ಕಾಫಿ ತೋಟದ ರಸ್ತೆಯಲ್ಲಿ ಧುತ್ತನೆ ಎದುರಾದ ಕಾಡಾನೆ; ಬೈಕ್ ಸವಾರ ಬಚಾವ್!

ಹಾಸನ: ಕಾಫಿತೋಟದಿಂದ ದಿಢೀರನೆ ಕಾಡಾನೆಯೊಂದು ರಸ್ತೆಗೆ ನುಗ್ಗಿದ್ದು, ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಪಾರಾಗಿರುವ ಘಟನೆ ನಡೆದಿದೆ. ಧುತ್ತನೆ ಎದುರಿಗೇ ಆನೆ ಕಾಣಿಸಿಕೊಂಡಿದ್ದು, ಅತ್ಯಂತ ಸಮೀಪದಿಂದ ಬೈಕ್ ಸವಾರ ಪಾರಾಗಿದ್ದಾನೆ. ಆನೆ ಕಂಡು ಜನರು ಕೂಗಾಡತೊಡಗಿದ್ದಾಗ ಸವಾರ ಬೈಕ್ ತಿರುಗಿಸಿ ಮಿಂಚಿನ ವೇಗದಲ್ಲಿ ಎಸ್ಕೇಪ್ ಆಗಿದ್ದಾನೆ. ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಮಠದ ಕೊಪ್ಪಲು ಗ್ರಾಮದ ಬಳಿ ಈ ಘಟನೆ ನಡೆದಿದೆ. ಒಂಟಿ ಸಲಗವೊಂದು ಈ ಭಾಗದಲ್ಲಿ ಹಲವು ದಿನಗಳಿಂದ ಸಂಚರಿಸುತ್ತಿರುವ ಬಗ್ಗೆ […]

ಕಾಫಿ ತೋಟದ ರಸ್ತೆಯಲ್ಲಿ ಧುತ್ತನೆ ಎದುರಾದ ಕಾಡಾನೆ; ಬೈಕ್ ಸವಾರ ಬಚಾವ್!
ಅನಾಹುತದಿಂದ ಪಾರಾದ ಬೈಕ್​ ಸವಾರ
ಸಾಧು ಶ್ರೀನಾಥ್​ Edited By:

Updated on: Jan 23, 2021 | 11:00 AM

ಹಾಸನ: ಕಾಫಿತೋಟದಿಂದ ದಿಢೀರನೆ ಕಾಡಾನೆಯೊಂದು ರಸ್ತೆಗೆ ನುಗ್ಗಿದ್ದು, ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಪಾರಾಗಿರುವ ಘಟನೆ ನಡೆದಿದೆ.

ಧುತ್ತನೆ ಎದುರಿಗೇ ಆನೆ ಕಾಣಿಸಿಕೊಂಡಿದ್ದು, ಅತ್ಯಂತ ಸಮೀಪದಿಂದ ಬೈಕ್ ಸವಾರ ಪಾರಾಗಿದ್ದಾನೆ. ಆನೆ ಕಂಡು ಜನರು ಕೂಗಾಡತೊಡಗಿದ್ದಾಗ ಸವಾರ ಬೈಕ್ ತಿರುಗಿಸಿ ಮಿಂಚಿನ ವೇಗದಲ್ಲಿ ಎಸ್ಕೇಪ್ ಆಗಿದ್ದಾನೆ. ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಮಠದ ಕೊಪ್ಪಲು ಗ್ರಾಮದ ಬಳಿ ಈ ಘಟನೆ ನಡೆದಿದೆ.

ಒಂಟಿ ಸಲಗವೊಂದು ಈ ಭಾಗದಲ್ಲಿ ಹಲವು ದಿನಗಳಿಂದ ಸಂಚರಿಸುತ್ತಿರುವ ಬಗ್ಗೆ ಮಾಹಿತಿಯಿದೆ. ಈವರೆಗೆ ಈ ಆನೆಯಿಂದ ಯಾರಿಗೂ ತೊಂದರೆ ಆಗದಿದ್ದರೂ ಕಾಡಾನೆ ಸಂಚಾರದಿಂದ ಸುತ್ತಮುತ್ತಲ ಗ್ರಾಮಸ್ಥರಲ್ಲಿ ಭೀತಿ ಹೆಚ್ಚಿದೆ. ರಸ್ತೆ, ಗ್ರಾಮ ಎಲ್ಲೆಂದರಲ್ಲಿ ಪ್ರತ್ಯಕ್ಷವಾಗಿ ಭೀತಿ ಹುಟ್ಟಿಸುತ್ತಿರೋ ಕಾಡಾನೆ ಸ್ಥಳಾಂತರಕ್ಕೆ ಜನರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

Published On - 10:59 am, Sat, 23 January 21

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us