ದೇವರಿಗೆ ಪ್ರಥಮ ಪೂಜೆ ಸಲ್ಲಿಸುವ ವಿಚಾರಕ್ಕೆ ಬಿಜೆಪಿ-ಜೆಡಿಎಸ್​ ಮುಖಂಡರ ಗಲಾಟೆ!

ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಬಿಲ್ಲೇನಹಳ್ಳಿ ಗ್ರಾಮದಲ್ಲಿ ದೇವರಿಗೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಜೆಡಿಎಸ್-ಬಿಜೆಪಿ ಮುಖಂಡರ ಮಧ್ಯೆ ಗಲಾಟೆಯಾಗಿದೆ. ಗವಿರಂಗನಾಥಸ್ವಾಮಿಯ ರಥೋತ್ಸವ ವೇಳೆ ಪೂಜೆ ವಿಚಾರಕ್ಕೆ ದೇವಾಲಯದಲ್ಲೇ ಜಗಳವಾಗಿದೆ. ಗವಿರಂಗನಾಥಸ್ವಾಮಿಗೆ ಮೊದಲು ನಾನು ಪೂಜೆ ಮಾಡಬೇಕು ಎಂದು ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹೇಳಿದ್ದಾರೆ. ಈ ಕ್ಷೇತ್ರದ ಶಾಸಕರು ಮೊದಲ ಪೂಜೆ ಮಾಡಬೇಕು ಎಂದು ಬಿಜೆಪಿ ಶಾಸಕ ನಾರಾಯಣಗೌಡ ಹಾಗೂ ಬೆಂಬಲಿಗರು ಗಲಾಟೆ ಮಾಡಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ […]

ದೇವರಿಗೆ ಪ್ರಥಮ ಪೂಜೆ ಸಲ್ಲಿಸುವ ವಿಚಾರಕ್ಕೆ ಬಿಜೆಪಿ-ಜೆಡಿಎಸ್​ ಮುಖಂಡರ ಗಲಾಟೆ!
ಸಾಧು ಶ್ರೀನಾಥ್​

Updated on: Jan 17, 2020 | 9:07 AM

ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಬಿಲ್ಲೇನಹಳ್ಳಿ ಗ್ರಾಮದಲ್ಲಿ ದೇವರಿಗೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಜೆಡಿಎಸ್-ಬಿಜೆಪಿ ಮುಖಂಡರ ಮಧ್ಯೆ ಗಲಾಟೆಯಾಗಿದೆ. ಗವಿರಂಗನಾಥಸ್ವಾಮಿಯ ರಥೋತ್ಸವ ವೇಳೆ ಪೂಜೆ ವಿಚಾರಕ್ಕೆ ದೇವಾಲಯದಲ್ಲೇ ಜಗಳವಾಗಿದೆ.

ಗವಿರಂಗನಾಥಸ್ವಾಮಿಗೆ ಮೊದಲು ನಾನು ಪೂಜೆ ಮಾಡಬೇಕು ಎಂದು ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹೇಳಿದ್ದಾರೆ. ಈ ಕ್ಷೇತ್ರದ ಶಾಸಕರು ಮೊದಲ ಪೂಜೆ ಮಾಡಬೇಕು ಎಂದು ಬಿಜೆಪಿ ಶಾಸಕ ನಾರಾಯಣಗೌಡ ಹಾಗೂ ಬೆಂಬಲಿಗರು ಗಲಾಟೆ ಮಾಡಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದಾರೆ.

ಜಗಳದ ವೇಳೆ ಮಧ್ಯಪ್ರವೇಶ ಮಾಡಿದ ಪೊಲೀಸರು, ಜೆಡಿಎಸ್​ ಮತ್ತು ಬಿಜೆಪಿ ಬೆಂಬಲಿಗರನ್ನು ಸಮಾಧಾನ ಪಡಿಸಿ ರಾಜಹುಲಿ ದಿನೇಶ್‌ರನ್ನು ಕರೆದುಕೊಂಡು ಹೋಗಿದ್ದಾರೆ. ಗಲಾಟೆ ನಿಂತ ಬಳಿಕ ಶಾಸಕ ನಾರಾಯಣಗೌಡ ಮೊದಲ ಪೂಜೆ ಸಲ್ಲಿಸಿದ್ದಾರೆ.



Published On - 9:07 am, Fri, 17 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us