‘ಅನರ್ಹರಿಗೆ ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಹಣ ನೀಡಿ ಮೈತ್ರಿ ಸರ್ಕಾರ ಕೆಡವಿದ್ದಾರೆ’

ಬೆಂಗಳೂರು: ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರ ಕೆಡವಲು ಅನರ್ಹ ಶಾಸಕರಿಗೆ ಬಿಜೆಪಿಯವರು ಕೋಟ್ಯಂತರ ರೂಪಾಯಿ ಕೊಟ್ಟಿದ್ದಾರೆ. ನೈಟ್ ಕ್ಲಬ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರಿಂದ ಹಣ ಪಡೆದು ಆ ಹಣವನ್ನೇ ಅನರ್ಹ ಶಾಸಕರಿಗೆ ಕೊಟ್ಟಿದ್ದಾರೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನೈಟ್ ಕ್ಲಬ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಿಲ್ಲಿಸಲು ಕ್ರಮ ಕೈಗೊಂಡಿದ್ದೆ. ಆದ್ರೆ, ಅದನ್ನು ಪುನರಾರಂಭಿಸಲು ದಂಧೆಕೋರರಿಗೆ ಸಹಾಯ ಮಾಡುವುದಾಗಿ ಬಿಜೆಪಿಯವರು ವಾಗ್ದಾನ ನೀಡಿದ್ದಾರೆ. ಈ ಮೂಲಕ ದಂಧೆಕೋರರಿಂದ […]

‘ಅನರ್ಹರಿಗೆ ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಹಣ ನೀಡಿ ಮೈತ್ರಿ ಸರ್ಕಾರ ಕೆಡವಿದ್ದಾರೆ’
ಸಾಧು ಶ್ರೀನಾಥ್​

Updated on: Nov 24, 2019 | 6:04 PM

ಬೆಂಗಳೂರು: ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರ ಕೆಡವಲು ಅನರ್ಹ ಶಾಸಕರಿಗೆ ಬಿಜೆಪಿಯವರು ಕೋಟ್ಯಂತರ ರೂಪಾಯಿ ಕೊಟ್ಟಿದ್ದಾರೆ. ನೈಟ್ ಕ್ಲಬ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರಿಂದ ಹಣ ಪಡೆದು ಆ ಹಣವನ್ನೇ ಅನರ್ಹ ಶಾಸಕರಿಗೆ ಕೊಟ್ಟಿದ್ದಾರೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನೈಟ್ ಕ್ಲಬ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಿಲ್ಲಿಸಲು ಕ್ರಮ ಕೈಗೊಂಡಿದ್ದೆ. ಆದ್ರೆ, ಅದನ್ನು ಪುನರಾರಂಭಿಸಲು ದಂಧೆಕೋರರಿಗೆ ಸಹಾಯ ಮಾಡುವುದಾಗಿ ಬಿಜೆಪಿಯವರು ವಾಗ್ದಾನ ನೀಡಿದ್ದಾರೆ. ಈ ಮೂಲಕ ದಂಧೆಕೋರರಿಂದ ಹಣ ವಸೂಲಿ ಮಾಡಿ ಅನರ್ಹ ಶಾಸಕರಿಗೆ ನೀಡಿದ್ದಾರೆಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

Published On - 6:01 pm, Sun, 24 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us