AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಠಾಕ್ರೆಗೆ ಏನೇ ಗೊಂದಲಗಳಿದ್ದರೂ ಅವರು ಕಾಂಗ್ರೆಸ್​ ಪಕ್ಷವನ್ನೇ ಪ್ರಶ್ನಿಸಬೇಕು -ಸಿ.ಟಿ. ರವಿ

ಭಾಷಾವಾರು ಪ್ರಾಂತ್ಯ ಮಾಡುವಾಗ ದೇಶಾದ್ಯಂತ ಕಾಂಗ್ರೆಸ್​ ಅಧಿಕಾರದಲ್ಲಿತ್ತು. ಈಗ ಉದ್ಧವ್​ ಠಾಕ್ರೆ ಅವರ ಹೆಗಲ ಮೇಲೆಯೇ ಕೂತು ಅದರ ವಿರುದ್ಧ ಮಾತನಾಡುತ್ತಿರುವುದು ವಿಪರ್ಯಾಸ.

ಇಂದು ಠಾಕ್ರೆಗೆ ಏನೇ ಗೊಂದಲಗಳಿದ್ದರೂ ಅವರು ಕಾಂಗ್ರೆಸ್​ ಪಕ್ಷವನ್ನೇ ಪ್ರಶ್ನಿಸಬೇಕು -ಸಿ.ಟಿ. ರವಿ
ಸಿ.ಡಿ.ರವಿ ಮತ್ತು ಉದ್ಧವ್​ ಠಾಕ್ರೆ
Skanda
| Edited By: ಸಾಧು ಶ್ರೀನಾಥ್​|

Updated on:Jan 18, 2021 | 12:19 PM

Share

ಚಿಕ್ಕಮಗಳೂರು: ಕರ್ನಾಟಕದ ಭೂಭಾಗ ತಮ್ಮದೆಂದು ಹೇಳುವ ಮೂಲಕ ಉದ್ಧಟತನ ತೋರುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ನೈತಿಕತೆ ಇದ್ದರೆ ಕಾಂಗ್ರೆಸ್​ ಪಕ್ಷದ ಹೆಗಲಿನಿಂದ ಕೆಳಗಿಳಿಯಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಚಿಕ್ಕಮಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ.

ಗಡಿ ವಿಚಾರವನ್ನಿಟ್ಟುಕೊಂಡು ರಾಜಕೀಯ ಬೇಳೆ ಬೇಯಿಸಿಕೊಳ್ಳುವುದು ಬಹಳ ಹಿಂದಿನಿಂದ ಬಂದಿದೆ. ಭಾಷಾವಾರು ಪ್ರಾಂತ್ಯ ರಚನೆಯಾಗಬೇಕಾದ್ರೆ ಬಿಜೆಪಿ ಅಸ್ತಿತ್ವದಲ್ಲಿರಲಿಲ್ಲ. ಈ ಕೆಲಸದ ಹಿಂದಿದ್ದಿದ್ದು ಕಾಂಗ್ರೆಸ್ ಪಕ್ಷ. ಆದರೆ, ಈಗ ಉದ್ಧವ್​ ಠಾಕ್ರೆ ಅದೇ ಕಾಂಗ್ರೆಸ್ ಪಕ್ಷದ ಹೆಗಲ ಮೇಲೆ ಕುಳಿತು ಗಡಿ ವಿಚಾರ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕನ್ನಡ ಮಾತನಾಡುವವರು ಮಹಾರಾಷ್ಟ್ರದಲ್ಲಿ ಹಾಗೂ ಮಠಾಠಿ ಮಾತನಾಡುವವರು ಕರ್ನಾಟಕದಲ್ಲಿ ಇದ್ದಾರೆ. ಕಾಸರಗೋಡು ಕರ್ನಾಟಕಕ್ಕೆ ಸೇರಿದ್ದು ಎನ್ನುವುದು ಹಲವು ವರ್ಷಗಳ ಕೂಗು. ಇದಕ್ಕೆಲ್ಲಾ ಸಂಬಂಧಿಸಿದಂತೆ ಹಲವು ಆಯೋಗಗಳು ಬಂದಿವೆ. ನಮ್ಮಲ್ಲಿ ಭಾಷಾವಾರು ಪ್ರಾಂತ್ಯ ವಿಂಗಡಣೆಯ ನಂತರವೂ ಅವರವರ ಸಾಂಪ್ರದಾಯಿಕ ಅಸ್ಮಿತೆಯನ್ನು ಉಳಿಸುವ ಕೆಲಸವನ್ನು ಭಾರತೀಯರೆಲ್ಲರೂ ಮಾಡಿಕೊಂಡು ಬಂದಿದ್ದೇವೆ. ಯಾರ ಸಾಂಸ್ಕೃತಿಕ ಅಸ್ಮಿತೆಗೆ ಧಕ್ಕೆ ತರುವ ಕೆಲಸವನ್ನೂ ಮಾಡಿಲ್ಲ ಎನ್ನುವುದನ್ನು ಗಮನಿಸಬೇಕು ಎಂದು ಹೇಳಿದ್ದಾರೆ.

ಭಾಷಾವಾರು ಪ್ರಾಂತ್ಯವಾಗುವಾಗ ನಾನಾಗಲೀ, ಉದ್ಧವ್​ ಠಾಕ್ರೆಯಾಗಲೀ ಹುಟ್ಟಿರಲಿಲ್ಲ. ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್​ ಪಕ್ಷ ಇದನ್ನೆಲ್ಲಾ ಮಾಡಿದ್ದು. ಆದ್ದರಿಂದ, ಇಂದು ಉದ್ಧವ್​ ಠಾಕ್ರೆ ಅವರಿಗೆ ಏನೇ ಗೊಂದಲಗಳಿದ್ದರೂ ಅವರಿಗೆ ಬೆಂಬಲ ನೀಡುತ್ತಿರುವ ಕಾಂಗ್ರೆಸ್​ ಪಕ್ಷವನ್ನೇ ಪ್ರಶ್ನಿಸಬೇಕು ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧಟತನ ತೋರುತ್ತಿದ್ದಾರೆ.. ಗಡಿ ಸೌಹಾರ್ದತೆ ಕದಡುತ್ತಿದ್ದಾರೆ: ಸಿಎಂ ಯಡಿಯೂರಪ್ಪ ಆಕ್ರೋಶ

Published On - 12:18 pm, Mon, 18 January 21

Follow Us
Skanda
Skanda
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ