ಪೌರತ್ವ ತಿದ್ದುಪಡಿ ಕಾಯ್ದೆ, ಬಿಎಸ್​ವೈ ಸರ್ಕಾರಕ್ಕೆ ವಿಘ್ನ ಬಾರದಂತೆ ಚಂಡಿಕಾ‌ಯಾಗ

ಕೊಪ್ಪಳ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವ್ಯಾಪಕವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯದಲ್ಲೂ ಸಹ ಪೊಲೀಸರ ಗಂಡಿನ ದಾಳಿಗೆ ಇಬ್ಬರು ಮೃತಪಟ್ಟಿದ್ದಾರೆ. ಹೀಗಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಯಾವುದೇ ವಿಘ್ನ ಬಾರದಂತೆ ಸಂಸದ ಸಂಗಣ್ಣ ಕರಡಿ ಚಂಡಿಕಾಯಾಗ ಮಾಡಿಸುತ್ತಿದ್ದಾರೆ. ಶೃಂಗೇರಿ ಮಠದ ಅರ್ಚಕರಿಂದ ತಾಲೂಕಿನ ಹುಲಗೆಮ್ಮ ದೇವಸ್ಥಾನದಲ್ಲಿ ಚಂಡಿಕಾಯಾಗ ನೆರವೇರಿಸಲಾಗುತ್ತಿದೆ. ಚಂಡಿಕಾಯಾಗದಲ್ಲಿ ಸಂಸದ ಕರಡಿ ಸಂಗಣ್ಣ ಕುಟುಂಬಸ್ಥರು ಭಾಗಿಯಾಗಿದ್ದಾರೆ. ಪ್ರತಿ ವರ್ಷ ತುಂಗಭದ್ರಾ ಜಲಾಶಯ ಭರ್ತಿಯಾದಾಗಲೂ ಚಂಡಿಕಾಯಾಗ ನೆರವೇರಿಸುತ್ತಿದ್ದರು. ಹುಲಗೆಮ್ಮ ದೇವಸ್ಥಾನದಲ್ಲಿ […]

ಪೌರತ್ವ ತಿದ್ದುಪಡಿ ಕಾಯ್ದೆ, ಬಿಎಸ್​ವೈ ಸರ್ಕಾರಕ್ಕೆ ವಿಘ್ನ ಬಾರದಂತೆ ಚಂಡಿಕಾ‌ಯಾಗ
ಸಾಧು ಶ್ರೀನಾಥ್​

Updated on: Dec 20, 2019 | 1:38 PM

ಕೊಪ್ಪಳ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವ್ಯಾಪಕವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯದಲ್ಲೂ ಸಹ ಪೊಲೀಸರ ಗಂಡಿನ ದಾಳಿಗೆ ಇಬ್ಬರು ಮೃತಪಟ್ಟಿದ್ದಾರೆ. ಹೀಗಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಯಾವುದೇ ವಿಘ್ನ ಬಾರದಂತೆ ಸಂಸದ ಸಂಗಣ್ಣ ಕರಡಿ ಚಂಡಿಕಾಯಾಗ ಮಾಡಿಸುತ್ತಿದ್ದಾರೆ.

ಶೃಂಗೇರಿ ಮಠದ ಅರ್ಚಕರಿಂದ ತಾಲೂಕಿನ ಹುಲಗೆಮ್ಮ ದೇವಸ್ಥಾನದಲ್ಲಿ ಚಂಡಿಕಾಯಾಗ ನೆರವೇರಿಸಲಾಗುತ್ತಿದೆ. ಚಂಡಿಕಾಯಾಗದಲ್ಲಿ ಸಂಸದ ಕರಡಿ ಸಂಗಣ್ಣ ಕುಟುಂಬಸ್ಥರು ಭಾಗಿಯಾಗಿದ್ದಾರೆ. ಪ್ರತಿ ವರ್ಷ ತುಂಗಭದ್ರಾ ಜಲಾಶಯ ಭರ್ತಿಯಾದಾಗಲೂ ಚಂಡಿಕಾಯಾಗ ನೆರವೇರಿಸುತ್ತಿದ್ದರು. ಹುಲಗೆಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಂಗಣ್ಣ ಕರಡಿ‌ ಚಂಡಿಕಾಯಾಗ ನೆರವೇರಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us