AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಷಡ್ಯಂತ್ರದ ‘ಮಹಾನಾಯಕ’ ಡಿ.ಕೆ.ಶಿವಕುಮಾರ್​ ಎಂಬ ಅನುಮಾನದಲ್ಲಿ ಬಿಜೆಪಿ

ಈ ಫೋಟೋ ಸತ್ಯಾಸತ್ಯತೆಯ ಬಗ್ಗೆ ಟಿವಿ9 ಕನ್ನಡ ಡಿಜಿಟಲ್​ಗೆ ಯಾವುದೇ ಮಾಹಿತಿ ಲಭಿಸಿಲ್ಲವಾದರೂ, ಬಿಜೆಪಿ ಪಕ್ಷ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಇದನ್ನು ಹಂಚಿಕೊಂಡಿರುವ ಕಾರಣ ತನಿಖೆ ಹೊಸ ಆಯಾಮ ಪಡೆಯುವ ಸಾಧ್ಯತೆ ಇದೆ.

ಸಿಡಿ ಷಡ್ಯಂತ್ರದ ‘ಮಹಾನಾಯಕ’ ಡಿ.ಕೆ.ಶಿವಕುಮಾರ್​ ಎಂಬ ಅನುಮಾನದಲ್ಲಿ ಬಿಜೆಪಿ
ಸಿಡಿ ಮಾಸ್ಟರ್​ಮೈಂಡ್​ ನರೇಶ್​ ಜೊತೆ ಡಿ.ಕೆ.ಶಿವಕುಮಾರ್​
Skanda
|

Updated on:Mar 17, 2021 | 12:06 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯ ಹಿಂದಿರುವ ‘ಮಹಾನಾಯಕ’ ಯಾರು ಎಂಬ ವಿಚಾರ ರಾಜ್ಯ ರಾಜಕಾರಣದಲ್ಲಿ ಬಹುದೊಡ್ಡ ಜಿದ್ದಾಜಿದ್ದಿಗೆ ಕಾರಣವಾಗಿದೆ. ಇದೇ ವಿಚಾರವಾಗಿ ಆಡಳಿತ ಪಕ್ಷ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಟ್ವಿಟರ್​ ಸಮರ ಕೂಡ ಶುರುವಾಗಿದ್ದು, ಆರೋಪ ಪ್ರತ್ಯರೋಪಗಳ ಸುರಿಮಳೆ ಆಗುತ್ತಿದೆ. ಈ ನಡುವೆ ಇಂದು (ಮಾರ್ಚ್​ 17) ಕರ್ನಾಟಕ ಬಿಜೆಪಿ ತನ್ನ ಅಧಿಕೃತ ಟ್ವಿಟರ್​ ಹ್ಯಾಂಡಲ್​ನಲ್ಲಿ ಫೋಟೋವೊಂದನ್ನು ಪ್ರಕಟಿಸಿದ್ದು ಸಂಚಲನಕ್ಕೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹಾಗೂ ಸಿಡಿ ಪ್ರಕರಣದ ಮಾಸ್ಟರ್​ ಮೈಂಡ್​ ಎನ್ನಲಾದ ನರೇಶ್​ ಇಬ್ಬರೂ ಜೊತೆಗೆ ನಿಂತಿರುವ ಫೋಟೋವನ್ನು ಬಿಜೆಪಿ ಟ್ವೀಟ್​ ಮಾಡಿದೆ.

ಈ ಫೋಟೋ ಸತ್ಯಾಸತ್ಯತೆಯ ಬಗ್ಗೆ ಟಿವಿ9 ಕನ್ನಡ ಡಿಜಿಟಲ್​ಗೆ ಯಾವುದೇ ಮಾಹಿತಿ ಲಭಿಸಿಲ್ಲವಾದರೂ, ಬಿಜೆಪಿ ಪಕ್ಷ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಇದನ್ನು ಹಂಚಿಕೊಂಡಿರುವ ಕಾರಣ ತನಿಖೆ ಹೊಸ ಆಯಾಮ ಪಡೆಯುವ ಸಾಧ್ಯತೆ ಇದೆ. ‘ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ? ಮಾಸ್ಟರ್‌ ಮೈಂಡ್ ಮತ್ತು ರಿಂಗ್‌ ಮಾಸ್ಟರ್ ಒಂದೇ ಫ್ರೇಮ್‌ನಲ್ಲಿ ಸಿಲುಕಿಕೊಂಡಿರುವುದಕ್ಕೂ, ನನ್ನನ್ನು ಸಿಲುಕಿಸುವ ಕುತಂತ್ರ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ? ಎನ್ನುವ ಬರಹದೊಂದಿಗೆ ಈ ಫೋಟೋವನ್ನು ಹಂಚಿಕೊಂಡಿರುವ ಬಿಜೆಪಿ, ಸಿಡಿ ಸುಳಿಯಲ್ಲಿ ಡಿ.ಕೆ.ಶಿವಕುಮಾರ್​ ಅವರನ್ನು ಸಿಲುಕಿಸಲು ಈ ಮೂಲಕ ಪ್ರಯತ್ನಿಸಿದೆ.

ಇದನ್ನೂ ಓದಿ: ಅಶ್ಲೀಲ ಸಿಡಿಯಲ್ಲಿ ಅವಾಚ್ಯ ಶಬ್ದಗಳ ಬಳಕೆ; ಕನ್ನಡಿಗರನ್ನು ನಿಂದಿಸಿದ್ದಕ್ಕಾಗಿ ರಮೇಶ್​ ಜಾರಕಿಹೊಳಿ ವಿರುದ್ಧ ದೂರು ದಾಖಲು 

ಟ್ವೀಟ್​ ಮಾಡಿ.. ಸಿಡಿ ವಿಚಾರದಲ್ಲಿ ಮಹಾನಾಯಕಿಯನ್ನು ಎಳೆದು ತಂದ ಬಿಜೆಪಿ! ಯಾರದು? 

Published On - 12:01 pm, Wed, 17 March 21

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ