AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP ಮುಖಂಡನ ಜೊತೆ ‘ಖಾಕಿ’ ಜೂಜಾಟ.. ದಾಳಿ ಬೀಳ್ತಿದ್ದಂತೆ ಜೂಜಾಡ್ತಿದ್ದ ಪೊಲೀಸರು ಎಸ್ಕೇಪ್!

ಧಾರವಾಡ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆಯಂತೆ ಬಿಜೆಪಿ ಮುಖಂಡನೊಬ್ಬನ ಜೊತೆ ಸೇರಿ ಪೊಲೀಸರೇ ಜೂಜಾಡಿರುವ ಘಟನೆ ಜಿಲ್ಲೆಯ ಮುಮ್ಮಿಗಟ್ಟಿಯ ಬಳಿ ನಡೆದಿದೆ. ಜಿಲ್ಲೆಯ ವಿವಿಧ ಠಾಣೆಯ ಪೊಲೀಸ್ ಸಿಬ್ಬಂದಿ ಬಿಜೆಪಿ ಮುಖಂಡ ಅನಿಲ ಉಳವಣ್ಣವರ್ ಜೊತೆ ಸೇರಿ ಮುಮ್ಮಿಗಟ್ಟಿಯ ಹೋಟೆಲ್​ವೊಂದರ ಹಿಂಬದಿಯಲ್ಲಿ ಜೂಜಾಡುತ್ತಿದ್ದರು ಎಂದು ತಿಳಿದುಬಂದಿದೆ. ಈ ವೇಳೆ ಜೂಜು ಅಡ್ಡೆಯ ಮೇಲೆ ಗರಗ ಠಾಣೆಯ ಪೊಲೀಸರು ದಾಳಿ ನಡೆಸಿದರು. ಸುತ್ತಮುತ್ತಲ ಮೂರು ಠಾಣೆಗಳ ಪೊಲೀಸರು ಜೂಜಾಟಕ್ಕೆ ಕುಳಿತಿದ್ದರು! DySP ರವಿ ನಾಯ್ಕ್ ನೇತೃತ್ವದಲ್ಲಿ […]

BJP ಮುಖಂಡನ ಜೊತೆ ‘ಖಾಕಿ’ ಜೂಜಾಟ.. ದಾಳಿ ಬೀಳ್ತಿದ್ದಂತೆ ಜೂಜಾಡ್ತಿದ್ದ ಪೊಲೀಸರು ಎಸ್ಕೇಪ್!
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on: Nov 12, 2020 | 12:32 PM

Share

ಧಾರವಾಡ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆಯಂತೆ ಬಿಜೆಪಿ ಮುಖಂಡನೊಬ್ಬನ ಜೊತೆ ಸೇರಿ ಪೊಲೀಸರೇ ಜೂಜಾಡಿರುವ ಘಟನೆ ಜಿಲ್ಲೆಯ ಮುಮ್ಮಿಗಟ್ಟಿಯ ಬಳಿ ನಡೆದಿದೆ.

ಜಿಲ್ಲೆಯ ವಿವಿಧ ಠಾಣೆಯ ಪೊಲೀಸ್ ಸಿಬ್ಬಂದಿ ಬಿಜೆಪಿ ಮುಖಂಡ ಅನಿಲ ಉಳವಣ್ಣವರ್ ಜೊತೆ ಸೇರಿ ಮುಮ್ಮಿಗಟ್ಟಿಯ ಹೋಟೆಲ್​ವೊಂದರ ಹಿಂಬದಿಯಲ್ಲಿ ಜೂಜಾಡುತ್ತಿದ್ದರು ಎಂದು ತಿಳಿದುಬಂದಿದೆ. ಈ ವೇಳೆ ಜೂಜು ಅಡ್ಡೆಯ ಮೇಲೆ ಗರಗ ಠಾಣೆಯ ಪೊಲೀಸರು ದಾಳಿ ನಡೆಸಿದರು.

ಸುತ್ತಮುತ್ತಲ ಮೂರು ಠಾಣೆಗಳ ಪೊಲೀಸರು ಜೂಜಾಟಕ್ಕೆ ಕುಳಿತಿದ್ದರು! DySP ರವಿ ನಾಯ್ಕ್ ನೇತೃತ್ವದಲ್ಲಿ ರೇಡ್ ನಡೆಸಲಾಯಿತು. ಅಡ್ಡೆ ಮೇಲೆ ದಾಳಿ ಬೀಳುತ್ತಿದ್ದಂತೆ ಜೂಜಾಡುತ್ತಿದ್ದ ಕೆಲ ಪೊಲೀಸರು ಸಿಕ್ಕಿಬಿದ್ದಿದ್ದಾರೆ. ಮತ್ತೆ ಕೆಲವರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಈ ನಡುವೆ, ಪೊಲೀಸರು ಬಿಜೆಪಿ ಮುಖಂಡ ಅನಿಲ ಉಳವಣ್ಣವರ್​ನ ಅರೆಸ್ಟ್​ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ, ಸ್ಥಳದಲ್ಲಿದ್ದ 35,050 ರೂಪಾಯಿ ನಗದು ಹಾಗೂ 5 ಬೈಕ್‌ಗಳನ್ನು ಸಹ ವಶಕ್ಕೆ ಪಡೆದಿದ್ದಾರೆ.

ದಾಳಿಯಲ್ಲಿ ಸಿಕ್ಕ ಸಿಬ್ಬಂದಿಯೆಲ್ಲಾ ಗರಗ ಠಾಣೆ, ಧಾರವಾಡ ಗ್ರಾಮೀಣ ಠಾಣೆ ಹಾಗೂ DAR ಪಡೆಯ ಪೊಲೀಸರು ಎಂದು ಹೇಳಲಾಗಿದೆ. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ