AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ ರಾಜೇಶ್ವರಿನಗರ ಅಸೆಂಬ್ಲಿ ಕ್ಷೇತ್ರದಲ್ಲಿ BJPಗೆ ಒಳ ಏಟು ಬೀಳುವ ಆತಂಕ

ಬೆಂಗಳೂರು: RR ನಗರ ವಿಧಾನಸಭೆ ಉಪ ಚುನಾವಣೆ ವಿಚಾರವಾಗಿ BJP ಟಿಕೆಟ್ ಪಡೆಯುವ ವಿಚಾರದಲ್ಲಿ ಪಕ್ಷದ ನಾಯಕ ಮುನಿರತ್ನಗೆ ಸ್ವಲ್ಪ ಹಿನ್ನಡೆಯಾಗಿದೆ ಎಂದು ತಿಳಿದುಬಂದಿದೆ. ಟಿಕೆಟ್ ಘೋಷಣೆ ವೇಳೆ ತನ್ನ ಹೆಸರು ಮಾತ್ರ ಇರುತ್ತದೆ. RR ನಗರಕ್ಕೆ ತನ್ನ ಹೆಸರೇ ಫೈನಲ್ ಎಂದು ಮುನಿರತ್ನ ನಂಬಿದ್ರು. ಆದ್ರೆ ಈಗ ಎರಡು ಹೆಸರು ಇರುವ ಕಾರಣ ಮುನಿರತ್ನಗೆ ಟೆನ್ಷನ್ ಶುರುವಾಗಿದೆ. ರಾಜ್ಯ ನಾಯಕರನ್ನು ಟಿಕೆಟ್ ವಿಚಾರದಲ್ಲಿ ಸಂಪೂರ್ಣವಾಗಿ ನಂಬುವಂತಿಲ್ಲ. ಮತ್ತೊಬ್ಬ ಬಿಜೆಪಿ ನಾಯಕ ತುಳಸಿ ಮುನಿರಾಜು ಗೌಡಗೆ ವರಿಷ್ಠರ […]

ರಾಜ ರಾಜೇಶ್ವರಿನಗರ ಅಸೆಂಬ್ಲಿ ಕ್ಷೇತ್ರದಲ್ಲಿ BJPಗೆ ಒಳ ಏಟು ಬೀಳುವ ಆತಂಕ
KUSHAL V
|

Updated on: Oct 02, 2020 | 10:41 AM

Share

ಬೆಂಗಳೂರು: RR ನಗರ ವಿಧಾನಸಭೆ ಉಪ ಚುನಾವಣೆ ವಿಚಾರವಾಗಿ BJP ಟಿಕೆಟ್ ಪಡೆಯುವ ವಿಚಾರದಲ್ಲಿ ಪಕ್ಷದ ನಾಯಕ ಮುನಿರತ್ನಗೆ ಸ್ವಲ್ಪ ಹಿನ್ನಡೆಯಾಗಿದೆ ಎಂದು ತಿಳಿದುಬಂದಿದೆ.

ಟಿಕೆಟ್ ಘೋಷಣೆ ವೇಳೆ ತನ್ನ ಹೆಸರು ಮಾತ್ರ ಇರುತ್ತದೆ. RR ನಗರಕ್ಕೆ ತನ್ನ ಹೆಸರೇ ಫೈನಲ್ ಎಂದು ಮುನಿರತ್ನ ನಂಬಿದ್ರು. ಆದ್ರೆ ಈಗ ಎರಡು ಹೆಸರು ಇರುವ ಕಾರಣ ಮುನಿರತ್ನಗೆ ಟೆನ್ಷನ್ ಶುರುವಾಗಿದೆ. ರಾಜ್ಯ ನಾಯಕರನ್ನು ಟಿಕೆಟ್ ವಿಚಾರದಲ್ಲಿ ಸಂಪೂರ್ಣವಾಗಿ ನಂಬುವಂತಿಲ್ಲ. ಮತ್ತೊಬ್ಬ ಬಿಜೆಪಿ ನಾಯಕ ತುಳಸಿ ಮುನಿರಾಜು ಗೌಡಗೆ ವರಿಷ್ಠರ ಬೆಂಬಲ ಇರುವ ಕಾರಣ ನಂಬುವಂತಿಲ್ಲ ಎಂಬುದು ಮುನಿರತ್ನರ ಚಿಂತನೆಯಾಗಿದೆ.

ತುಳಸಿ ಮುನಿರಾಜು ಗೌಡಗೆ BL ಸಂತೋಷ್ ಕೃಪೆ ಕೊನೆಯ ಕ್ಷಣದಲ್ಲಿ ದೆಹಲಿ ಮಟ್ಟದಲ್ಲಿ ಬದಲಾವಣೆ ಆದ್ರೂ ಆಗಬಹುದು. ತುಳಸಿ ಮುನಿರಾಜು ಗೌಡಗೆ ಹಿರಿಯ ಮುಖಂಡ BL ಸಂತೋಷ್ ಅವರ ಸಂಪೂರ್ಣ ಬೆಂಬಲ ಇದೆ. ಹಾಗಾಗಿ, ತುಳಸಿ ಮುನಿರಾಜು ಗೌಡಗೆ ಪರ್ಯಾಯ ವ್ಯವಸ್ಥೆ ಏನು ಎಂದು ನಿರ್ಧಾರ ಆಗಬೇಕಿದೆ. ದೆಹಲಿ ಮಟ್ಟದಲ್ಲಿ ತುಳಸಿ ಮುನಿರಾಜು ಗೌಡಗೆ ಪರ್ಯಾಯ ವ್ಯವಸ್ಥೆ ಆಗಬೇಕಿದೆ. ಇದೇ ಕಾರಣಕ್ಕೆ ಕೋರ್ ಕಮಿಟಿಯಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಆಗಿಲ್ಲ ಎಂದು ತಿಳಿದುಬಂದಿದೆ.

ಸದ್ಯ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಟಿಕೇಟ್ ಯಾರಿಗೆ ಎಂದು ಇನ್ನೂ ನಿರ್ಧಾರ ಆಗಿಲ್ಲ. ಮುನಿರತ್ನ ಒಬ್ಬರ ಹೆಸರನ್ನಷ್ಟೇ ದೆಹಲಿಗೆ ಕಳುಹಿಸಿದ್ರೆ ಸಮಸ್ಯೆ ಎದುರಾಗಬಹುದು. ಒಂದು ವೇಳೆ, ದೆಹಲಿ ಮಟ್ಟದಲ್ಲಿ ಮುನಿರತ್ನ ಹೆಸರು ಒಪ್ಪಿಕೊಳ್ಳದೇ ಇದ್ದಲ್ಲಿ ಕೋರ್ ಕಮಿಟಿಗೆ ಹಿನ್ನಡೆಯಾಗಲಿದೆ.

ರಾಜ್ಯ ಕೋರ್ ಕಮಿಟಿಗೆ ಹಿನ್ನಡೆಯಾಗುವ ಹಿನ್ನಲೆಯಲ್ಲಿ ಎರಡು ಹೆಸರನ್ನು ಶಿಫಾರಸು ಮಾಡಲಾಗಿದೆಯಂತೆ. ಎರಡು ಹೆಸರು ಶಿಫಾರಸು ಮಾಡಿದರೂ ಮುನಿರತ್ನಗೆ ಟಿಕೇಟ್ ಕೊಡಿಸುವ ವಿಶ್ವಾಸವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೀಡಿದ್ದಾರಂತೆ.

ಹೀಗಾಗಿ, ಘೋಷಣೆ ಆಗುವವರೆಗೂ ಅಭ್ಯರ್ಥಿ ಯಾರು ಎಂದು ನಿರ್ಧರಿಸಲು ಸಾದ್ಯವಿಲ್ಲ. ಒಂದು ವೇಳೆ ತುಳಸಿ ಮುನಿರಾಜು ಗೌಡಗೆ ಪರ್ಯಾಯ ವ್ಯವಸ್ಥೆ ಆಗದೇ ಇದ್ದಲ್ಲಿ ಸಮಸ್ಯೆ ಎದುರಾಗಬಹುದು. ಇದರಿಂದ, ರಾಜರಾಜೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಗೆ ಒಳ ಏಟು ಬೀಳುವ ಆತಂಕವೂ ಇದೆ. ಹೀಗಾಗಿ, ದೆಹಲಿಗೆ ಎರಡು ಹೆಸರು ಕಳುಹಿಸಿ ಸಮಸ್ಯೆ ಬಗೆಹರಿಸಲು ಬಿಜೆಪಿ ಪ್ರಯತ್ನ ನಡೆಸಿದೆ ಎಂಬ ಮಾಹಿತಿ ಸಿಕ್ಕಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ