
ದಾವಣಗೆರೆ: ಹೊನ್ನಾಳಿ ಪಟ್ಟಣದಿಂದ ಗ್ರಾಮೀಣ ಪ್ರದೇಶಗಳಿಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ತಾವೇ ಬಸ್ ಚಲಾಯಿಸಿಕೊಂಡು ಹೋಗಿದ್ದಾರೆ. ಕೆಎಸ್ಆರ್ಟಿಸಿ ಚಾಲಕನ ವೇಷ ಹಾಕಿ ರೇಣುಕಾಚಾರ್ಯ ಬಸ್ ಚಲಾಯಿಸಿದ್ದಾರೆ.
ಹೊನ್ನಾಳಿ ತಾಲೂಕಿನ ಉಜನಿಪುರ, ಬೀರಗೊಂಡನಹಳ್ಳಿ ಸೇರಿದಂತೆ ಸುಮಾರು ಹತ್ತು ಗ್ರಾಮಗಳಿಗೆ KSRTCಯಿಂದ ಬಸ್ ಸಂಚಾರ ಆರಂಭವಾಗಿದೆ. ಹೀಗಾಗಿ ಪ್ರತಿ ಗ್ರಾಮಗಳಿಗೂ ಶಾಸಕ ರೇಣುಕಾಚಾರ್ಯ ಬಸ್ ಚಲಾಯಿಸಿಕೊಂಡು ಹೋಗಿದ್ದಾರೆ.