AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ವೈ ಬಣಕ್ಕೆ ನೀರು ಕುಡಿಸಿ ಶಿವಮೊಗ್ಗ ಮೇಯರ್ ಪಟ್ಟ ಅಲಂಕರಿಸಿದ ಈಶ್ವರಪ್ಪ ಬಣ

ಶಿವಮೊಗ್ಗ: ಮಹಾನಗರ ಪಾಲಿಕೆ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಆಯ್ಕೆಯಾಗಿದ್ದು, ಉಪಮೇಯರ್ ಆಗಿ ಸುರೇಖಾ ಮುರಳೀಧರ್​ ಆಯ್ಕೆಯಾಗಿದ್ದಾರೆ. ಈ ಮೂಲಕ ಪಾಲಿಕೆಯಲ್ಲಿ ತಮ್ಮ ಹಿಡಿತ ಸಾಧಿಸುವಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಯಶಸ್ಸುಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಆಯ್ಕೆ: ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಪರವಾಗಿ 26 ಜನ ಸದಸ್ಯರು ಮತ ಚಲಾವಣೆ ಮಾಡಿದ್ದು, ಕಾಂಗ್ರೆಸ್​ ಅಭ್ಯರ್ಥಿ ಯಮುನಾ ರಂಗೇಗೌಡ ಪರ ಕೇವಲ 12 ಸದಸ್ಯರು ಕೈ ಎತ್ತುವ ಮೂಲಕ ಮತ ಚಲಾವಣೆ ಮಾಡಿದ್ದಾರೆ. ಉಪ […]

ಬಿಎಸ್​ವೈ ಬಣಕ್ಕೆ ನೀರು ಕುಡಿಸಿ ಶಿವಮೊಗ್ಗ ಮೇಯರ್ ಪಟ್ಟ ಅಲಂಕರಿಸಿದ ಈಶ್ವರಪ್ಪ ಬಣ
ಸಾಧು ಶ್ರೀನಾಥ್​
|

Updated on:Jan 29, 2020 | 12:52 PM

Share

ಶಿವಮೊಗ್ಗ: ಮಹಾನಗರ ಪಾಲಿಕೆ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಆಯ್ಕೆಯಾಗಿದ್ದು, ಉಪಮೇಯರ್ ಆಗಿ ಸುರೇಖಾ ಮುರಳೀಧರ್​ ಆಯ್ಕೆಯಾಗಿದ್ದಾರೆ. ಈ ಮೂಲಕ ಪಾಲಿಕೆಯಲ್ಲಿ ತಮ್ಮ ಹಿಡಿತ ಸಾಧಿಸುವಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಯಶಸ್ಸುಗಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಆಯ್ಕೆ: ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಪರವಾಗಿ 26 ಜನ ಸದಸ್ಯರು ಮತ ಚಲಾವಣೆ ಮಾಡಿದ್ದು, ಕಾಂಗ್ರೆಸ್​ ಅಭ್ಯರ್ಥಿ ಯಮುನಾ ರಂಗೇಗೌಡ ಪರ ಕೇವಲ 12 ಸದಸ್ಯರು ಕೈ ಎತ್ತುವ ಮೂಲಕ ಮತ ಚಲಾವಣೆ ಮಾಡಿದ್ದಾರೆ. ಉಪ ಮೇಯರ್ ಸ್ಥಾನಕ್ಕೆ ಬಿಜೆಪಿಯ ಸುರೇಖಾ ಮುರಳಿಧರ್ ಮತ್ತು ಕಾಂಗ್ರೆಸ್​ನಿಂದ ಮೆಹೆಕ್ ಷರೀಫ್ ಸ್ಪರ್ಧಿಸಿದ್ದರು. ಸುರೇಖಾ ಪರ 26 ಮತಗಳ ಚಲಾವಣೆಯಾಗಿದ್ದು, ಷರೀಫ್ ಪರ 12 ಮತಗಳು ಮಾತ್ರ ಚಲಾವಣೆಯಾಗಿವೆ.

ಯಡಿಯೂರಪ್ಪ ಬಣಕ್ಕೆ ಹಿನ್ನಡೆ: ಶಿವಮೊಗ್ಗ ಪಾಲಿಕೆಯಲ್ಲಿ ಸಚಿವ ಈಶ್ವರಪ್ಪ ಬಣದ ಸುವರ್ಣ ಶಂಕರ್ ಮತ್ತು ಸಿಎಂ ಯಡಿಯೂರಪ್ಪ ಬಣದ ಅನಿತಾ ರವಿಶಂಕರ್​ ನಡುವೆ ತೀವ್ರ ಪೈಪೋಟಿ ಇತ್ತು. ಇಂದು ಬೆಳಗ್ಗೆ ಬಿಜೆಪಿ ಕಚೇರಿಯಲ್ಲಿ ಈಶ್ವರಪ್ಪ ನೇತೃತ್ವದಲ್ಲಿ ಸಭೆ ನಡೆಸಿ ಅಂತಿಮವಾಗಿ ಸುವರ್ಣ ಶಂಕರ್ ಅವರನ್ನು ಆಯ್ಕೆ ಮಾಡಲಾಯ್ತು. ಕೊನೆಗೂ ಮೇಯರ್ ರೇಸ್​ನಲ್ಲಿ ಈಶ್ವರಪ್ಪ ಬಣದ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಈಶ್ವರಪ್ಪ ನಿರಾಳರಾಗಿದ್ದಾರೆ.

Published On - 12:51 pm, Wed, 29 January 20

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ