AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾ ಉಪಚುನಾವಣೆ: ಸತ್ಯನಾರಾಯಣ ಕುಟುಂಬದವರಿಗೇ ಬಿಜೆಪಿ ಗಾಳ?

ಬೆಂಗಳೂರು: ಶಿರಾ ಕ್ಷೇತ್ರದ ಶಾಸಕರಾಗಿದ್ದ ಸತ್ಯನಾರಾಯಣ ನಿಧನದ ನಂತರ ಈ ಕ್ಷೇತ್ರಕ್ಕಾಗಿ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ತಾಲೀಮು ಆರಂಭಿಸಿದ್ದು, ತಂತ್ರ ಮಂತ್ರಗಳೊಂದಿಗೆ ಉಪಚುನಾವಣೆ ಗೆಲ್ಲಲು ಬೇಕಾಗುವ ಅಗತ್ಯ ಚಿಕಿತ್ಸೆ ಹಾಗೂ ಔಷಧಿಗಾಗಿ ಉಪಮುಖ್ಯಮಂತ್ರಿ ಡಾ. ಅಶ್ವಥ್‌ ನಾರಾಯಣ್‌ ಅವರಿಗೆ ಸೂಚಿಸಿದೆ. ಈ ಸಂಬಂಧ ತಯಾರಿ ಆರಂಭಿಸಿರುವ ಡಿಸಿಎಂ ಅಶ್ವಥ್ ನಾರಾಯಣ ವರಿಷ್ಠರ ಸೂಚನೆಯಂತೆ ತುಮಕೂರು ಜಿಲ್ಲಾ ಬಿಜೆಪಿ ನಾಯಕರೊಂದಿಗೆ ಮೊದಲ ಸುತ್ತಿನ ಸಭೆ ಮಾಡಿ ಚರ್ಚಿಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ ಮತ್ತು ಕಳೆದ ಬಾರಿಯ ಚುನಾವಣಾ […]

ಶಿರಾ ಉಪಚುನಾವಣೆ: ಸತ್ಯನಾರಾಯಣ ಕುಟುಂಬದವರಿಗೇ ಬಿಜೆಪಿ ಗಾಳ?
Guru
Guru| Edited By: ಸಾಧು ಶ್ರೀನಾಥ್​|

Updated on: Aug 25, 2020 | 3:40 PM

Share

ಬೆಂಗಳೂರು: ಶಿರಾ ಕ್ಷೇತ್ರದ ಶಾಸಕರಾಗಿದ್ದ ಸತ್ಯನಾರಾಯಣ ನಿಧನದ ನಂತರ ಈ ಕ್ಷೇತ್ರಕ್ಕಾಗಿ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ತಾಲೀಮು ಆರಂಭಿಸಿದ್ದು, ತಂತ್ರ ಮಂತ್ರಗಳೊಂದಿಗೆ ಉಪಚುನಾವಣೆ ಗೆಲ್ಲಲು ಬೇಕಾಗುವ ಅಗತ್ಯ ಚಿಕಿತ್ಸೆ ಹಾಗೂ ಔಷಧಿಗಾಗಿ ಉಪಮುಖ್ಯಮಂತ್ರಿ ಡಾ. ಅಶ್ವಥ್‌ ನಾರಾಯಣ್‌ ಅವರಿಗೆ ಸೂಚಿಸಿದೆ.

ಈ ಸಂಬಂಧ ತಯಾರಿ ಆರಂಭಿಸಿರುವ ಡಿಸಿಎಂ ಅಶ್ವಥ್ ನಾರಾಯಣ ವರಿಷ್ಠರ ಸೂಚನೆಯಂತೆ ತುಮಕೂರು ಜಿಲ್ಲಾ ಬಿಜೆಪಿ ನಾಯಕರೊಂದಿಗೆ ಮೊದಲ ಸುತ್ತಿನ ಸಭೆ ಮಾಡಿ ಚರ್ಚಿಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ ಮತ್ತು ಕಳೆದ ಬಾರಿಯ ಚುನಾವಣಾ ಅಭ್ಯರ್ಥಿಯಲ್ಲದೇ ಇತರ ಮುಖಂಡರ ಜೊತೆಗೂ ಒಂದು ಸುತ್ತಿನ ಸಭೆಯನ್ನು ಅಶ್ವಥ್ ನಾರಾಯಣ್ ನಡೆಸಿದ್ದಾರೆ.

ಒಕ್ಕಲಿಗರಿಗೆ ಈ ಬಾರಿ ಟಿಕೆಟ್ ಕೊಟ್ಟು ಅವರನ್ನು ಪಕ್ಷಕ್ಕೆ ಸೆಳೆಯಬೇಕು ಎಂದು ಇದುವರೆಗೆ ನಡೆದ ಸಭೆಗಳಲ್ಲಿ ಚರ್ಚಿಸಲಾಗಿದೆ. ಹಾಗೇನೆ ಕೊನೆ ಗಳಿಗೆಯಲ್ಲಿ ಸುರೇಶ್ ಗೌಡರನ್ನು ಕಣಕ್ಕಿಳಿಸುವ ಬಗ್ಗೆಯೂ ಗಂಭೀರ ಚರ್ಚೆ ನಡೆದಿದೆ. ಆದರೆ ಸುರೇಶ್ ಗೌಡ ಅವರೇ ಜಿಲ್ಲಾಧ್ಯಕ್ಷ ಆಗಿರೋದ್ರಿಂದ, ಇದುವರೆಗೂ ಯಾವುದೇ ಅಂತಿಮ ನಿರ್ಧಾರಕ್ಕೆ ಬರಲು ಅವರಿಗೆ ಆಗಿಲ್ಲ.

ಇನ್ನು ದಿ. ಶಾಸಕ ಸತ್ಯನಾರಾಯಣ ಕುಟುಂಬ ಸದಸ್ಯರ ಮೇಲೂ ಬಿಜೆಪಿ ಕಣ್ಣಿಟ್ಟಿದೆ. ಹೀಗಾಗಿಯೇ ಇತ್ತೀಚೆಗೆ ಸತ್ಯನಾರಾಯಣ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದ ಡಿಸಿಎಂ ಡಾ. ಅಶ್ವಥ್‌ ನಾರಾಯಣ್‌, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಈ ಸಂದರ್ಭದಲ್ಲಿ ಡಿಸಿಎಂ ಜೊತೆಗೆ ಸತ್ಯನಾರಾಯಣ ನಿವಾಸಕ್ಕೆ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಕೂಡಾ ತೆರಳಿದ್ದರು.

Follow Us
Guru
Guru
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ