AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗೆದ್ದು ಗ್ರೀನ್​ ಟೀ ಅಥವಾ ಬ್ಲಾಕ್​ ಟೀ ಕುಡಿತೀರಾ? ಹಾಗಿದ್ರೆ ಈ ರೋಗಗಳು ನಿಮ್ಮ ಬಳಿ ಸುಳಿಯಲ್ಲ

ಗ್ರೀನ್ ಟೀ ಕುಡಿಯುವುದರಿಂದ ಮಧುಮೇಹ ನಿಯಂತ್ರಣದಲ್ಲಿರುತ್ತದೆ. ರಕ್ತದ ಒತ್ತಡವನ್ನು ನಿವಾರಿಸಲು ಇದು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ಸಾಬೀತುಪಡಿಸಿವೆ.

ಬೆಳಗೆದ್ದು ಗ್ರೀನ್​ ಟೀ ಅಥವಾ ಬ್ಲಾಕ್​ ಟೀ ಕುಡಿತೀರಾ? ಹಾಗಿದ್ರೆ ಈ ರೋಗಗಳು ನಿಮ್ಮ ಬಳಿ ಸುಳಿಯಲ್ಲ
ಗ್ರೀನ್​ ಟೀ
ರಾಜೇಶ್ ದುಗ್ಗುಮನೆ
| Edited By: ಆಯೇಷಾ ಬಾನು|

Updated on: Mar 11, 2021 | 6:38 AM

Share

ಮುಂಜಾನೆ ಎದ್ದು ಗ್ರೀನ್ ಟೀ ಅಥವಾ ಬ್ಲಾಕ್​ ಟೀ ಕುಡಿಯುವ ಹವ್ಯಾಸ ಸಾಕಷ್ಟು ಜನರಿಗೆ ಇರುತ್ತದೆ. ಮುಂಜಾನೆ ಎದ್ದಾಗ ಚೈತನ್ಯ ಸಿಗುತ್ತದೆ ಎನ್ನುವ ಕಾರಣಕ್ಕೆ ಅನೇಕರು ಮುಂಜಾನೆ ಗ್ರೀನ್​ ಟೀ ಕುಡಿಯೋಕೆ ಆದ್ಯತೆ ನೀಡುತ್ತಾರೆ. ಇಷ್ಟೇ ಅಲ್ಲದೆ, ಗ್ರೀನ್ ಟೀ ಹಾಗೂ ಬ್ಲಾಕ್​ ಟೀಯಿಂದ ನಿಮ್ಮ ದೇಹಕ್ಕೆ ಅಸಂಖ್ಯಾತ ಪ್ರಯೋಜನಗಳಿವೆ. ಗ್ರೀನ್ ಟೀ ಕುಡಿಯುವುದರಿಂದ ಮಧುಮೇಹ ನಿಯಂತ್ರಣದಲ್ಲಿರುತ್ತದೆ. ರಕ್ತದ ಒತ್ತಡವನ್ನು ನಿವಾರಿಸಲು ಇದು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ಸಾಬೀತುಪಡಿಸಿವೆ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಹೊಸ ಅಧ್ಯಯನವು ಗ್ರೀನ್​ ಟೀ ಹಾಗೂ ಮತ್ತು ಬ್ಲಾಕ್​ ಟೀ ಕುಡಿಯುವದರಿಂದ ಅಧಿಕ ರಕ್ತದೊತ್ತಡ ಕಡಿಮೆ ಆಗುತ್ತದೆಯಂತೆ. ರಕ್ತದೊತ್ತಡ ಕಡಿಮೆ ಆದರೆ, ಹೃದಯದ ಆರೋಗ್ಯ ಉತ್ತಮವಾಗಿದ್ದಂತೆ ಎಂದು ಅಧ್ಯಯನ ಹೇಳಿದೆ.

ಈ ಚಹಾಗಳಲ್ಲಿರುವ ಕ್ಯಾಟೆಚಿನ್ಸ್ ಎಂದು ಕರೆಯಲ್ಪಡುವ ಕೆಲವು ಸಂಯುಕ್ತಗಳು ಅಯಾನ್ ಪ್ರೋಟೀನ್‌ಗಳನ್ನು ಸಕ್ರಿಯಗೊಳಿಸುವ ಮೂಲಕ ರಕ್ತನಾಳಗಗಳಿಗೆ ವಿಶ್ರಾಂತಿ ನೀಡಲು ಸಹಾಯ ಮಾಡುತ್ತದೆ ಎಂದು ಸಂಶೋಧನೆ ಹೇಳಿದೆ.

ಗ್ರೀನ್​ ಮತ್ತು ಬ್ಲಾಕ್​ ಟೀ ಸೇವನೆಯಿಂದ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು ಎಂದು ಈ ಹಿಂದೆ ತೋರಿಸಲಾಗಿತ್ತು. ಆದರೆ, ಇದಕ್ಕೆ ಸೂಕ್ತಕಾರಣಗಳನ್ನು ನೀಡಿರಲಿಲ್ಲ. ಈಗ ಹೊಸ ಅಧ್ಯಯನದಲ್ಲಿ ಇದಕ್ಕೆಲ್ಲವೂ ಉತ್ತರ ನೀಡಿದಂತಾಗಿದೆ. ಅಧಿಕ ರಕ್ತದೊತ್ತಡ ಇತ್ತೀಚೆಗೆ ಕಂಡು ಬರುತ್ತಿರುವ ಸಾಮಾನ್ಯ ಸಮಸ್ಯೆ. ವಿಶ್ವದ ವಯಸ್ಕ ಜನಸಂಖ್ಯೆಯ ಮೂರನೇ ಒಂದು ಭಾಗದಷ್ಟು ಜನರು ಅಧಿಕ ರಕ್ತದೊತ್ತಡವನ್ನು ಹೊಂದಿದ್ದಾರೆ. ಇದರಿಂದ ಅಕಾಲಿಕ ಮರಣ ಎದುರಾಗಬಹುದು. ಹೀಗಾಗಿ, ನಿತ್ಯ ಗ್ರೀನ್ ಟೀ ಕುಡಿಯಬೇಕು ಎನ್ನುತ್ತಾರೆ ತಜ್ಞರು.

ಇದನ್ನೂ ಓದಿ: Red Banana: ಕಣ್ಣಿಗೆ ತಂಪು ಕೆಂಪು ಬಾಳೆಹಣ್ಣು, ರಕ್ತದೊತ್ತಡ ನಿವಾರಣೆ, ಜೀರ್ಣಕ್ರಿಯೆಗೂ ಸಹಕಾರಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!