AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಾನಂದ ಕಾಶಪ್ಪನವರ್ ಅಂದ್ರೆ ಯಾರು? ಬಾರಲ್ಲಿ ಗಲಾಟೆ ಮಾಡಿಕೊಂಡನಲ್ಲ ಅವನಾ? -ವಿಜಯೇಂದ್ರ ಟಾಂಗ್​

BY Vijayendra: ವಿಜಯಾನಂದ ಕಾಶಪ್ಪನವರ್ ಅಂದ್ರೆ ಯಾರು? ಬಾರಲ್ಲಿ ಕೂತು ಗಲಾಟೆ ಮಾಡಿಕೊಂಡನಲ್ಲ ಅವನಾ? ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ BJPರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

ವಿಜಯಾನಂದ ಕಾಶಪ್ಪನವರ್ ಅಂದ್ರೆ ಯಾರು? ಬಾರಲ್ಲಿ ಗಲಾಟೆ ಮಾಡಿಕೊಂಡನಲ್ಲ ಅವನಾ? -ವಿಜಯೇಂದ್ರ ಟಾಂಗ್​
ಬಿ.ವೈ.ವಿಜಯೇಂದ್ರ
KUSHAL V
|

Updated on:Feb 13, 2021 | 6:24 PM

Share

ಮೈಸೂರು: ವಿಜಯಾನಂದ ಕಾಶಪ್ಪನವರ್ ಅಂದ್ರೆ ಯಾರು? ಬಾರಲ್ಲಿ ಕೂತು ಗಲಾಟೆ ಮಾಡಿಕೊಂಡನಲ್ಲ ಅವನಾ? ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ BJP ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ಕಾಶಪ್ಪನವರ್ ಅಂದ್ರೆ ಮಾಜಿ ಶಾಸಕನಾ ಅಥವಾ ಬಾರಲ್ಲಿ ಕುಳಿತು ಗಲಾಟೆ ಮಾಡಿಕೊಂಡನಲ್ಲ ಅವನಾ? ಎಂದು ವಿಜಯಾನಂದ ಕಾಶಪ್ಪನವರ್ ಆರೋಪಕ್ಕೆ ತಿರುಗೇಟು ಕೊಟ್ಟರು. 

ಹಾದಿ ಬೀದಿಯಲ್ಲಿ ನಿಂತು ಹೇಳಿಕೆಗಳನ್ನು ನೀಡಬಾರದು. ಯಾರ ಯೋಗ್ಯತೆ ಏನು ಎಂಬುದು ಎಲ್ಲರಿಗೂ ಗೊತ್ತಿದೆ. BJP ಉಪಾಧ್ಯಕ್ಷನಾಗಿ ಇತಿಮಿತಿಯಲ್ಲಿ ಕೆಲಸ ಮಾಡ್ತಿದ್ದೇನೆ. ಯಾವ ಹೋರಾಟವನ್ನೂ ದಿಕ್ಕುತಪ್ಪಿಸುವ ಕೆಲಸ ಮಾಡಿಲ್ಲ. ಅದು ನನಗೆ ಸಂಬಂಧಪಟ್ಟ ವಿಚಾರವೂ ಅಲ್ಲ ಎಂದು ವಿಜಯೇಂದ್ರ ತಿರುಗೇಟು ಕೊಟ್ಟರು.

‘ಮೀಸಲಾತಿ ಹೋರಾಟಗಳು ರಾಜಕೀಯ ಲಾಭಕ್ಕೆ ಬಳಕೆಯಾಗುತ್ತಿದೆ’ ಮೀಸಲಾತಿ ಹೋರಾಟಗಳು ರಾಜಕೀಯ ಲಾಭಕ್ಕೆ ಬಳಕೆಯಾಗುತ್ತಿದೆ ಎಂದು BJP ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಶ್ರೀಗಳಿಂದ ಮೀಸಲಾತಿ ಹೋರಾಟಕ್ಕೆ ನಮ್ಮ ತಕರಾರು ಇಲ್ಲ. ತಮ್ಮ ಸಮುದಾಯದ ಪರವಾಗಿ ಶ್ರೀಗಳು ಹೋರಾಟ ಮಾಡುವುದು ಸರಿ. ಆದ್ರೆ ಕೆಲವರು ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಇದು ಬೇಸರದ ಸಂಗತಿಯೆಂದು ಬಿ.ವೈ.ವಿಜಯೇಂದ್ರ ಹೇಳಿದರು.

ಈ ಹಿಂದೆ, ಸಿಎಂ ಪುತ್ರ ವಿಜಯೇಂದ್ರ 300 ಕ್ಕೂ ಹೆಚ್ಚು ಪೂಜ್ಯರನ್ನು ಸೇರಿಸಿ ನಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ.‌ ಸ್ವಾಮೀಜಿಗಳ‌ ಮೂಲಕ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡಬಾರದೆಂದು ಒತ್ತಡ ಹೇರುವ ಕೆಲಸ‌ ನಡೆಯುತ್ತಿದೆ. ವಿಜಯೇಂದ್ರ ನಡೆಸುತ್ತಿರುವ ಷಡ್ಯಂತ ಸ್ಪಷ್ಟವಾಗಿ ಕಾಣುತ್ತಿದೆ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಆರೋಪಿಸಿದ್ದರು.

ಪಂಚಮಸಾಲಿ ಪಾದಯಾತ್ರೆ ವೇಳೆಯೇ ಸ್ವಾಮೀಜಿಗಳನ್ನು ಸೇರಿಸಬೇಕಿತ್ತಾ ? ವಿಜಯೇಂದ್ರ ಷಡ್ಯಂತ್ರ ನಡೆಯಲ್ಲ.‌ ವಿಧಾನಸೌಧಕ್ಕೆ ಮುತ್ತಿಗೆ ಹಾಕಲ್ಲ, ಧರಣಿ ಮಾಡುತ್ತೇವೆ ಎಂದು ಹೇಳಿದ್ದೇವೆ.‌ ಒಂದು ವೇಳೆ, ನಮ್ಮ ಹೋರಾಟ ಹತ್ತಿಕ್ಕುವ ಕೆಲಸ ಮಾಡಿದ್ರೆ ಉಗ್ರ ಹೋರಾಟ ನಡೆಯಲಿದೆ ಎಂದು ಕಾಶಪ್ಪನವರ್ ಹೇಳಿದ್ದರು.

ಇದನ್ನೂ ಓದಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹೋರಾಟ: ಫೆ. 21ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಸಮಾವೇಶ

Published On - 5:27 pm, Sat, 13 February 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು