸೋಡ್​ ಮಾ.21ರ ರಾತ್ರಿ ಪ್ರಸಾರ ಆಗಲಿದೆ.

ಟಾಸ್ಕ್​ ವಿಚಾರದಲ್ಲಿ ಗೀತಾ ಆಗಾಗ ಹಿನ್ನಡೆ ಅನುಭವಿಸುತ್ತಿದ್ದರು. ಅಲ್ಲದೆ, ಮೊಸಳೆ ಕಣ್ಣೀರು ಹಾಕುತ್ತಾರೆ ಎಂಬ ಆರೋಪ ಕೂಡ ಅವರ ಮೇಲಿತ್ತು. ಅನವಶ್ಯಕವಾಗಿ ಭಾವುಕರಾಗುತ್ತಾರೆ ಹಾಗೂ ಅದನ್ನೇ ಸ್ಟ್ರ್ಯಾಟಜಿಯಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕೆಲವೊಮ್ಮೆ ಮನೆಯ ಸದಸ್ಯರು ಅಭಿಪ್ರಾಯ ಹಂಚಿಕೊಂಡಿದ್ದುಂಟು. ಅದೇ ಕಾರಣಕ್ಕೆ ವೀಕ್ಷಕರ ವೋಟ್​ ಪಡೆಯುವಲ್ಲಿಯೂ ಅವರು ಎಡವಿರುವ ಸಾಧ್ಯತೆ ಇದೆ. ಸದ್ಯ 14 ಸ್ಪರ್ಧಿಗಳ ನಡುವೆ ಬಿಗ್​ ಬಾಸ್​ ಹಣಾಹಣಿ ಮುಂದುವರಿದಿದೆ.

ಇದನ್ನೂ ಓದಿ: BBK8: ತಂದೆ-ಮಗಳ ಪ್ರೀತಿ ಮೇಲೆಯೇ ಶಂಕರ್​ ಅಶ್ವತ್ಥ್​ಗೆ ಅನುಮಾನ! ಮಾನವೀಯತೆಗೆ ಬೆಲೆ ಇಲ್ವಾ?

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ