AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಿ ಸನ್ನಿಧಿಯಲ್ಲಿ ವಾಮಾಚಾರ, ನವರಾತ್ರಿ ಪೂಜೆ ಮಾಡದಿರಲು ಗ್ರಾಮಸ್ಥರ ನಿರ್ಧಾರ

ಬೆಳಗಾವಿ: ನಿನ್ನೆ ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇವಸ್ಥಾನದ ಮುಂದೆ ಕೋಳಿ ಬಲಿ ಕೊಟ್ಟು ಪೂಜೆ ಮಾಡಿರುವ ಘಟನೆ ಖಾನಾಪುರ ತಾಲೂಕಿನ ಕಾಮಸಿನಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗಿರಿಜಾದೇವಿ ದೇವರಿಗೆ ಕಿರಾತಕರು ವಾಮಾಚಾರ ಮಾಡಿದ್ದಾರೆ. ಹೀಗಾಗಿ ನವರಾತ್ರಿ ಪೂಜೆ ಮಾಡಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ನಿನ್ನೆ ಅಮಾವಾಸ್ಯೆ ಇದ್ದರಿಂದ ಕೆಲ ಕಿರಾತಕರು ಕೋಳಿ ಬಲಿ ಕೊಟ್ಟು ಗಿರಿಜಾದೇವಿ ದೇವಸ್ಥಾನದ ಮುಂದೆ ಪೂಜೆ ಮಾಡಿದ್ದಾರೆ. ಮಧ್ಯರಾತ್ರಿ ದೇವಸ್ಥಾನದ ಮುಂಭಾಗದಲ್ಲಿ ಮಾಟ ಮಂತ್ರ ಮಾಡಿದ್ದಾರೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಹುಂಜ ಕೊಯ್ದು ದೇವಸ್ಥಾನದ […]

ದೇವಿ ಸನ್ನಿಧಿಯಲ್ಲಿ ವಾಮಾಚಾರ, ನವರಾತ್ರಿ ಪೂಜೆ ಮಾಡದಿರಲು ಗ್ರಾಮಸ್ಥರ ನಿರ್ಧಾರ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 17, 2020 | 9:45 AM

Share

ಬೆಳಗಾವಿ: ನಿನ್ನೆ ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇವಸ್ಥಾನದ ಮುಂದೆ ಕೋಳಿ ಬಲಿ ಕೊಟ್ಟು ಪೂಜೆ ಮಾಡಿರುವ ಘಟನೆ ಖಾನಾಪುರ ತಾಲೂಕಿನ ಕಾಮಸಿನಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗಿರಿಜಾದೇವಿ ದೇವರಿಗೆ ಕಿರಾತಕರು ವಾಮಾಚಾರ ಮಾಡಿದ್ದಾರೆ. ಹೀಗಾಗಿ ನವರಾತ್ರಿ ಪೂಜೆ ಮಾಡಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ನಿನ್ನೆ ಅಮಾವಾಸ್ಯೆ ಇದ್ದರಿಂದ ಕೆಲ ಕಿರಾತಕರು ಕೋಳಿ ಬಲಿ ಕೊಟ್ಟು ಗಿರಿಜಾದೇವಿ ದೇವಸ್ಥಾನದ ಮುಂದೆ ಪೂಜೆ ಮಾಡಿದ್ದಾರೆ. ಮಧ್ಯರಾತ್ರಿ ದೇವಸ್ಥಾನದ ಮುಂಭಾಗದಲ್ಲಿ ಮಾಟ ಮಂತ್ರ ಮಾಡಿದ್ದಾರೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಹುಂಜ ಕೊಯ್ದು ದೇವಸ್ಥಾನದ ಬಾಗಿಲಿಗೆ ರಕ್ತ ಸಿಂಪಡಣೆ ಮಾಡಲಾಗಿದೆ.

ನಿಂಬೆಹಣ್ಣು ಸೇರಿದಂತೆ ವಿವಿಧ ಪದಾರ್ಥಗಳನ್ನ ಇಟ್ಟು ದೇವಸ್ಥಾನ ಸುತ್ತಲು ನಿಂಬೆಹಣ್ಣು ಹಾಕಿ ಮಾಟ ಮಂತ್ರ ಮಾಡಲಾಗಿದೆ. ಬೆಳಗ್ಗೆ ದೇವರ ದರ್ಶನಕ್ಕೆ ಬಂದಾಗ ಈ ದೃಶ್ಯಗಳನ್ನು ಕಂಡ ಗ್ರಾಮಸ್ಥರು ಗಾಬರಿಯಾಗಿದ್ದಾರೆ. ಮನಸಲ್ಲಿ ಆತಂಕ ಮೂಡಿದೆ. ದೇವಿಗೆ ವಾಮಾಚಾರವಾಗಿದೆ ಈ ಹಿನ್ನೆಲೆಯಲ್ಲಿ ನವರಾತ್ರಿ ಪೂಜೆ ಮಾಡದಿರಲು ಗ್ರಾಮಸ್ಥರ ನಿರ್ಧರಿಸಿದ್ದಾರೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ