AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ 8 ಆರಂಭಕ್ಕೆ ಕಿಚ್ಚ ಜೋಯಿಸರು ಕೊನೆಗೂ ನೀಡಿದ್ರು ಮುಹೂರ್ತ!

Bigg Boss Kannada: ಬಿಗ್​ ಬಾಸ್​ 8 ಫೆಬ್ರವರಿಯಿಂದ ಆರಂಭವಾಗಲಿದೆ ಎಂದು ವಾಹಿನಿ ಈ ಮೊದಲು ಘೋಷಣೆ ಮಾಡಿತ್ತು. ಆದರೆ, ದಿನಾಂಕವನ್ನು ಎಲ್ಲಿಯೂ ಘೋಷಣೆ ಮಾಡಿರಲಿಲ್ಲ. ಈಗ ಇದಕ್ಕೆ ಉತ್ತರ ಸಿಕ್ಕಂತಾಗಿದೆ.

Bigg Boss Kannada: ಬಿಗ್​ ಬಾಸ್​ 8 ಆರಂಭಕ್ಕೆ ಕಿಚ್ಚ ಜೋಯಿಸರು ಕೊನೆಗೂ ನೀಡಿದ್ರು ಮುಹೂರ್ತ!
ಬಿಗ್​ ಬಾಸ್​ನಲ್ಲಿ ಸುದೀಪ್​
ರಾಜೇಶ್ ದುಗ್ಗುಮನೆ
|

Updated on:Feb 15, 2021 | 8:41 PM

Share

ಕನ್ನಡ ಬಿಗ್​ ಬಾಸ್​ ಯಾವಾಗ ಆರಂಭವಾಗಲಿದೆ ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಕಿಚ್ಚ ಜೋಯಿಸರು ಕನ್ನಡ ಬಿಗ್​ ಬಾಸ್​ 8ನೇ ಸೀಸನ್​ ಆರಂಭಿಸುವುದಕ್ಕೆ ಮುಹೂರ್ತ ನೀಡಿದ್ದಾರೆ. ಇದೇ ಫೆಬ್ರವರಿ 28ರಿಂದ ಬಿಗ್​ ಬಾಸ್ ಪ್ರೇಕ್ಷಕರಿಗೆ ಮನರಂಜನೆ ನೀಡಲಿದೆ. ಈ ಮೊದಲು ಜೋಯಿಸರ ಲುಕ್​ನಲ್ಲಿ ಕಾಣಿಸಿಕೊಂಡಿದ್ದರು ಸುದೀಪ್​. ಕೆಂಪು ಬಣ್ಣದ ಬಟ್ಟೆ ತೊಟ್ಟಿದ್ದ ಅವರು, ತಲೆಗೆ ಪೇಟ ಸುತ್ತಿದ್ದರು. ಹಣೆಯಲ್ಲಿ ದೊಡ್ಡ ತಿಲಕ, ಕೊರಳಲ್ಲಿ ದೊಡ್ಡ ದೊಡ್ಡ ಸರ, ಭುಜಕ್ಕೆ ಶಾಲು ತೊಟ್ಟು ಜೋಯಿಸರ ಅವತಾರದಲ್ಲಿ ಬಂದಿದ್ದರು. ಈಗಲೂ ಅದೇ ಅವತಾರದಲ್ಲಿ ಪ್ರೇಕ್ಷಕರ ಎದುರು ಬಂದ ಸುದೀಪ್​, ಬಿಗ್​ ಬಾಸ್​ ಆರಂಭದ ದಿನಾಂಕ ಘೋಷಣೆ ಮಾಡಿದ್ದಾರೆ. 

ಬಿಗ್​ ಬಾಸ್​ ಫೆಬ್ರವರಿ 28ರಂದು ಬಿಗ್​ ಬಾಸ್ ಕಾರ್ಯಕ್ರಮ ನಡೆಯಲಿದೆ. ಅಂದು ನಡೆಯುವ ಕಾರ್ಯಕ್ರಮದಲ್ಲಿ ಎಲ್ಲಾ ಸ್ಪರ್ಧಿಗಳನ್ನು ಬರಮಾಡಿಕೊಳ್ಳಲಾಗುತ್ತದೆ. ಬಿಗ್​ ಬಾಸ್​ 8 ಫೆಬ್ರವರಿಯಿಂದ ಆರಂಭವಾಗಲಿದೆ ಎಂದು ವಾಹಿನಿ ಈ ಮೊದಲು ಘೋಷಣೆ ಮಾಡಿತ್ತು. ಆದರೆ, ದಿನಾಂಕವನ್ನು ಎಲ್ಲಿಯೂ ಘೋಷಣೆ ಮಾಡಿರಲಿಲ್ಲ. ಪ್ರೋಮೋ ರಿಲೀಸ್​ ಮಾಡಿದ ​ಮೇಲೂ ಬಿಗ್​ ಬಾಸ್​ ಆರಂಭಕ್ಕೆ ಏಕಿಷ್ಟು ತಡ ಎನ್ನುವುದು ಸದ್ಯ ಅಭಿಮಾನಿಗಳ ಪ್ರಶ್ನೆ ಆಗಿತ್ತು ಎಂದು ಅಭಿಮಾನಿಗಳು ಪ್ರಶ್ನೆ ಮಾಡಿದ್ದರು.

ಬಿಗ್​ ಬಾಸ್​ ಮನೆ ಒಳಗೆ ಯಾರೆಲ್ಲ ಹೋಗುತ್ತಾರೆ ಎನ್ನುವ ಚರ್ಚೆ ಜೋರಾಗಿದೆ. ಪ್ರತಿಬಾರಿಯೂ ಬಿಗ್​ ಬಾಸ್​ ಆರಂಭದ ದಿನವೇ ಮನೆ ಒಳಗೆ ಹೋಗುವ ಅಭ್ಯರ್ಥಿಯ ಹೆಸರು ಅಧಿಕೃತವಾಗುತ್ತದೆ. ಆದಾಗ್ಯೂ, ಕೆಲವರು ಹೆಸರು ಸಾಮಾಜಿಕ ಜಾಲತಾಣದಲ್ಲಿ ಸೋರಿಕೆ ಹರಿದಾಡುತ್ತವೆ.ಈ ಬಾರಿ, ಜೊತೆ ಜೊತೆಯಲಿ ಧಾರಾವಾಹಿ ನಟ ಅನಿರುದ್ಧ ಜಕ್ಕರ್​, ಗಾಯಕ ಹನುಮಂತ, ನಯನಾ, ನಟಿ ವಿನಯಾ ಪ್ರಸಾದ್, ಟಿವಿ ಆ್ಯಂಕರ್​ ಅಮರ್​ ಪ್ರಸಾದ್​, ಕಿರುತೆರೆ ನಟಿ ವೈಷ್ಣವಿ ಗೌಡ, ನಟ ಸುನಿಲ್​, ವಿನಯ್​ ಗುರೂಜಿ, ರವಿಶಂಕರ್​ ಗೌಡ ಬಿಗ್​ ಬಾಸ್​ ಮನೆ ಸೇರಲಿರುವ ಅಭ್ಯರ್ಥಿಗಳು ಎನ್ನಲಾಗುತ್ತಿದೆ.

ಇದನ್ನೂ ಓದಿ: Bigg Boss Kannada 8: ಬಿಗ್​ ಬಾಸ್​ ಮನೆಯಷ್ಟೇ ಅಲ್ಲ; ಸಾರಥಿ ಕಿಚ್ಚ ಚಹರೆಯೂ ಬದಲಾಗಿದೆ! ಏನದು? ಇಲ್ಲಿದೆ ನೋಡಿ…

Published On - 8:39 pm, Mon, 15 February 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!