AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HDK ನಮ್ಮ ಮನೆಗೆ ಬಂದಿದ್ದು ಪಕ್ಷ ವಿರೋಧಿ ಚಟುವಟಿಕೆಯಾ? ಉಚ್ಚಾಟಿತ ಬಿಜೆಪಿ ಮುಖಂಡ ಸಂತೋಷ್ ಹೊಕ್ರಾಣಿ ಪ್ರತಿಕ್ರಿಯೆ

Santosh Hokrani: HDK ನಮ್ಮ ಮನೆಗೆ ಬಂದಿದ್ದು ಪಕ್ಷ ವಿರೋಧಿ ಚಟುವಟಿಕೆಯಾ? ಇದರಲ್ಲಿ ಏನು ಪಕ್ಷ ವಿರೋಧಿ ಚಟುವಟಿಕೆ ಇದೆ. ನಿಮ್ಮ ಮನೆಗೆ ಬೇರೆ ಪಕ್ಷದವರು ಬರಲ್ವಾ, ನೀವು ಹೋಗಲ್ವಾ? ಎಂದು ಶಾಸಕ ವೀರಣ್ಣ ಚರಂತಿಮಠಗೆ ಹೊಕ್ರಾಣಿ ಪ್ರಶ್ನಿಸಿದ್ದಾರೆ.

HDK ನಮ್ಮ ಮನೆಗೆ ಬಂದಿದ್ದು ಪಕ್ಷ ವಿರೋಧಿ ಚಟುವಟಿಕೆಯಾ? ಉಚ್ಚಾಟಿತ ಬಿಜೆಪಿ ಮುಖಂಡ ಸಂತೋಷ್ ಹೊಕ್ರಾಣಿ ಪ್ರತಿಕ್ರಿಯೆ
ಉಚ್ಚಾಟಿತ ಬಿಜೆಪಿ ಮುಖಂಡ ಸಂತೋಷ್ ಹೊಕ್ರಾಣಿ
ಆಯೇಷಾ ಬಾನು
ಆಯೇಷಾ ಬಾನು|

Updated on: Feb 05, 2021 | 10:03 AM

Share

ಬಾಗಲಕೋಟೆ: ಬಿಜೆಪಿ ಮುಖಂಡನ ಮನೆಗೆ HD ಕುಮಾರಸ್ವಾಮಿ ಭೇಟಿ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸಂತೋಷ್ ಹೊಕ್ರಾಣಿ ಉಚ್ಚಾಟನೆ ಮಾಡಲಾಗಿದೆ. ಈ ಸಂಬಂಧ ಮಾತನಾಡಿದ ಅವರು ಯಾವ ಕಾರಣಕ್ಕೆ ನನ್ನನ್ನು ಉಚ್ಚಾಟಿಸಿದ್ದಾರೆಂದು ಸ್ಪಷ್ಟಪಡಿಸಲಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 18 ವರ್ಷದಲ್ಲಿ ಪಕ್ಷದ ವಿರುದ್ಧ, ಪಕ್ಷಕ್ಕೆ ಮುಜುಗರ ಆಗುವ ಯಾವ ಕೆಲಸವನ್ನು ನಾನು ಮಾಡಿದ್ದೇನೆ ಎಂದು ತಿಳಿಸಲಿ. ಪಕ್ಷಕ್ಕಾಗಿ ಹೇಗೆ ಕೆಲಸ ಮಾಡಿದ್ದೇನೆಂಬುದು ಎಲ್ಲರಿಗೂ ಗೊತ್ತು. 18 ವರ್ಷ ಕೆಲಸ ಮಾಡಿದ್ದಕ್ಕೆ ಒಳ್ಳೆಯ ಬಹುಮಾನ ಕೊಟ್ಟಿದ್ದೀರಿ. ಇದಕ್ಕೆ ಬಹಳ ಚಿರಋಣಿ ಆಗಿರುತ್ತೇನೆ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ತಮಗಾಗಿರುವ ನೋವನ್ನು ಹಂಚಿಕೊಂಡಿದ್ದಾರೆ.

ನಿಮಗಾಗಿ ಕೆಲಸ ಮಾಡಿದವರಿಗೆ ಕೊಡುವ ಬಹುಮಾನ ಇದಾ? ನಿಮಗಾಗಿ ಕೆಲಸ ಮಾಡಿದವರಿಗೆ ನೀವು ಕೊಡುವ ಬಹುಮಾನ ಇದೇನಾ ಎಂದು ಶಾಸಕ ವೀರಣ್ಣ ಚರಂತಿಮಠಗೆ ಪರೋಕ್ಷವಾಗಿ ಹೊಕ್ರಾಣಿ ಪ್ರಶ್ನೆ ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಕ್ಕೆ ಹೀಗಾ? ಯಾಕೆ ನಿಮಗೆ ಭಯ ಕಾಡ್ತಿದೆಯಾ? ನನ್ನಿಂದ ಏನು ಪಕ್ಷ ವಿರೋಧಿ ಚಟುವಟಿಕೆ ಆಗಿದೆ? HDK ನಮ್ಮ ಮನೆಗೆ ಬಂದಿದ್ದು ಪಕ್ಷ ವಿರೋಧಿ ಚಟುವಟಿಕೆಯಾ? ಇದರಲ್ಲಿ ಏನು ಪಕ್ಷ ವಿರೋಧಿ ಚಟುವಟಿಕೆ ಇದೆ. ನಿಮ್ಮ ಮನೆಗೆ ಬೇರೆ ಪಕ್ಷದವರು ಬರಲ್ವಾ, ನೀವು ಹೋಗಲ್ವಾ? ಎಂದು ಶಾಸಕ ವೀರಣ್ಣ ಚರಂತಿಮಠಗೆ ಹೊಕ್ರಾಣಿ ಪ್ರಶ್ನಿಸಿದ್ದಾರೆ.

ಈ ರೀತಿಯ ರಾಜಕಾರಣ ಮಾಡುವುದು ಸರಿಯಲ್ಲ. ಇದಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರು ಪರಿಹಾರ ನೀಡಬೇಕು. ಮುಂದಿನ ದಿನಗಳಲ್ಲಿ ನಾನು ಇದಕ್ಕೆ ಉತ್ತರಿಸುತ್ತೇನೆ. ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಶತಃಸಿದ್ಧ ಎಂದು ಉಚ್ಚಾಟಿತ ಬಿಜೆಪಿ ಮುಖಂಡ ಸಂತೋಷ್ ಹೊಕ್ರಾಣಿ ಬಾಗಲಕೋಟೆ ನಗರ ಬಿಜೆಪಿ ಘಟಕದ ಅಧ್ಯಕ್ಷರಿಗೆ ಆಗ್ರಹಿಸಿದ್ದಾರೆ.

ಪರಿಷತ್​ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ