
ಬೆಳಗಾವಿ: ನೀವು ಧೈರ್ಯವಂತ ಬಂಡೆ. ಎಲ್ಲವನ್ನೂ ಎದುರಿಸೋರು CBIನ ಎದುರಿಸೋಕೆ ಆಗಲ್ವಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.
‘ಜೈಲಿಂದ ಬರುವಾಗ ಮೆರವಣಿಗೆ, ಜೈಲಿಗೆ ಹೋಗುವಾಗ ಮೆರವಣಿಗೆ’
ಡಿ.ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿಯಾಗಿದೆ. ಐಟಿ ತನಿಖೆಯಾಗಿದೆ. ನಿಮಗೇಕೆ ಭಯ ಇರಬೇಕು? ಯಾಕೆ ಜನರನ್ನು ಸೇರಿಸಬೇಕು. ಜೈಲಿಂದ ಬರುವಾಗ ಮೆರವಣಿಗೆ, ಜೈಲಿಗೆ ಹೋಗುವಾಗ ಮೆರವಣಿಗೆ. ನೀವು ಸರಿ ಇದ್ರೆ ಕಾನೂನಾತ್ಮಕ ಹೋರಾಟ ಮಾಡಿ ಪರಿಶುದ್ಧರಾಗಿ ಹೊರ ಬನ್ನಿ ಎಂದು ಹೇಳಿದರು.
ಕಾನೂನಿಗೆ ಹೆದರೋದು ಏಕೆ? ನೀವು ಧೈರ್ಯವಂತ ಬಂಡೆ. ಎಲ್ಲರನ್ನೂ ಎದುರಿಸೋರು ಸಿಬಿಐ ಸಂಸ್ಥೆಯನ್ನು ಎದುರಿಸೋಕೆ ಆಗಲ್ವಾ? ಎಂದು ಡಿಕೆಶಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನೆಮಾಡಿದ್ದಾರೆ.