AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bloodbath in stock market: ಷೇರುಪೇಟೆಯಲ್ಲಿ ರಕ್ತದೋಕುಳಿ; 1900 ಪಾಯಿಂಟ್​​ಗೂ ಹೆಚ್ಚು ಕುಸಿದ ಸೆನ್ಸೆಕ್ಸ್

ಭಾರತದ ಷೇರು ಮಾರ್ಕೆಟ್ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಶುಕ್ರವಾರ ಭಾರೀ ಪ್ರಮಾಣದಲ್ಲಿ ಕುಸಿದಿವೆ. ಈ ಕುಸಿತಕ್ಕೆ ಕಾರಣವಾಗಿದ್ದು ಬ್ಯಾಂಕಿಂಗ್ ಮತ್ತು ಫೈನಾನ್ಷಿಯಲ್ ಸ್ಟಾಕ್​ಗಳು.

Bloodbath in stock market: ಷೇರುಪೇಟೆಯಲ್ಲಿ ರಕ್ತದೋಕುಳಿ; 1900 ಪಾಯಿಂಟ್​​ಗೂ ಹೆಚ್ಚು ಕುಸಿದ ಸೆನ್ಸೆಕ್ಸ್
ಲಾಭದ ನಗದು
Srinivas Mata
|

Updated on:Feb 26, 2021 | 4:32 PM

Share

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಹಾಗೂ ನಿಫ್ಟಿಯಲ್ಲಿ ಫೆಬ್ರವರಿ 26ನೇ ತಾರೀಕಿನ ಶುಕ್ರವಾರ ರಕ್ತದೋಕುಳಿ ಆಗಿದೆ. ಮಧ್ಯಾಹ್ನ 1.15ರ ಹೊತ್ತಿಗೆ ಬಿಎಸ್​​ಇ ಸೆನ್ಸೆಕ್ಸ್ ಸೂಚ್ಯಂಕ 1,743.28 ಇಳಿಕೆ ಕಂಡು, 49,296.03ಪಾಯಿಂಟ್​​ನೊಂದಿಗೆ ವಹಿವಾಟು ನಡೆಸುತ್ತಿತ್ತು. ಇನ್ನು ನಿಫ್ಟಿ ಸೂಚ್ಯಂಕವು 510.8 ಪಾಯಿಂಟ್ ನೆಲ ಕಚ್ಚಿ, 14,586.55 ಪಾಯಿಂಟ್​ನೊಂದಿಗೆ ವಹಿವಾಟು ನಡೆಸಿತು.

ದಿನಾಂತ್ಯದ ವಹಿವಾಟು ಮುಕ್ತಾಯ ಆದಾಗ ಸೆನ್ಸೆಕ್ಸ್ 1939.32 ಪಾಯಿಂಟ್​​ಗಳಷ್ಟು ಕುಸಿತ ಕಂಡು, 49,099.99 ಪಾಯಿಂಟ್​ನಲ್ಲಿ ಕೊನೆಯಾಯಿತು. ಇನ್ನು ನಿಫ್ಟಿ 568.20 ಪಾಯಿಂಟ್ ಇಳಿದು 14,529.20 ಪಾಯಿಂಟ್ ತಲುಪಿತು. ನಿಫ್ಟಿ ಬ್ಯಾಂಕ್ 1745.40 ಪಾಯಿಂಟ್ ಇಳಿಕೆಯಾಯಿತು.

ಇಂದಿನ ವಹಿವಾಟಿನಲ್ಲಿ ಮಾರ್ಕೆಟ್ ನೆಲಕಚ್ಚಲು ಕಾರಣವಾಗಿದ್ದು ಬ್ಯಾಂಕಿಂಗ್ ಹಾಗೂ ಫೈನಾನ್ಷಿಯಲ್ ಷೇರುಗಳು. ಬ್ಯಾಂಕ್ ನಿಫ್ಟಿ, ಖಾಸಗಿ ಬ್ಯಾಂಕ್, ಪಿಎಸ್​ಯು ಬ್ಯಾಂಕ್ ಮತ್ತು ಹಣಕಾಸು ಸೇವೆಗಳ ಸೂಚ್ಯಂಕಗಳು ತಲಾ 4 ಪರ್ಸೆಂಟ್​​ಗೂ ಹೆಚ್ಚು ಕುಸಿತ ಕಂಡವು. ನಿಫ್ಟಿಯಲ್ಲಿ ಯಾವುದೇ ಷೇರು ಏರಿಕೆ ಕಾಣಲಿಲ್ಲ. ಇನ್ನು ಇಳಿಕೆಯತ್ತ ಗಮನಿಸುವುದಾದರೆ ಒಎನ್​​ಜಿಸಿ, ಜೆಎಸ್​ಡಬ್ಲ್ಯು ಸ್ಟೀಲ್, ಹೀರೋ ಮೋಟೋಕಾರ್ಪ್, ಮಹೀಂದ್ರಾ ಅಂಡ್ ಮಹೀಂದ್ರಾ ಹಾಗೂ ಕೊಟಕ್ ಮಹೀಂದ್ರಾ ಕಂಪೆನಿ ಷೇರುಗಳು ಕನಿಷ್ಠ 6 ಪರ್ಸೆಂಟ್ ಇಳಿಕೆ ಕಂಡವು.

ಇಂದು ಸರ್ಕಾರದಿಂದ ಜಿಡಿಪಿ ಅಂಕಿ- ಅಂಶ ಬಿಡುಗಡೆ ಆಗಲಿದೆ. ಅಕ್ಟೋಬರ್​​ನಿಂದ ಡಿಸೆಂಬರ್ ತ್ರೈಮಾಸಿಕದ ಅಂಕಿ- ಅಂಶ ಬಿಡುಗಡೆ ಆಗಲಿದ್ದು, ಅದು ಸಕಾರಾತ್ಮಕವಾಗಬಹುದು ಎಂಬ ನಿರೀಕ್ಷೆಯನ್ನು ತಜ್ಞರು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಎಸ್​ಬಿಐ, ಆ್ಯಕ್ಸಿಸ್, ಕೆನರಾ ಬ್ಯಾಂಕ್.. ಉಳಿತಾಯ ಖಾತೆಗೆ ಯಾವ ಬ್ಯಾಂಕ್​ನಲ್ಲಿ ಹೆಚ್ಚು ಬಡ್ಡಿ? ಇಲ್ಲಿದೆ ವಿವರ

Published On - 1:52 pm, Fri, 26 February 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್