AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ 8 ಆರಂಭಕ್ಕೆ ಕಿಚ್ಚ ಜೋಯಿಸರು ಕೊನೆಗೂ ನೀಡಿದ್ರು ಮುಹೂರ್ತ!

Bigg Boss Kannada: ಬಿಗ್​ ಬಾಸ್​ 8 ಫೆಬ್ರವರಿಯಿಂದ ಆರಂಭವಾಗಲಿದೆ ಎಂದು ವಾಹಿನಿ ಈ ಮೊದಲು ಘೋಷಣೆ ಮಾಡಿತ್ತು. ಆದರೆ, ದಿನಾಂಕವನ್ನು ಎಲ್ಲಿಯೂ ಘೋಷಣೆ ಮಾಡಿರಲಿಲ್ಲ. ಈಗ ಇದಕ್ಕೆ ಉತ್ತರ ಸಿಕ್ಕಂತಾಗಿದೆ.

Bigg Boss Kannada: ಬಿಗ್​ ಬಾಸ್​ 8 ಆರಂಭಕ್ಕೆ ಕಿಚ್ಚ ಜೋಯಿಸರು ಕೊನೆಗೂ ನೀಡಿದ್ರು ಮುಹೂರ್ತ!
ಬಿಗ್​ ಬಾಸ್​ನಲ್ಲಿ ಸುದೀಪ್​
ರಾಜೇಶ್ ದುಗ್ಗುಮನೆ
|

Updated on:Feb 15, 2021 | 8:41 PM

Share

ಕನ್ನಡ ಬಿಗ್​ ಬಾಸ್​ ಯಾವಾಗ ಆರಂಭವಾಗಲಿದೆ ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಕಿಚ್ಚ ಜೋಯಿಸರು ಕನ್ನಡ ಬಿಗ್​ ಬಾಸ್​ 8ನೇ ಸೀಸನ್​ ಆರಂಭಿಸುವುದಕ್ಕೆ ಮುಹೂರ್ತ ನೀಡಿದ್ದಾರೆ. ಇದೇ ಫೆಬ್ರವರಿ 28ರಿಂದ ಬಿಗ್​ ಬಾಸ್ ಪ್ರೇಕ್ಷಕರಿಗೆ ಮನರಂಜನೆ ನೀಡಲಿದೆ. ಈ ಮೊದಲು ಜೋಯಿಸರ ಲುಕ್​ನಲ್ಲಿ ಕಾಣಿಸಿಕೊಂಡಿದ್ದರು ಸುದೀಪ್​. ಕೆಂಪು ಬಣ್ಣದ ಬಟ್ಟೆ ತೊಟ್ಟಿದ್ದ ಅವರು, ತಲೆಗೆ ಪೇಟ ಸುತ್ತಿದ್ದರು. ಹಣೆಯಲ್ಲಿ ದೊಡ್ಡ ತಿಲಕ, ಕೊರಳಲ್ಲಿ ದೊಡ್ಡ ದೊಡ್ಡ ಸರ, ಭುಜಕ್ಕೆ ಶಾಲು ತೊಟ್ಟು ಜೋಯಿಸರ ಅವತಾರದಲ್ಲಿ ಬಂದಿದ್ದರು. ಈಗಲೂ ಅದೇ ಅವತಾರದಲ್ಲಿ ಪ್ರೇಕ್ಷಕರ ಎದುರು ಬಂದ ಸುದೀಪ್​, ಬಿಗ್​ ಬಾಸ್​ ಆರಂಭದ ದಿನಾಂಕ ಘೋಷಣೆ ಮಾಡಿದ್ದಾರೆ. 

ಬಿಗ್​ ಬಾಸ್​ ಫೆಬ್ರವರಿ 28ರಂದು ಬಿಗ್​ ಬಾಸ್ ಕಾರ್ಯಕ್ರಮ ನಡೆಯಲಿದೆ. ಅಂದು ನಡೆಯುವ ಕಾರ್ಯಕ್ರಮದಲ್ಲಿ ಎಲ್ಲಾ ಸ್ಪರ್ಧಿಗಳನ್ನು ಬರಮಾಡಿಕೊಳ್ಳಲಾಗುತ್ತದೆ. ಬಿಗ್​ ಬಾಸ್​ 8 ಫೆಬ್ರವರಿಯಿಂದ ಆರಂಭವಾಗಲಿದೆ ಎಂದು ವಾಹಿನಿ ಈ ಮೊದಲು ಘೋಷಣೆ ಮಾಡಿತ್ತು. ಆದರೆ, ದಿನಾಂಕವನ್ನು ಎಲ್ಲಿಯೂ ಘೋಷಣೆ ಮಾಡಿರಲಿಲ್ಲ. ಪ್ರೋಮೋ ರಿಲೀಸ್​ ಮಾಡಿದ ​ಮೇಲೂ ಬಿಗ್​ ಬಾಸ್​ ಆರಂಭಕ್ಕೆ ಏಕಿಷ್ಟು ತಡ ಎನ್ನುವುದು ಸದ್ಯ ಅಭಿಮಾನಿಗಳ ಪ್ರಶ್ನೆ ಆಗಿತ್ತು ಎಂದು ಅಭಿಮಾನಿಗಳು ಪ್ರಶ್ನೆ ಮಾಡಿದ್ದರು.

ಬಿಗ್​ ಬಾಸ್​ ಮನೆ ಒಳಗೆ ಯಾರೆಲ್ಲ ಹೋಗುತ್ತಾರೆ ಎನ್ನುವ ಚರ್ಚೆ ಜೋರಾಗಿದೆ. ಪ್ರತಿಬಾರಿಯೂ ಬಿಗ್​ ಬಾಸ್​ ಆರಂಭದ ದಿನವೇ ಮನೆ ಒಳಗೆ ಹೋಗುವ ಅಭ್ಯರ್ಥಿಯ ಹೆಸರು ಅಧಿಕೃತವಾಗುತ್ತದೆ. ಆದಾಗ್ಯೂ, ಕೆಲವರು ಹೆಸರು ಸಾಮಾಜಿಕ ಜಾಲತಾಣದಲ್ಲಿ ಸೋರಿಕೆ ಹರಿದಾಡುತ್ತವೆ.ಈ ಬಾರಿ, ಜೊತೆ ಜೊತೆಯಲಿ ಧಾರಾವಾಹಿ ನಟ ಅನಿರುದ್ಧ ಜಕ್ಕರ್​, ಗಾಯಕ ಹನುಮಂತ, ನಯನಾ, ನಟಿ ವಿನಯಾ ಪ್ರಸಾದ್, ಟಿವಿ ಆ್ಯಂಕರ್​ ಅಮರ್​ ಪ್ರಸಾದ್​, ಕಿರುತೆರೆ ನಟಿ ವೈಷ್ಣವಿ ಗೌಡ, ನಟ ಸುನಿಲ್​, ವಿನಯ್​ ಗುರೂಜಿ, ರವಿಶಂಕರ್​ ಗೌಡ ಬಿಗ್​ ಬಾಸ್​ ಮನೆ ಸೇರಲಿರುವ ಅಭ್ಯರ್ಥಿಗಳು ಎನ್ನಲಾಗುತ್ತಿದೆ.

ಇದನ್ನೂ ಓದಿ: Bigg Boss Kannada 8: ಬಿಗ್​ ಬಾಸ್​ ಮನೆಯಷ್ಟೇ ಅಲ್ಲ; ಸಾರಥಿ ಕಿಚ್ಚ ಚಹರೆಯೂ ಬದಲಾಗಿದೆ! ಏನದು? ಇಲ್ಲಿದೆ ನೋಡಿ…

Published On - 8:39 pm, Mon, 15 February 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ