AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bloodbath in stock market: ಷೇರುಪೇಟೆಯಲ್ಲಿ ರಕ್ತದೋಕುಳಿ; 1900 ಪಾಯಿಂಟ್​​ಗೂ ಹೆಚ್ಚು ಕುಸಿದ ಸೆನ್ಸೆಕ್ಸ್

ಭಾರತದ ಷೇರು ಮಾರ್ಕೆಟ್ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಶುಕ್ರವಾರ ಭಾರೀ ಪ್ರಮಾಣದಲ್ಲಿ ಕುಸಿದಿವೆ. ಈ ಕುಸಿತಕ್ಕೆ ಕಾರಣವಾಗಿದ್ದು ಬ್ಯಾಂಕಿಂಗ್ ಮತ್ತು ಫೈನಾನ್ಷಿಯಲ್ ಸ್ಟಾಕ್​ಗಳು.

Bloodbath in stock market: ಷೇರುಪೇಟೆಯಲ್ಲಿ ರಕ್ತದೋಕುಳಿ; 1900 ಪಾಯಿಂಟ್​​ಗೂ ಹೆಚ್ಚು ಕುಸಿದ ಸೆನ್ಸೆಕ್ಸ್
ಲಾಭದ ನಗದು
Srinivas Mata
|

Updated on:Feb 26, 2021 | 4:32 PM

Share

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಹಾಗೂ ನಿಫ್ಟಿಯಲ್ಲಿ ಫೆಬ್ರವರಿ 26ನೇ ತಾರೀಕಿನ ಶುಕ್ರವಾರ ರಕ್ತದೋಕುಳಿ ಆಗಿದೆ. ಮಧ್ಯಾಹ್ನ 1.15ರ ಹೊತ್ತಿಗೆ ಬಿಎಸ್​​ಇ ಸೆನ್ಸೆಕ್ಸ್ ಸೂಚ್ಯಂಕ 1,743.28 ಇಳಿಕೆ ಕಂಡು, 49,296.03ಪಾಯಿಂಟ್​​ನೊಂದಿಗೆ ವಹಿವಾಟು ನಡೆಸುತ್ತಿತ್ತು. ಇನ್ನು ನಿಫ್ಟಿ ಸೂಚ್ಯಂಕವು 510.8 ಪಾಯಿಂಟ್ ನೆಲ ಕಚ್ಚಿ, 14,586.55 ಪಾಯಿಂಟ್​ನೊಂದಿಗೆ ವಹಿವಾಟು ನಡೆಸಿತು.

ದಿನಾಂತ್ಯದ ವಹಿವಾಟು ಮುಕ್ತಾಯ ಆದಾಗ ಸೆನ್ಸೆಕ್ಸ್ 1939.32 ಪಾಯಿಂಟ್​​ಗಳಷ್ಟು ಕುಸಿತ ಕಂಡು, 49,099.99 ಪಾಯಿಂಟ್​ನಲ್ಲಿ ಕೊನೆಯಾಯಿತು. ಇನ್ನು ನಿಫ್ಟಿ 568.20 ಪಾಯಿಂಟ್ ಇಳಿದು 14,529.20 ಪಾಯಿಂಟ್ ತಲುಪಿತು. ನಿಫ್ಟಿ ಬ್ಯಾಂಕ್ 1745.40 ಪಾಯಿಂಟ್ ಇಳಿಕೆಯಾಯಿತು.

ಇಂದಿನ ವಹಿವಾಟಿನಲ್ಲಿ ಮಾರ್ಕೆಟ್ ನೆಲಕಚ್ಚಲು ಕಾರಣವಾಗಿದ್ದು ಬ್ಯಾಂಕಿಂಗ್ ಹಾಗೂ ಫೈನಾನ್ಷಿಯಲ್ ಷೇರುಗಳು. ಬ್ಯಾಂಕ್ ನಿಫ್ಟಿ, ಖಾಸಗಿ ಬ್ಯಾಂಕ್, ಪಿಎಸ್​ಯು ಬ್ಯಾಂಕ್ ಮತ್ತು ಹಣಕಾಸು ಸೇವೆಗಳ ಸೂಚ್ಯಂಕಗಳು ತಲಾ 4 ಪರ್ಸೆಂಟ್​​ಗೂ ಹೆಚ್ಚು ಕುಸಿತ ಕಂಡವು. ನಿಫ್ಟಿಯಲ್ಲಿ ಯಾವುದೇ ಷೇರು ಏರಿಕೆ ಕಾಣಲಿಲ್ಲ. ಇನ್ನು ಇಳಿಕೆಯತ್ತ ಗಮನಿಸುವುದಾದರೆ ಒಎನ್​​ಜಿಸಿ, ಜೆಎಸ್​ಡಬ್ಲ್ಯು ಸ್ಟೀಲ್, ಹೀರೋ ಮೋಟೋಕಾರ್ಪ್, ಮಹೀಂದ್ರಾ ಅಂಡ್ ಮಹೀಂದ್ರಾ ಹಾಗೂ ಕೊಟಕ್ ಮಹೀಂದ್ರಾ ಕಂಪೆನಿ ಷೇರುಗಳು ಕನಿಷ್ಠ 6 ಪರ್ಸೆಂಟ್ ಇಳಿಕೆ ಕಂಡವು.

ಇಂದು ಸರ್ಕಾರದಿಂದ ಜಿಡಿಪಿ ಅಂಕಿ- ಅಂಶ ಬಿಡುಗಡೆ ಆಗಲಿದೆ. ಅಕ್ಟೋಬರ್​​ನಿಂದ ಡಿಸೆಂಬರ್ ತ್ರೈಮಾಸಿಕದ ಅಂಕಿ- ಅಂಶ ಬಿಡುಗಡೆ ಆಗಲಿದ್ದು, ಅದು ಸಕಾರಾತ್ಮಕವಾಗಬಹುದು ಎಂಬ ನಿರೀಕ್ಷೆಯನ್ನು ತಜ್ಞರು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಎಸ್​ಬಿಐ, ಆ್ಯಕ್ಸಿಸ್, ಕೆನರಾ ಬ್ಯಾಂಕ್.. ಉಳಿತಾಯ ಖಾತೆಗೆ ಯಾವ ಬ್ಯಾಂಕ್​ನಲ್ಲಿ ಹೆಚ್ಚು ಬಡ್ಡಿ? ಇಲ್ಲಿದೆ ವಿವರ

Published On - 1:52 pm, Fri, 26 February 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ