AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada 8: ಕನ್ನಡ ಬಿಗ್​ ಬಾಸ್​ ನೋಡೋದೆಲ್ಲಿ? ಮನೆ ಒಳಗೆ ಹೋಗೋವವರು ಯಾರು? ಇಲ್ಲಿದೆ ಮಾಹಿತಿ

ನಾಳೆ ಸಂಜೆ 6 ಗಂಟೆಗೆ ವೇದಿಕೆ ಮೇಲೆ ಸುದೀಪ್​ ಬರಲಿದ್ದಾರೆ. ಕಂಟೆಸ್ಟೆಂಟ್​ಗಳು ವೇದಿಕೆ ಏರುವುದಕ್ಕೂ ಮೊದಲು ಸಾಕಷ್ಟು ಮನರಂಜನಾ ಕಾರ್ಯಕ್ರಮಗಳು ಇರುವ ಸಾಧ್ಯತೆ ಇದೆ.

Bigg Boss Kannada 8: ಕನ್ನಡ ಬಿಗ್​ ಬಾಸ್​ ನೋಡೋದೆಲ್ಲಿ? ಮನೆ ಒಳಗೆ ಹೋಗೋವವರು ಯಾರು? ಇಲ್ಲಿದೆ ಮಾಹಿತಿ
ಸುದೀಪ್​
ರಾಜೇಶ್ ದುಗ್ಗುಮನೆ
|

Updated on:Feb 27, 2021 | 8:39 PM

Share

ಕೊರೊನಾ ವೈರಸ್​ನಿಂದ ಕನ್ನಡ ಬಿಗ್​ ಬಾಸ್​ ಸೀಸನ್​ 8 ತಡವಾಗಿ ಆರಂಭಗೊಳ್ಳುತ್ತಿದೆ. ಈ ಬಾರಿ ಬಿಗ್​ ಬಾಸ್​ ಮನೆ ಒಳಗೆ ಹೋಗುವುದಕ್ಕೂ ಮೊದಲು ಅಭ್ಯರ್ಥಿಗಳು ಕ್ವಾರಂಟೈನ್​ ಆಗುವುದು ಕಡ್ಡಾಯ. ಅಂತೆಯೇ, ಬಿಗ್​ ಬಾಸ್​ ಮನೆಗೆ ತೆರಳುವ 17 ಅಭ್ಯರ್ಥಿಗಳು ಹೋಟೆಲ್​ನಲ್ಲಿ ಕ್ವಾರಂಟೈನ್​ ಆಗಿದ್ದಾರೆ. ಈ ವಿಚಾರವನ್ನು ಖುದ್ದು ಕಲರ್ಸ್​ ಕನ್ನಡದ ಮುಖ್ಯಸ್ಥ ಪರಮೇಶ್ವರ್​ ಗುಂಡ್ಕಲ್​ ಖಚಿತಪಡಿಸಿದ್ದಾರೆ. ಬಿಗ್​ ಬಾಸ್​ 8 ಎಲ್ಲಿ ಪ್ರಸಾರವಾಗುತ್ತದೆ? ಲೈವ್​ ನೋಡೋದು ಹೇಗೆ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ಭಾನುವಾರ ಸಂಜೆ 6 ಗಂಟೆಗೆ ಬಿಗ್​ ಬಾಸ್​ 8ಕ್ಕೆ ಅದ್ದೂರಿಯಾಗಿ ಚಾಲನೆ ಸಿಗಲಿದೆ. ಈ ವರ್ಷವೂ ಕಿಚ್ಚ ಸುದೀಪ್​ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಈ ಬಾರಿ ರಾತ್ರಿ 9:30ರಿಂದ ಬಿಗ್​ ಬಾಸ್​ ಕಾರ್ಯಕ್ರಮ ಪ್ರಸಾರವಾಗಲಿದೆ.

ನಾಳೆ ಸಂಜೆ 6 ಗಂಟೆಗೆ ವೇದಿಕೆ ಮೇಲೆ ಸುದೀಪ್​ ಬರಲಿದ್ದಾರೆ. ಕಂಟೆಸ್ಟೆಂಟ್​ಗಳು ವೇದಿಕೆ ಏರುವುದಕ್ಕೂ ಮೊದಲು ಸಾಕಷ್ಟು ಮನರಂಜನಾ ಕಾರ್ಯಕ್ರಮಗಳು ಇರುವ ಸಾಧ್ಯತೆ ಇದೆ. ರಾತ್ರಿ 11 ಗಂಟೆ ಸುಮಾರಿಗೆ ಕಾರ್ಯಕ್ರಮ ಪೂರ್ಣಗೊಳ್ಳಲಿದೆ. ಬಿಗ್​ ಬಾಸ್​ ವೀಕ್ಷಣೆ ಮಾಡೋದು ಎಲ್ಲಿ? ಬಿಗ್​ ಬಾಸ್​ ಎಲ್ಲಿ ವೀಕ್ಷಣೆ ಮಾಡಬೇಕು ಎನ್ನುವುದು ಅನೇಕರ ಪ್ರಶ್ನೆ. ಟಿವಿಯಲ್ಲಿ ನೀವು ಬಿಗ್ ಬಾಸ್​ ನೋಡಬೇಕು ಎಂದಾದರೆ ಕಲರ್ಸ್​ ಕನ್ನಡ ವಾಹಿನಿಯಲ್ಲಿ ನೋಡಬೇಕು. ಆನ್​ಲೈನ್​ನಲ್ಲಿ ಬಿಗ್​ ಬಾಸ್​ ನೋಡಬೇಕು ಎಂದಾದರೆ ನೀವು ವೂಟ್​ ಆ್ಯಪ್​ ಡೌನ್​ಲೋಡ್​ ಮಾಡಿಕೊಳ್ಳಬೇಕು. ಜಿಯೋ ಟಿವಿಯಲ್ಲಿ ಕೂಡ ನೀವು ಬಿಗ್​ ಬಾಸ್​ ವೀಕ್ಷಣೆ ಮಾಡಬಹುದಾಗಿದೆ. ಜಿಯೋ ಟಿವಿಗೆ ತೆರಳಿ ಕಲರ್ಸ್​ ಕನ್ನಡ ಎಂದು ಸರ್ಚ್​ ಮಾಡಿದರೆ ನಿಮಗೆ ಬಿಗ್​ ಬಾಸ್​ ಸಿಗಲಿದೆ. ಸ್ಪರ್ಧಿಗಳ ಸಂಭಾವ್ಯ ಪಟ್ಟಿ

ಪ್ರತಿಬಾರಿಯೂ ಬಿಗ್​ಬಾಸ್​ ಶುರುವಾಗುತ್ತದೆ ಎಂಬ ಸುದ್ದಿ ಹೊರಬಿದ್ದ ತಕ್ಷಣ ಸ್ಪರ್ಧಿಗಳು ಯಾರು ಎಂಬ ಕುತೂಹಲ ಸಹಜವಾಗಿ ಹುಟ್ಟಿಕೊಳ್ಳುತ್ತದೆ. ಇನ್ನು ಬಿಗ್​ಬಾಸ್​ಗೆ ಹೋಗುವವರು ಯಾರೂ ಆ ಬಗ್ಗೆ ಮಾಹಿತಿಯನ್ನು ಬಹಿರಂಗವಾಗಿ ಹಂಚಿಕೊಳ್ಳುವಂತಿಲ್ಲ. ಹೀಗಾಗಿ ಬಹುತೇಕರು ಹೋಗುವುದು ನಿಕ್ಕಿಯಾಗಿದ್ದರೂ ಕೇಳಿದರೆ ಇಲ್ಲಪ್ಪಾ, ನಾನು ಹೋಗ್ತಿಲ್ಲ ಎಂದು ನಿರಾಕರಿಸುತ್ತಾರೆ. ಹಾಗಾದರೆ, ಈ ಬಾರಿ ಬಿಗ್​ ಬಾಸ್​ ಮನೆಗೆ ತೆರಳಲಿರುವವರು ಯಾರು ಎನ್ನುವ ಸಂಭಾವ್ಯ ಪಟ್ಟಿ ಇಲ್ಲಿದೆ.

-ಆಶಿಕಾ ರಂಗನಾಥ್ ಸಹೋದರಿ ಅನುಶಾ ರಂಗನಾಥ್ -ಕಾಮಿಡಿ ಕಿಲಾಡಿ ನಯನಾ -ನಿರ್ದೇಶಕ ರವಿ ಶ್ರೀವತ್ಸ -ಬ್ರಹ್ಮಗಂಟು ಖ್ಯಾತಿಯ ಗುಂಡಮ್ಮ -ರಘು ವೈನ್ ಸ್ಟೋರ್​ನ ರಘು ಗೌಡ -ಕಿರಣ್ ಶ್ರೀನಿವಾಸ್ -ಸುನಿಲ್ ರಾವ್ -‘ಲವ್ ಗುರು’ ರಾಜೇಶ್ -ಕಿರುತೆರೆ ನಟಿ ಸಮೀಕ್ಷಾ -ಅಗ್ನಿಸಾಕ್ಷಿಯ ಸುಕೃತಾ -ಅಮೃತವರ್ಷಿಣಿಯ ರಜಿನಿ -ತಬಲಾ ನಾಣಿ -ತರಂಗ ವಿಶ್ವ -ಸರಿಗಮಪ.. ಹನುಮಂತ -ನಿರೂಪಕ ಅಮರ್ ಪ್ರಸಾದ್

ಇದನ್ನೂ ಓದಿ: Bigg Boss Kannada 8: ಈ ಬಾರಿ ಕನ್ನಡ ಬಿಗ್​ಬಾಸ್​ನಲ್ಲಿ​ ಇವರೆಲ್ಲಾ ಕಾಣಿಸಿಕೊಳ್ಳುವುದು ಬಹುತೇಕ ಖಚಿತ!

Published On - 5:54 pm, Sat, 27 February 21

ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು