ಬೆಳಗೆದ್ದು ಗ್ರೀನ್​ ಟೀ ಅಥವಾ ಬ್ಲಾಕ್​ ಟೀ ಕುಡಿತೀರಾ? ಹಾಗಿದ್ರೆ ಈ ರೋಗಗಳು ನಿಮ್ಮ ಬಳಿ ಸುಳಿಯಲ್ಲ

ಗ್ರೀನ್ ಟೀ ಕುಡಿಯುವುದರಿಂದ ಮಧುಮೇಹ ನಿಯಂತ್ರಣದಲ್ಲಿರುತ್ತದೆ. ರಕ್ತದ ಒತ್ತಡವನ್ನು ನಿವಾರಿಸಲು ಇದು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ಸಾಬೀತುಪಡಿಸಿವೆ.

ಬೆಳಗೆದ್ದು ಗ್ರೀನ್​ ಟೀ ಅಥವಾ ಬ್ಲಾಕ್​ ಟೀ ಕುಡಿತೀರಾ? ಹಾಗಿದ್ರೆ ಈ ರೋಗಗಳು ನಿಮ್ಮ ಬಳಿ ಸುಳಿಯಲ್ಲ
ಗ್ರೀನ್​ ಟೀ
Follow us
| Updated By: ಆಯೇಷಾ ಬಾನು

Updated on: Mar 11, 2021 | 6:38 AM

ಮುಂಜಾನೆ ಎದ್ದು ಗ್ರೀನ್ ಟೀ ಅಥವಾ ಬ್ಲಾಕ್​ ಟೀ ಕುಡಿಯುವ ಹವ್ಯಾಸ ಸಾಕಷ್ಟು ಜನರಿಗೆ ಇರುತ್ತದೆ. ಮುಂಜಾನೆ ಎದ್ದಾಗ ಚೈತನ್ಯ ಸಿಗುತ್ತದೆ ಎನ್ನುವ ಕಾರಣಕ್ಕೆ ಅನೇಕರು ಮುಂಜಾನೆ ಗ್ರೀನ್​ ಟೀ ಕುಡಿಯೋಕೆ ಆದ್ಯತೆ ನೀಡುತ್ತಾರೆ. ಇಷ್ಟೇ ಅಲ್ಲದೆ, ಗ್ರೀನ್ ಟೀ ಹಾಗೂ ಬ್ಲಾಕ್​ ಟೀಯಿಂದ ನಿಮ್ಮ ದೇಹಕ್ಕೆ ಅಸಂಖ್ಯಾತ ಪ್ರಯೋಜನಗಳಿವೆ. ಗ್ರೀನ್ ಟೀ ಕುಡಿಯುವುದರಿಂದ ಮಧುಮೇಹ ನಿಯಂತ್ರಣದಲ್ಲಿರುತ್ತದೆ. ರಕ್ತದ ಒತ್ತಡವನ್ನು ನಿವಾರಿಸಲು ಇದು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ಸಾಬೀತುಪಡಿಸಿವೆ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಹೊಸ ಅಧ್ಯಯನವು ಗ್ರೀನ್​ ಟೀ ಹಾಗೂ ಮತ್ತು ಬ್ಲಾಕ್​ ಟೀ ಕುಡಿಯುವದರಿಂದ ಅಧಿಕ ರಕ್ತದೊತ್ತಡ ಕಡಿಮೆ ಆಗುತ್ತದೆಯಂತೆ. ರಕ್ತದೊತ್ತಡ ಕಡಿಮೆ ಆದರೆ, ಹೃದಯದ ಆರೋಗ್ಯ ಉತ್ತಮವಾಗಿದ್ದಂತೆ ಎಂದು ಅಧ್ಯಯನ ಹೇಳಿದೆ.

ಈ ಚಹಾಗಳಲ್ಲಿರುವ ಕ್ಯಾಟೆಚಿನ್ಸ್ ಎಂದು ಕರೆಯಲ್ಪಡುವ ಕೆಲವು ಸಂಯುಕ್ತಗಳು ಅಯಾನ್ ಪ್ರೋಟೀನ್‌ಗಳನ್ನು ಸಕ್ರಿಯಗೊಳಿಸುವ ಮೂಲಕ ರಕ್ತನಾಳಗಗಳಿಗೆ ವಿಶ್ರಾಂತಿ ನೀಡಲು ಸಹಾಯ ಮಾಡುತ್ತದೆ ಎಂದು ಸಂಶೋಧನೆ ಹೇಳಿದೆ.

ಗ್ರೀನ್​ ಮತ್ತು ಬ್ಲಾಕ್​ ಟೀ ಸೇವನೆಯಿಂದ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು ಎಂದು ಈ ಹಿಂದೆ ತೋರಿಸಲಾಗಿತ್ತು. ಆದರೆ, ಇದಕ್ಕೆ ಸೂಕ್ತಕಾರಣಗಳನ್ನು ನೀಡಿರಲಿಲ್ಲ. ಈಗ ಹೊಸ ಅಧ್ಯಯನದಲ್ಲಿ ಇದಕ್ಕೆಲ್ಲವೂ ಉತ್ತರ ನೀಡಿದಂತಾಗಿದೆ. ಅಧಿಕ ರಕ್ತದೊತ್ತಡ ಇತ್ತೀಚೆಗೆ ಕಂಡು ಬರುತ್ತಿರುವ ಸಾಮಾನ್ಯ ಸಮಸ್ಯೆ. ವಿಶ್ವದ ವಯಸ್ಕ ಜನಸಂಖ್ಯೆಯ ಮೂರನೇ ಒಂದು ಭಾಗದಷ್ಟು ಜನರು ಅಧಿಕ ರಕ್ತದೊತ್ತಡವನ್ನು ಹೊಂದಿದ್ದಾರೆ. ಇದರಿಂದ ಅಕಾಲಿಕ ಮರಣ ಎದುರಾಗಬಹುದು. ಹೀಗಾಗಿ, ನಿತ್ಯ ಗ್ರೀನ್ ಟೀ ಕುಡಿಯಬೇಕು ಎನ್ನುತ್ತಾರೆ ತಜ್ಞರು.

ಇದನ್ನೂ ಓದಿ: Red Banana: ಕಣ್ಣಿಗೆ ತಂಪು ಕೆಂಪು ಬಾಳೆಹಣ್ಣು, ರಕ್ತದೊತ್ತಡ ನಿವಾರಣೆ, ಜೀರ್ಣಕ್ರಿಯೆಗೂ ಸಹಕಾರಿ

PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ