AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ ರಾಜೇಶ್ವರಿನಗರ ಅಸೆಂಬ್ಲಿ ಕ್ಷೇತ್ರದಲ್ಲಿ BJPಗೆ ಒಳ ಏಟು ಬೀಳುವ ಆತಂಕ

ಬೆಂಗಳೂರು: RR ನಗರ ವಿಧಾನಸಭೆ ಉಪ ಚುನಾವಣೆ ವಿಚಾರವಾಗಿ BJP ಟಿಕೆಟ್ ಪಡೆಯುವ ವಿಚಾರದಲ್ಲಿ ಪಕ್ಷದ ನಾಯಕ ಮುನಿರತ್ನಗೆ ಸ್ವಲ್ಪ ಹಿನ್ನಡೆಯಾಗಿದೆ ಎಂದು ತಿಳಿದುಬಂದಿದೆ. ಟಿಕೆಟ್ ಘೋಷಣೆ ವೇಳೆ ತನ್ನ ಹೆಸರು ಮಾತ್ರ ಇರುತ್ತದೆ. RR ನಗರಕ್ಕೆ ತನ್ನ ಹೆಸರೇ ಫೈನಲ್ ಎಂದು ಮುನಿರತ್ನ ನಂಬಿದ್ರು. ಆದ್ರೆ ಈಗ ಎರಡು ಹೆಸರು ಇರುವ ಕಾರಣ ಮುನಿರತ್ನಗೆ ಟೆನ್ಷನ್ ಶುರುವಾಗಿದೆ. ರಾಜ್ಯ ನಾಯಕರನ್ನು ಟಿಕೆಟ್ ವಿಚಾರದಲ್ಲಿ ಸಂಪೂರ್ಣವಾಗಿ ನಂಬುವಂತಿಲ್ಲ. ಮತ್ತೊಬ್ಬ ಬಿಜೆಪಿ ನಾಯಕ ತುಳಸಿ ಮುನಿರಾಜು ಗೌಡಗೆ ವರಿಷ್ಠರ […]

ರಾಜ ರಾಜೇಶ್ವರಿನಗರ ಅಸೆಂಬ್ಲಿ ಕ್ಷೇತ್ರದಲ್ಲಿ BJPಗೆ ಒಳ ಏಟು ಬೀಳುವ ಆತಂಕ
KUSHAL V
|

Updated on: Oct 02, 2020 | 10:41 AM

Share

ಬೆಂಗಳೂರು: RR ನಗರ ವಿಧಾನಸಭೆ ಉಪ ಚುನಾವಣೆ ವಿಚಾರವಾಗಿ BJP ಟಿಕೆಟ್ ಪಡೆಯುವ ವಿಚಾರದಲ್ಲಿ ಪಕ್ಷದ ನಾಯಕ ಮುನಿರತ್ನಗೆ ಸ್ವಲ್ಪ ಹಿನ್ನಡೆಯಾಗಿದೆ ಎಂದು ತಿಳಿದುಬಂದಿದೆ.

ಟಿಕೆಟ್ ಘೋಷಣೆ ವೇಳೆ ತನ್ನ ಹೆಸರು ಮಾತ್ರ ಇರುತ್ತದೆ. RR ನಗರಕ್ಕೆ ತನ್ನ ಹೆಸರೇ ಫೈನಲ್ ಎಂದು ಮುನಿರತ್ನ ನಂಬಿದ್ರು. ಆದ್ರೆ ಈಗ ಎರಡು ಹೆಸರು ಇರುವ ಕಾರಣ ಮುನಿರತ್ನಗೆ ಟೆನ್ಷನ್ ಶುರುವಾಗಿದೆ. ರಾಜ್ಯ ನಾಯಕರನ್ನು ಟಿಕೆಟ್ ವಿಚಾರದಲ್ಲಿ ಸಂಪೂರ್ಣವಾಗಿ ನಂಬುವಂತಿಲ್ಲ. ಮತ್ತೊಬ್ಬ ಬಿಜೆಪಿ ನಾಯಕ ತುಳಸಿ ಮುನಿರಾಜು ಗೌಡಗೆ ವರಿಷ್ಠರ ಬೆಂಬಲ ಇರುವ ಕಾರಣ ನಂಬುವಂತಿಲ್ಲ ಎಂಬುದು ಮುನಿರತ್ನರ ಚಿಂತನೆಯಾಗಿದೆ.

ತುಳಸಿ ಮುನಿರಾಜು ಗೌಡಗೆ BL ಸಂತೋಷ್ ಕೃಪೆ ಕೊನೆಯ ಕ್ಷಣದಲ್ಲಿ ದೆಹಲಿ ಮಟ್ಟದಲ್ಲಿ ಬದಲಾವಣೆ ಆದ್ರೂ ಆಗಬಹುದು. ತುಳಸಿ ಮುನಿರಾಜು ಗೌಡಗೆ ಹಿರಿಯ ಮುಖಂಡ BL ಸಂತೋಷ್ ಅವರ ಸಂಪೂರ್ಣ ಬೆಂಬಲ ಇದೆ. ಹಾಗಾಗಿ, ತುಳಸಿ ಮುನಿರಾಜು ಗೌಡಗೆ ಪರ್ಯಾಯ ವ್ಯವಸ್ಥೆ ಏನು ಎಂದು ನಿರ್ಧಾರ ಆಗಬೇಕಿದೆ. ದೆಹಲಿ ಮಟ್ಟದಲ್ಲಿ ತುಳಸಿ ಮುನಿರಾಜು ಗೌಡಗೆ ಪರ್ಯಾಯ ವ್ಯವಸ್ಥೆ ಆಗಬೇಕಿದೆ. ಇದೇ ಕಾರಣಕ್ಕೆ ಕೋರ್ ಕಮಿಟಿಯಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಆಗಿಲ್ಲ ಎಂದು ತಿಳಿದುಬಂದಿದೆ.

ಸದ್ಯ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಟಿಕೇಟ್ ಯಾರಿಗೆ ಎಂದು ಇನ್ನೂ ನಿರ್ಧಾರ ಆಗಿಲ್ಲ. ಮುನಿರತ್ನ ಒಬ್ಬರ ಹೆಸರನ್ನಷ್ಟೇ ದೆಹಲಿಗೆ ಕಳುಹಿಸಿದ್ರೆ ಸಮಸ್ಯೆ ಎದುರಾಗಬಹುದು. ಒಂದು ವೇಳೆ, ದೆಹಲಿ ಮಟ್ಟದಲ್ಲಿ ಮುನಿರತ್ನ ಹೆಸರು ಒಪ್ಪಿಕೊಳ್ಳದೇ ಇದ್ದಲ್ಲಿ ಕೋರ್ ಕಮಿಟಿಗೆ ಹಿನ್ನಡೆಯಾಗಲಿದೆ.

ರಾಜ್ಯ ಕೋರ್ ಕಮಿಟಿಗೆ ಹಿನ್ನಡೆಯಾಗುವ ಹಿನ್ನಲೆಯಲ್ಲಿ ಎರಡು ಹೆಸರನ್ನು ಶಿಫಾರಸು ಮಾಡಲಾಗಿದೆಯಂತೆ. ಎರಡು ಹೆಸರು ಶಿಫಾರಸು ಮಾಡಿದರೂ ಮುನಿರತ್ನಗೆ ಟಿಕೇಟ್ ಕೊಡಿಸುವ ವಿಶ್ವಾಸವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೀಡಿದ್ದಾರಂತೆ.

ಹೀಗಾಗಿ, ಘೋಷಣೆ ಆಗುವವರೆಗೂ ಅಭ್ಯರ್ಥಿ ಯಾರು ಎಂದು ನಿರ್ಧರಿಸಲು ಸಾದ್ಯವಿಲ್ಲ. ಒಂದು ವೇಳೆ ತುಳಸಿ ಮುನಿರಾಜು ಗೌಡಗೆ ಪರ್ಯಾಯ ವ್ಯವಸ್ಥೆ ಆಗದೇ ಇದ್ದಲ್ಲಿ ಸಮಸ್ಯೆ ಎದುರಾಗಬಹುದು. ಇದರಿಂದ, ರಾಜರಾಜೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಗೆ ಒಳ ಏಟು ಬೀಳುವ ಆತಂಕವೂ ಇದೆ. ಹೀಗಾಗಿ, ದೆಹಲಿಗೆ ಎರಡು ಹೆಸರು ಕಳುಹಿಸಿ ಸಮಸ್ಯೆ ಬಗೆಹರಿಸಲು ಬಿಜೆಪಿ ಪ್ರಯತ್ನ ನಡೆಸಿದೆ ಎಂಬ ಮಾಹಿತಿ ಸಿಕ್ಕಿದೆ.

ಪಾಕಿಸ್ತಾನದಲ್ಲಿ ಭಾರೀ ಪ್ರವಾಹ; 116 ಸಾವು, 253 ಜನರಿಗೆ ಗಾಯ
ಪಾಕಿಸ್ತಾನದಲ್ಲಿ ಭಾರೀ ಪ್ರವಾಹ; 116 ಸಾವು, 253 ಜನರಿಗೆ ಗಾಯ
ಮನೆಯಂಗಳಕ್ಕೆ ಉರುಳಿ ಬಂದ ಕಲ್ಲು, ಮಣ್ಣು ಮತ್ತು ಗಿಡಗಳು
ಮನೆಯಂಗಳಕ್ಕೆ ಉರುಳಿ ಬಂದ ಕಲ್ಲು, ಮಣ್ಣು ಮತ್ತು ಗಿಡಗಳು
ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ
ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ
ಶ್ರೀರಾಮುಲು ಮಾತುಗಳಲ್ಲಿ ಸ್ಪಷ್ಟತೆಯ ಕೊರತೆ, ಮಾತುಗಳಲ್ಲಿ ಗೊಂದಲ
ಶ್ರೀರಾಮುಲು ಮಾತುಗಳಲ್ಲಿ ಸ್ಪಷ್ಟತೆಯ ಕೊರತೆ, ಮಾತುಗಳಲ್ಲಿ ಗೊಂದಲ
3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ
3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ
ರವಿಚಂದ್ರನ್ ಅವರನ್ನು ಅಳುವಂತೆ ಮಾಡಿದ ಏಕೈಕ ಸಿನಿಮಾ ಇದು
ರವಿಚಂದ್ರನ್ ಅವರನ್ನು ಅಳುವಂತೆ ಮಾಡಿದ ಏಕೈಕ ಸಿನಿಮಾ ಇದು
ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್
ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್
ವಿಶ್ವ ನಂ.1 ಕಾರ್ಲ್ಸನ್​ಗೆ ಸೋಲುಣಿಸಿದ ಮತ್ತೊಬ್ಬ ಭಾರತೀಯ
ವಿಶ್ವ ನಂ.1 ಕಾರ್ಲ್ಸನ್​ಗೆ ಸೋಲುಣಿಸಿದ ಮತ್ತೊಬ್ಬ ಭಾರತೀಯ
ಶಾಸಕರು ಅನುದಾನಗಳಿಗಾಗಿ ಸುರ್ಜೇವಾಲಾರನ್ನು ಭೇಟಿಯಾಗುತ್ತಿದ್ದಾರೆ: ನಿಖಿಲ್
ಶಾಸಕರು ಅನುದಾನಗಳಿಗಾಗಿ ಸುರ್ಜೇವಾಲಾರನ್ನು ಭೇಟಿಯಾಗುತ್ತಿದ್ದಾರೆ: ನಿಖಿಲ್