AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯೋತ್ಸವದಲ್ಲಿ ಡ್ಯಾನ್ಸ್ ಮಾಡಿದ ಯುವಕರ ಮೇಲೆ ಹಣದ ಹೊಳೆ ಹರಿಸಿದ ಬಿಜೆಪಿ ಕಾರ್ಯಕರ್ತರು, ವಿಡಿಯೋ ವೈರಲ್

ವಿಜಯೋತ್ಸವದ ವೇಳೆ ಬಾರ್ ಗರ್ಲ್ ಮೇಲೆ ಹಣ ತೂರುವ ರೀತಿಯಲ್ಲಿ ಹಣ ತೂರಿದ್ದಾರೆ. ಹಣ ತೂರಿದ ವಿಡಿಯೋ ಈಗ ಫುಲ್ ವೈರಲ್ ಆಗಿದ್ದು, ಅವಳಿ ನಗರದ ಜನ್ರ ಆಕ್ರೋಶಕ್ಕೆ ಕಾರಣವಾಗಿದೆ.

ವಿಜಯೋತ್ಸವದಲ್ಲಿ ಡ್ಯಾನ್ಸ್ ಮಾಡಿದ ಯುವಕರ ಮೇಲೆ ಹಣದ ಹೊಳೆ ಹರಿಸಿದ ಬಿಜೆಪಿ ಕಾರ್ಯಕರ್ತರು, ವಿಡಿಯೋ ವೈರಲ್
ವಿಜಯೋತ್ಸವದಲ್ಲಿ ಡ್ಯಾನ್ಸ್ ಮಾಡಿದ ಯುವಕರ ಮೇಲೆ ಹಣದ ಹೊಳೆ ಹರಿಸಿದ ಬಿಜೆಪಿ , ಡಿಸೆಂಬರ್ 30ರ ವಿಡಿಯೋ ವೈರಲ್
TV9 Web
| Updated By: Digi Tech Desk|

Updated on:Jan 08, 2022 | 5:09 PM

Share

ಗದಗ: ಗದಗ-ಬೆಟಗೇರಿ ನಗರಸಭೆಯ ಭಾವಿ ಅಧ್ಯಕ್ಷೆ ಅಂತಲೇ ಬಿಂಬಿತರಾದ 35ನೇ ವಾರ್ಡ್ ನ ಬಿಜೆಪಿಯ ನೂತನ ಸದಸ್ಯೆ ಉಷಾ ದಾಸರ್, ವಿಜಯೋತ್ಸವದಲ್ಲಿ ಹಣದ ಹೊಳೆಯನ್ನೇ ಹರಿಸಿದ್ದಾರೆ. ಬಾರ್ ಗರ್ಲ್ ಮೇಲೆ ಹಣ ಹಾರಿಸುವ ಮಾದರಿಯಲ್ಲಿ ಡ್ಯಾನ್ಸ್ ಮಾಡುವ ಯುವಕರ ಮೇಲೆ ಹಣ ತೂರಿ ಬಿಜೆಪಿ ಕಾರ್ಯಕರ್ತರು ಉದ್ಧಟನ ಮೆರೆದಿದ್ದಾರೆ. ಇದು ವಾರ್ಡ್ 35ರ ಮತದಾರನ್ನೇ ಅವಮಾನ ಮಾಡಿದಂತೆ ಅಂತ ವಾರ್ಡ್ ಜನ್ರು ಕಿಡಿಕಾರಿದ್ದಾರೆ.

ಗದಗ-ಬೆಟಗೇರಿ ನಗರಸಭೆಯ 35ನೇ ವಾರ್ಡ್ನ ಜನ್ರು ಅಂದ್ರೆ ಸುಸಂಸ್ಕೃತ ಜನರು. ಹೀಗಾಗಿ ಈ ವಾರ್ಡ್ ನಲ್ಲಿ ಯಾವ ಅಭ್ಯರ್ಥಿಗಳಿಂದ ಹಣ ಪಡೆಯದೇ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಉಷಾ ದಾಸರ್ ಎಂಬ ಮಹಿಳೆಗೆ ಮತ ಹಾಕಿ ಆಯ್ಕೆ ಮಾಡಿದ್ದಾರೆ. ಆದ್ರೆ, ಗೆಲುವು ಸಾಧಿಸಿದ ಬಳಿಕ ವಿಜಯೋತ್ಸವ ಆಚರಣೆ ವೇಳೆ ಹಣ ತೂರುವ ಮೂಲಕ ಜವಾಬ್ದಾರಿ ಮರೆತಿದ್ದಾರೆ ಅಂತ ಜನ್ರು ಕಿಡಿಕಾರಿದ್ದಾರೆ. ಹಣ ತೂರಿ ಫುಲ್ ಡ್ಯಾನ್ಸ್‌ ಮಾಡಿದ ಘಟನೆ ಗದಗ ನಗರದ ಹುಡ್ಕೋ ಬಡಾವಣೆಯಲ್ಲಿ ನಡೆದಿದೆ. ಮೆರವಣಿಗೆ ವೇಳೆ ಬಿಜೆಪಿ ಹಣದ ಹೊಳೆ ಹರಿಸಿದೆ. 35 ನೇ ವಾರ್ಡ್ ನ ಬಿಜೆಪಿ ನೂತನ ಸದಸ್ಯೆ ಉಷಾ ದಾಸರ್ ವಿಜಯೋತ್ಸವದ ವೇಳೆ ಕಾರ್ಯಕರ್ತರು ಹಣ ತೂರಿದ್ದಾರೆ. ಡಿಸೆಂಬರ್ 30 ರಂದು ನಡೆದ ವಿಜಯೋತ್ಸವದಲ್ಲಿ ಈ ಘಟನೆ ನಡೆದಿತ್ತು.

ಉಷಾ ದಾಸರ್ ನಗರಸಸಭೆ ಅಧ್ಯಕ್ಷ ಸ್ಥಾನಕ್ಕೆ ಏರುವ ಏಕೈಕ ಮಹಿಳಾ ಸದಸ್ಯೆಯಾಗಿದ್ದು, ಈಗಾಗಲೇ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟವಾಗಿದೆ. ಗದಗ-ಬೆಟಗೇರಿ ನಗರಸಭೆ ಎಸ್ಸಿ ಮಹಿಳೆಗೆ ಮೀಸಲಿದೆ. ಹೀಗಾಗಿ ಬಿಜೆಪಿ ಪಕ್ಷದಲ್ಲೇ ಆಯ್ಕೆಯಾದ ಏಕೈಕ ಮಹಿಳಾ ಸದಸ್ಯೆ. ಹೀಗಾಗಿ ಭಾವಿ ಅಧ್ಯಕ್ಷೆ ಅಂತಲೇ ಉಷಾ ದಾಸರ ಅವಳಿ ನಗರದಲ್ಲಿ ಚರ್ಚೆನಡೆದಿದೆ. ಈ ನಡುವೆ ವಿಜಯೋತ್ಸವದ ವೇಳೆ ಬಾರ್ ಗರ್ಲ್ ಮೇಲೆ ಹಣ ತೂರುವ ರೀತಿಯಲ್ಲಿ ಹಣ ತೂರಿದ್ದಾರೆ. ಹಣ ತೂರಿದ ವಿಡಿಯೋ ಈಗ ಫುಲ್ ವೈರಲ್ ಆಗಿದ್ದು, ಅವಳಿ ನಗರದ ಜನ್ರ ಆಕ್ರೋಶಕ್ಕೆ ಕಾರಣವಾಗಿದೆ.

ಸಂಭ್ರಮಾಚರಣೆ ವೇಳೆ ಜೀಪ್ ಮೇಲೆ ಹತ್ತಿ ಓರ್ವ ಹಣ ತೂರುತ್ತಿದ್ರೆ ಇತ್ತ ಡ್ಯಾನ್ಸ್ ಮಾಡೋ ಯುವಕರು ಹಣಕ್ಕಾಗಿ ಗುದ್ದಾಟ ನಡೆಸಿದ್ದಾರೆ. ಅಧ್ಯಕ್ಷ ಗಾದಿಗೆ ಏರುವ ಜವಾಬ್ದಾರಿ ಜನಪ್ರತಿನಿಧಿಯೇ ಈ ರೀತಿ ವರ್ತನೆ ತೋರಿದ್ರೆ ಆಡಳಿತ ಹೇಗೆ ನಡೆಸ್ತಾರೆ ಅಂತ ಜನ್ರು ಕಿಡಿಕಾರಿದ್ದಾರೆ. ಜನಪ್ರತಿಗಳ ವರ್ತನೆಗೆ ಅವಳಿ ನಗರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: Local Body Elections: ಎಡವಿದ ಬಿಜೆಪಿ, ಅರಳಿದ ಕಾಂಗ್ರೆಸ್​, ಮುದುಡಿದ ಜೆಡಿಎಸ್​: ಚುನಾವಣೆ ಫಲಿತಾಂಶ ವಿಶ್ಲೇಷಣೆ

Published On - 3:57 pm, Wed, 5 January 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!