AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ BMTC ಕಂಡಕ್ಟರ್ ಬಲಿ, ಬಿಲ್ ಕಟ್ಟಲಾಗದೆ ಪತ್ನಿ-ಮಕ್ಕಳ ಪರದಾಟ

ಬೆಂಗಳೂರು: ಕೊರೊನಾ ಸೋಂಕಿನಿಂದ ಬಿಎಂಟಿಸಿ ಕಂಡಕ್ಟರ್ ಕಂ ಡ್ರೈವರ್ ಸಾವನ್ನಪ್ಪಿದ್ದು, ಆಸ್ಪತ್ರೆ ಬಿಲ್ ಪಾವತಿಸಲಾಗದೆ ಆತನ ಪತ್ನಿ ಹಾಗೂ ಮಕ್ಕಳು ಆಸ್ಪತ್ರೆ ಎದುರು ಕಣ್ಣೀರಿಡುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಕೆ ಆರ್ ನಗರ ತಾಲೂಕಿನ ನಿವಾಸಿಯಾಗಿರುವ ಮೃತ ವ್ಯಕ್ತಿ, ಸದ್ಯ ಪೀಣ್ಯದ ಡಿಪೋ ನಂಬರ್ 22ರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. 10 ದಿನಗಳ ಹಿಂದೆ ವ್ಯಕ್ತಿಗೆ ತೀವ್ರ ಉಸಿರಾಟದ ಸಮಸ್ಯೆ ಎದುರಾಗಿತ್ತು, ಹೀಗಾಗಿ ಮೃತನನ್ನು ಚಿಕ್ಕಬಾಣವರದ NRR ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಆದರೆ ಇಂದು ಆಸ್ಪತ್ರೆಯಲ್ಲಿ […]

ಕೊರೊನಾಗೆ BMTC ಕಂಡಕ್ಟರ್ ಬಲಿ, ಬಿಲ್ ಕಟ್ಟಲಾಗದೆ ಪತ್ನಿ-ಮಕ್ಕಳ ಪರದಾಟ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 07, 2020 | 3:24 PM

Share

ಬೆಂಗಳೂರು: ಕೊರೊನಾ ಸೋಂಕಿನಿಂದ ಬಿಎಂಟಿಸಿ ಕಂಡಕ್ಟರ್ ಕಂ ಡ್ರೈವರ್ ಸಾವನ್ನಪ್ಪಿದ್ದು, ಆಸ್ಪತ್ರೆ ಬಿಲ್ ಪಾವತಿಸಲಾಗದೆ ಆತನ ಪತ್ನಿ ಹಾಗೂ ಮಕ್ಕಳು ಆಸ್ಪತ್ರೆ ಎದುರು ಕಣ್ಣೀರಿಡುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ಕೆ ಆರ್ ನಗರ ತಾಲೂಕಿನ ನಿವಾಸಿಯಾಗಿರುವ ಮೃತ ವ್ಯಕ್ತಿ, ಸದ್ಯ ಪೀಣ್ಯದ ಡಿಪೋ ನಂಬರ್ 22ರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. 10 ದಿನಗಳ ಹಿಂದೆ ವ್ಯಕ್ತಿಗೆ ತೀವ್ರ ಉಸಿರಾಟದ ಸಮಸ್ಯೆ ಎದುರಾಗಿತ್ತು, ಹೀಗಾಗಿ ಮೃತನನ್ನು ಚಿಕ್ಕಬಾಣವರದ NRR ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು.

ಆದರೆ ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದು, ಆಸ್ಪತ್ರೆ ಸಿಬ್ಬಂದಿ 1.8 ಲಕ್ಷ ಹಣ ಕಟ್ಟಿ ಮೃತದೇಹ ತೆಗೆದುಕೊಂಡು ಹೋಗಿ ಎನ್ನುತ್ತಿದ್ದಾರೆ. ಹೀಗಾಗಿ ಮೃತನ ಹೆಂಡತಿ ಮತ್ತು ಮಕ್ಕಳು ಆಸ್ಪತ್ರೆಯ ಬಿಲ್ ಕಟ್ಟಲಾಗದೆ ಪರದಾಡುತ್ತಿದ್ದಾರೆ.

Published On - 3:21 pm, Fri, 7 August 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು