AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ವೈ ಬಣಕ್ಕೆ ನೀರು ಕುಡಿಸಿ ಶಿವಮೊಗ್ಗ ಮೇಯರ್ ಪಟ್ಟ ಅಲಂಕರಿಸಿದ ಈಶ್ವರಪ್ಪ ಬಣ

ಶಿವಮೊಗ್ಗ: ಮಹಾನಗರ ಪಾಲಿಕೆ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಆಯ್ಕೆಯಾಗಿದ್ದು, ಉಪಮೇಯರ್ ಆಗಿ ಸುರೇಖಾ ಮುರಳೀಧರ್​ ಆಯ್ಕೆಯಾಗಿದ್ದಾರೆ. ಈ ಮೂಲಕ ಪಾಲಿಕೆಯಲ್ಲಿ ತಮ್ಮ ಹಿಡಿತ ಸಾಧಿಸುವಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಯಶಸ್ಸುಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಆಯ್ಕೆ: ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಪರವಾಗಿ 26 ಜನ ಸದಸ್ಯರು ಮತ ಚಲಾವಣೆ ಮಾಡಿದ್ದು, ಕಾಂಗ್ರೆಸ್​ ಅಭ್ಯರ್ಥಿ ಯಮುನಾ ರಂಗೇಗೌಡ ಪರ ಕೇವಲ 12 ಸದಸ್ಯರು ಕೈ ಎತ್ತುವ ಮೂಲಕ ಮತ ಚಲಾವಣೆ ಮಾಡಿದ್ದಾರೆ. ಉಪ […]

ಬಿಎಸ್​ವೈ ಬಣಕ್ಕೆ ನೀರು ಕುಡಿಸಿ ಶಿವಮೊಗ್ಗ ಮೇಯರ್ ಪಟ್ಟ ಅಲಂಕರಿಸಿದ ಈಶ್ವರಪ್ಪ ಬಣ
ಸಾಧು ಶ್ರೀನಾಥ್​
|

Updated on:Jan 29, 2020 | 12:52 PM

Share

ಶಿವಮೊಗ್ಗ: ಮಹಾನಗರ ಪಾಲಿಕೆ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಆಯ್ಕೆಯಾಗಿದ್ದು, ಉಪಮೇಯರ್ ಆಗಿ ಸುರೇಖಾ ಮುರಳೀಧರ್​ ಆಯ್ಕೆಯಾಗಿದ್ದಾರೆ. ಈ ಮೂಲಕ ಪಾಲಿಕೆಯಲ್ಲಿ ತಮ್ಮ ಹಿಡಿತ ಸಾಧಿಸುವಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಯಶಸ್ಸುಗಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಆಯ್ಕೆ: ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಪರವಾಗಿ 26 ಜನ ಸದಸ್ಯರು ಮತ ಚಲಾವಣೆ ಮಾಡಿದ್ದು, ಕಾಂಗ್ರೆಸ್​ ಅಭ್ಯರ್ಥಿ ಯಮುನಾ ರಂಗೇಗೌಡ ಪರ ಕೇವಲ 12 ಸದಸ್ಯರು ಕೈ ಎತ್ತುವ ಮೂಲಕ ಮತ ಚಲಾವಣೆ ಮಾಡಿದ್ದಾರೆ. ಉಪ ಮೇಯರ್ ಸ್ಥಾನಕ್ಕೆ ಬಿಜೆಪಿಯ ಸುರೇಖಾ ಮುರಳಿಧರ್ ಮತ್ತು ಕಾಂಗ್ರೆಸ್​ನಿಂದ ಮೆಹೆಕ್ ಷರೀಫ್ ಸ್ಪರ್ಧಿಸಿದ್ದರು. ಸುರೇಖಾ ಪರ 26 ಮತಗಳ ಚಲಾವಣೆಯಾಗಿದ್ದು, ಷರೀಫ್ ಪರ 12 ಮತಗಳು ಮಾತ್ರ ಚಲಾವಣೆಯಾಗಿವೆ.

ಯಡಿಯೂರಪ್ಪ ಬಣಕ್ಕೆ ಹಿನ್ನಡೆ: ಶಿವಮೊಗ್ಗ ಪಾಲಿಕೆಯಲ್ಲಿ ಸಚಿವ ಈಶ್ವರಪ್ಪ ಬಣದ ಸುವರ್ಣ ಶಂಕರ್ ಮತ್ತು ಸಿಎಂ ಯಡಿಯೂರಪ್ಪ ಬಣದ ಅನಿತಾ ರವಿಶಂಕರ್​ ನಡುವೆ ತೀವ್ರ ಪೈಪೋಟಿ ಇತ್ತು. ಇಂದು ಬೆಳಗ್ಗೆ ಬಿಜೆಪಿ ಕಚೇರಿಯಲ್ಲಿ ಈಶ್ವರಪ್ಪ ನೇತೃತ್ವದಲ್ಲಿ ಸಭೆ ನಡೆಸಿ ಅಂತಿಮವಾಗಿ ಸುವರ್ಣ ಶಂಕರ್ ಅವರನ್ನು ಆಯ್ಕೆ ಮಾಡಲಾಯ್ತು. ಕೊನೆಗೂ ಮೇಯರ್ ರೇಸ್​ನಲ್ಲಿ ಈಶ್ವರಪ್ಪ ಬಣದ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಈಶ್ವರಪ್ಪ ನಿರಾಳರಾಗಿದ್ದಾರೆ.

Published On - 12:51 pm, Wed, 29 January 20

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!