Bigg Boss Elimination: ಬಿಗ್​ ಬಾಸ್​ ಮನೆಯಿಂದ ಹೊರಬಂದ ಗೀತಾ? ‘ಬ್ರಹ್ಮಗಂಟು’ ನಟಿಯ ಆಟ ಅಂತ್ಯ

ಟಾಸ್ಕ್​ ವಿಚಾರದಲ್ಲಿ ಗೀತಾ ಭಾರತಿ ಭಟ್​ ಆಗಾಗ ಹಿನ್ನಡೆ ಅನುಭವಿಸುತ್ತಿದ್ದರು. ಅಲ್ಲದೆ, ಮೊಸಳೆ ಕಣ್ಣೀರು ಹಾಕುತ್ತಾರೆ ಎಂಬ ಆರೋಪ ಕೂಡ ಅವರ ಮೇಲಿತ್ತು.

Bigg Boss Elimination: ಬಿಗ್​ ಬಾಸ್​ ಮನೆಯಿಂದ ಹೊರಬಂದ ಗೀತಾ? ‘ಬ್ರಹ್ಮಗಂಟು’ ನಟಿಯ ಆಟ ಅಂತ್ಯ
ಬಿಗ್​ ಬಾಸ್​ ಕನ್ನಡ ಸೀಸನ್​ 8
Edited By:

Updated on: Mar 21, 2021 | 2:40 PM

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಮೂರನೇ ವಾರದ ಎಲಿಮಿನೇಷನ್​ ಪ್ರಕ್ರಿಯೆ ನಡೆದಿದೆ. ಮೂಲಗಳ ಪ್ರಕಾರ ನಟಿ ಗೀತಾ ಭಾರತಿ ಭಟ್​ ಅವರು ಎಲಿಮಿನೇಟ್​ ಆಗಿದ್ದಾರೆ. ‘ಬ್ರಹ್ಮಗಂಟು’ ಧಾರಾವಾಹಿ ಮೂಲಕ ಫೇಮಸ್​ ಆಗಿದ್ದ ಗೀತಾ ಅವರು ಬಿಗ್​ ಬಾಸ್​ ಆಟ ಮುಂದುವರಿಸಲು ಸೋತಿದ್ದಾರೆ. ಡೊಡ್ಮನೆಯಲ್ಲಿ ಮೂರು ವಾರಗಳ ಕಾಲ ಅವರು ಪೈಪೋಟಿ ನೀಡಿದ್ದರು.

ಈ ವಾರದ ನಾಮಿನೇಷನ್​ ಪಟ್ಟಿಯಲ್ಲಿ ಶಮಂತ್​ ಬ್ರೋ ಗೌಡ, ನಿಧಿ ಸುಬ್ಬಯ್ಯ, ಗೀತಾ ಭಾರತಿ ಭಟ್​, ರಘು ಗೌಡ, ಅರವಿಂದ್ ಕೆ.ಪಿ., ವಿಶ್ವನಾಥ್​, ದಿವ್ಯಾ ಉರುಡುಗ, ದಿವ್ಯಾ ಸುರೇಶ್, ಪ್ರಶಾಂತ್​ ಸಂಬರಗಿ ಇದ್ದರು. 9 ಸ್ಪರ್ಧಿಗಳ ಪೈಕಿ ಒಬ್ಬರು ಬಿಗ್​ ಬಾಸ್​ ಮನೆಯಿಂದ ಭಾನುವಾರ ಹೊರ ಹೋಗುವುದು ಖಚಿತ ಆಗಿತ್ತು. ಅರವಿಂದ್, ದಿವ್ಯಾ ಸುರೇಶ್​, ಪ್ರಶಾಂತ್​ ಸಂಬರಗಿ, ನಿಧಿ ಸುಬ್ಬಯ್ಯ ಸೇಫ್​ ಆಗಿದ್ದಾರೆ ಎಂದು ಕಿಚ್ಚ ಸುದೀಪ್ ಶನಿವಾರವೇ (ಮಾ.20)​ ಘೋಷಣೆ ಮಾಡಿದ್ದರು.

ಇನ್ನುಳಿದ ಸ್ಪರ್ಧಿಗಳಾದ ಶಮಂತ್​, ಗೀತಾ, ರಘು ಗೌಡ, ವಿಶ್ವನಾಥ್, ದಿವ್ಯಾ ಉರುಡುಗ ಪೈಕಿ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬ ಕೌತುಕ ಮನೆ ಮಾಡಿತ್ತು. ಈಗ ಗೀತಾ ಹೊರಹೋಗಿರುವ ಸುದ್ದಿ ಕೇಳಿಬಂದಿದೆ. ಸೀರಿಯಲ್ ವೀಕ್ಷಕರಿಗೆ ಗೀತೆ ಭಾರತಿ ಭಟ್​ ಹೆಸರು ಚಿರಪರಿಚಿತ. ಈಗ ಬಿಗ್​ ಬಾಸ್​ ಮೂಲಕವೂ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಂತಾಗಿದೆ. ಮೂರನೇ ವಾರದ ಎಲಿಮಿನೇಷನ್​ ಎಪಿಸೋಡ್​ ಮಾ.21ರ ರಾತ್ರಿ ಪ್ರಸಾರ ಆಗಲಿದೆ.

ಟಾಸ್ಕ್​ ವಿಚಾರದಲ್ಲಿ ಗೀತಾ ಆಗಾಗ ಹಿನ್ನಡೆ ಅನುಭವಿಸುತ್ತಿದ್ದರು. ಅಲ್ಲದೆ, ಮೊಸಳೆ ಕಣ್ಣೀರು ಹಾಕುತ್ತಾರೆ ಎಂಬ ಆರೋಪ ಕೂಡ ಅವರ ಮೇಲಿತ್ತು. ಅನವಶ್ಯಕವಾಗಿ ಭಾವುಕರಾಗುತ್ತಾರೆ ಹಾಗೂ ಅದನ್ನೇ ಸ್ಟ್ರ್ಯಾಟಜಿಯಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕೆಲವೊಮ್ಮೆ ಮನೆಯ ಸದಸ್ಯರು ಅಭಿಪ್ರಾಯ ಹಂಚಿಕೊಂಡಿದ್ದುಂಟು. ಅದೇ ಕಾರಣಕ್ಕೆ ವೀಕ್ಷಕರ ವೋಟ್​ ಪಡೆಯುವಲ್ಲಿಯೂ ಅವರು ಎಡವಿರುವ ಸಾಧ್ಯತೆ ಇದೆ. ಸದ್ಯ 14 ಸ್ಪರ್ಧಿಗಳ ನಡುವೆ ಬಿಗ್​ ಬಾಸ್​ ಹಣಾಹಣಿ ಮುಂದುವರಿದಿದೆ.

ಇದನ್ನೂ ಓದಿ: BBK8: ತಂದೆ-ಮಗಳ ಪ್ರೀತಿ ಮೇಲೆಯೇ ಶಂಕರ್​ ಅಶ್ವತ್ಥ್​ಗೆ ಅನುಮಾನ! ಮಾನವೀಯತೆಗೆ ಬೆಲೆ ಇಲ್ವಾ?

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us