AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ವೈ ಬಣಕ್ಕೆ ನೀರು ಕುಡಿಸಿ ಶಿವಮೊಗ್ಗ ಮೇಯರ್ ಪಟ್ಟ ಅಲಂಕರಿಸಿದ ಈಶ್ವರಪ್ಪ ಬಣ

ಶಿವಮೊಗ್ಗ: ಮಹಾನಗರ ಪಾಲಿಕೆ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಆಯ್ಕೆಯಾಗಿದ್ದು, ಉಪಮೇಯರ್ ಆಗಿ ಸುರೇಖಾ ಮುರಳೀಧರ್​ ಆಯ್ಕೆಯಾಗಿದ್ದಾರೆ. ಈ ಮೂಲಕ ಪಾಲಿಕೆಯಲ್ಲಿ ತಮ್ಮ ಹಿಡಿತ ಸಾಧಿಸುವಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಯಶಸ್ಸುಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಆಯ್ಕೆ: ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಪರವಾಗಿ 26 ಜನ ಸದಸ್ಯರು ಮತ ಚಲಾವಣೆ ಮಾಡಿದ್ದು, ಕಾಂಗ್ರೆಸ್​ ಅಭ್ಯರ್ಥಿ ಯಮುನಾ ರಂಗೇಗೌಡ ಪರ ಕೇವಲ 12 ಸದಸ್ಯರು ಕೈ ಎತ್ತುವ ಮೂಲಕ ಮತ ಚಲಾವಣೆ ಮಾಡಿದ್ದಾರೆ. ಉಪ […]

ಬಿಎಸ್​ವೈ ಬಣಕ್ಕೆ ನೀರು ಕುಡಿಸಿ ಶಿವಮೊಗ್ಗ ಮೇಯರ್ ಪಟ್ಟ ಅಲಂಕರಿಸಿದ ಈಶ್ವರಪ್ಪ ಬಣ
ಸಾಧು ಶ್ರೀನಾಥ್​
|

Updated on:Jan 29, 2020 | 12:52 PM

Share

ಶಿವಮೊಗ್ಗ: ಮಹಾನಗರ ಪಾಲಿಕೆ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಆಯ್ಕೆಯಾಗಿದ್ದು, ಉಪಮೇಯರ್ ಆಗಿ ಸುರೇಖಾ ಮುರಳೀಧರ್​ ಆಯ್ಕೆಯಾಗಿದ್ದಾರೆ. ಈ ಮೂಲಕ ಪಾಲಿಕೆಯಲ್ಲಿ ತಮ್ಮ ಹಿಡಿತ ಸಾಧಿಸುವಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಯಶಸ್ಸುಗಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಆಯ್ಕೆ: ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಪರವಾಗಿ 26 ಜನ ಸದಸ್ಯರು ಮತ ಚಲಾವಣೆ ಮಾಡಿದ್ದು, ಕಾಂಗ್ರೆಸ್​ ಅಭ್ಯರ್ಥಿ ಯಮುನಾ ರಂಗೇಗೌಡ ಪರ ಕೇವಲ 12 ಸದಸ್ಯರು ಕೈ ಎತ್ತುವ ಮೂಲಕ ಮತ ಚಲಾವಣೆ ಮಾಡಿದ್ದಾರೆ. ಉಪ ಮೇಯರ್ ಸ್ಥಾನಕ್ಕೆ ಬಿಜೆಪಿಯ ಸುರೇಖಾ ಮುರಳಿಧರ್ ಮತ್ತು ಕಾಂಗ್ರೆಸ್​ನಿಂದ ಮೆಹೆಕ್ ಷರೀಫ್ ಸ್ಪರ್ಧಿಸಿದ್ದರು. ಸುರೇಖಾ ಪರ 26 ಮತಗಳ ಚಲಾವಣೆಯಾಗಿದ್ದು, ಷರೀಫ್ ಪರ 12 ಮತಗಳು ಮಾತ್ರ ಚಲಾವಣೆಯಾಗಿವೆ.

ಯಡಿಯೂರಪ್ಪ ಬಣಕ್ಕೆ ಹಿನ್ನಡೆ: ಶಿವಮೊಗ್ಗ ಪಾಲಿಕೆಯಲ್ಲಿ ಸಚಿವ ಈಶ್ವರಪ್ಪ ಬಣದ ಸುವರ್ಣ ಶಂಕರ್ ಮತ್ತು ಸಿಎಂ ಯಡಿಯೂರಪ್ಪ ಬಣದ ಅನಿತಾ ರವಿಶಂಕರ್​ ನಡುವೆ ತೀವ್ರ ಪೈಪೋಟಿ ಇತ್ತು. ಇಂದು ಬೆಳಗ್ಗೆ ಬಿಜೆಪಿ ಕಚೇರಿಯಲ್ಲಿ ಈಶ್ವರಪ್ಪ ನೇತೃತ್ವದಲ್ಲಿ ಸಭೆ ನಡೆಸಿ ಅಂತಿಮವಾಗಿ ಸುವರ್ಣ ಶಂಕರ್ ಅವರನ್ನು ಆಯ್ಕೆ ಮಾಡಲಾಯ್ತು. ಕೊನೆಗೂ ಮೇಯರ್ ರೇಸ್​ನಲ್ಲಿ ಈಶ್ವರಪ್ಪ ಬಣದ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಈಶ್ವರಪ್ಪ ನಿರಾಳರಾಗಿದ್ದಾರೆ.

Published On - 12:51 pm, Wed, 29 January 20

Follow Us
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್