AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಳು ಸಾಗಿಸುತ್ತಿದ್ದ ಲಾರಿಗೆ ಬೈಕ್​ ಡಿಕ್ಕಿ: ಸವಾರ ಸ್ಥಳದಲ್ಲೇ ದುರ್ಮರಣ

ವಿಜಯಪುರ: ಮರಳು ಸಾಗಿಸುತ್ತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತಿಕೋಟಾ ಪಟ್ಟಣದ ಹೊರವಲಯದಲ್ಲಿ ರಾತ್ರಿ ನಡೆದಿದೆ. ಅಶ್ವಿನಿಕುಮಾರ ಟಿ. ಕುಲಕರ್ಣಿ(40) ಮೃತ ಬೈಕ್​ ಸವಾರ. ಘಟನೆಯಲ್ಲಿ ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಶ್ವಿನಿಕುಮಾರ ನಗರದ PDJA ಹೈಸ್ಕೂಲ್​ನಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಶಿಕ್ಷಕ ಸ್ವಗ್ರಾಮ ಹೊನವಾಡದಿಂದ ವಿಜಯಪುರಕ್ಕೆ ಮರಳುವಾಗ ಅವಘಡ ಸಂಭವಿಸಿದೆ. ಇನ್ನು, ಘಟನೆ ನಡೆಯುತ್ತಿದ್ದಂತೆ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಸದ್ಯ, ಪೊಲೀಸರು […]

ಮರಳು ಸಾಗಿಸುತ್ತಿದ್ದ ಲಾರಿಗೆ ಬೈಕ್​ ಡಿಕ್ಕಿ: ಸವಾರ ಸ್ಥಳದಲ್ಲೇ ದುರ್ಮರಣ
KUSHAL V
| Updated By: ಸಾಧು ಶ್ರೀನಾಥ್​|

Updated on: Nov 18, 2020 | 10:56 AM

Share

ವಿಜಯಪುರ: ಮರಳು ಸಾಗಿಸುತ್ತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತಿಕೋಟಾ ಪಟ್ಟಣದ ಹೊರವಲಯದಲ್ಲಿ ರಾತ್ರಿ ನಡೆದಿದೆ. ಅಶ್ವಿನಿಕುಮಾರ ಟಿ. ಕುಲಕರ್ಣಿ(40) ಮೃತ ಬೈಕ್​ ಸವಾರ.

ಘಟನೆಯಲ್ಲಿ ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಶ್ವಿನಿಕುಮಾರ ನಗರದ PDJA ಹೈಸ್ಕೂಲ್​ನಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಶಿಕ್ಷಕ ಸ್ವಗ್ರಾಮ ಹೊನವಾಡದಿಂದ ವಿಜಯಪುರಕ್ಕೆ ಮರಳುವಾಗ ಅವಘಡ ಸಂಭವಿಸಿದೆ. ಇನ್ನು, ಘಟನೆ ನಡೆಯುತ್ತಿದ್ದಂತೆ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಸದ್ಯ, ಪೊಲೀಸರು ಲಾರಿಯನ್ನು ಜಪ್ತಿ ಮಾಡಿದ್ದಾರೆ.