AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್‌ಗೆ 3 ಶಾಪ ಇದೆ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿಕೆ

ಒಂದು ಕಾಲದಲ್ಲಿ 1900 ಕಾಂಗ್ರೆಸ್ ಶಾಸಕರಿದ್ದರು. ಬಿಜೆಪಿಯಿಂದ ಕೇವಲ 100 ಶಾಸಕರಿದ್ದರು. ಆದರೆ, ಈಗ 1900 ಬಿಜೆಪಿ ಶಾಸಕರಿದ್ದರೆ, 700 ಜನ ಕಾಂಗ್ರೆಸ್ ಶಾಸಕರಿದ್ದಾರೆ.

ಕಾಂಗ್ರೆಸ್‌ಗೆ 3 ಶಾಪ ಇದೆ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿಕೆ
ನಳಿನ್​ ಕುಮಾರ್ ಕಟೀಲ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Apr 06, 2022 | 9:14 PM

Share

ಮೈಸೂರು: ಕಾಂಗ್ರೆಸ್ ಪಕ್ಷಕ್ಕೆ 3 ಶಾಪವಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ. ಮೈಸೂರಿನ ಜನಸೇವಕ್ ಸಮಾವೇಶದಲ್ಲಿ ಮಾತನಾಡಿದ ಕಟೀಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷವು ಗಾಂಧಿ ವಿಚಾರಧಾರೆ ಹೆಸರಿನಲ್ಲಿ ಮತ ಪಡೆಯಿತು. ಬಳಿಕ ಅದನ್ನು ಮರೆಯಿತು. ಅಂಬೇಡ್ಕರ್ ಭಾವಚಿತ್ರವನ್ನು ಮತಕ್ಕಾಗಿ ಬಳಸಿಕೊಂಡಿತು. ಬಳಿಕ, ಅದೇ ಅಂಬೇಡ್ಕರ್‌ರನ್ನು ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಿತು. ಕಾಂಗ್ರೆಸ್ ಡಾ. ಬಿ.ಆರ್. ಅಂಬೇಡ್ಕರ್‌ಗೆ ಗೌರವ ಕೊಡಲಿಲ್ಲ. ನಂತರ, ಕಾಂಗ್ರೆಸ್ ಗೋಮಾತೆಯ ಚಿಹ್ನೆಯನ್ನು ಬಳಸಿತ್ತು. ಅದೇ ಚಿಹ್ನೆಯ ಅಡಿ ಅಧಿಕಾರವನ್ನೂ ಪಡೆಯಿತು. ಬಳಿಕ, ಗೋಭಕ್ಷಕರ ಪರ ನಿಂತಿತು. ಕೈ ಪಕ್ಷಕ್ಕೆ ಗೋಮಾತೆಯ ಶಾಪವಿದೆ. ಕಾಂಗ್ರೆಸ್‌ಗೆ ಈ ಮೂರೂ ಶಾಪವಿದೆ ಎಂದು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.

ಒಂದು ಕಾಲದಲ್ಲಿ 1,900 ಕಾಂಗ್ರೆಸ್ ಶಾಸಕರಿದ್ದರು. ಬಿಜೆಪಿಯಿಂದ ಕೇವಲ 100 ಶಾಸಕರಿದ್ದರು. ಆದರೆ, ಈಗ 1,900 ಬಿಜೆಪಿ ಶಾಸಕರಿದ್ದರೆ, 700 ಜನ ಕಾಂಗ್ರೆಸ್ ಶಾಸಕರಿದ್ದಾರೆ. ಮೋದಿ‌ ಕಾಲದಲ್ಲಿ ಜನ ಬಿಜೆಪಿಯ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಸಂಸದ ಕಟೀಲು ಕಚೇರಿಗೆ ಮುತ್ತಿಗೆ ಯತ್ನ: ಪೊಲೀಸರು, CFI ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ

Published On - 3:45 pm, Mon, 11 January 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!