AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟ್ಯಾಂತರ ರೂ ನಷ್ಟದಲ್ಲಿ ಮುಳಗಿದ BMTC.. ಸಾಲ ಪಡೆಯಲು ಬ್ಯಾಂಕ್​ಗಳ ಹುಡುಕಾಟ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ನಷ್ಟದಿಂದ ಅಕ್ಷರಶಃ ಮುಳುಗಿದ ಹಡಗಿನಂತಾಗಿದೆ. ಹೀಗಾಗಿ ನಮ್ಮ ಷರತ್ತುಗಳ ಅನ್ವಯ ಆಸಕ್ತ ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ಶೆಡ್ಯೂಲ್ಡ್ ಕಮರ್ಷಿಯಲ್ ಬ್ಯಾಂಕ್​ಗಳು ಟೆಂಡರ್​ನಲ್ಲಿ ಭಾಗವಹಿಸಿ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವಂತೆ BMTC ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ಕೋಟ್ಯಾಂತರ ರೂ ನಷ್ಟದಲ್ಲಿ ಮುಳಗಿದ BMTC.. ಸಾಲ ಪಡೆಯಲು ಬ್ಯಾಂಕ್​ಗಳ ಹುಡುಕಾಟ
ಬಿಎಂಟಿಸಿ ಬಸ್​ (ಪ್ರಾತಿನಿಧಿಕ ಚಿತ್ರ)
ಆಯೇಷಾ ಬಾನು
|

Updated on: Dec 24, 2020 | 9:27 AM

Share

ಬೆಂಗಳೂರು: ಕೋಟ್ಯಾಂತರ ಜನರನ್ನು ಹೊತ್ತು ಸಾಗುವ BMTC ನಷ್ಟದಲ್ಲಿದೆ. ಸಾಲದಲ್ಲಿ ಮುಳುಗಿದೆ. ಆದರೆ ಸಚಿವ ಲಕ್ಷ್ಮಣ ಸವದಿ ಮಾತ್ರ ಈ ಬಗ್ಗೆ ತಲೆನೇ ಕೆಡಿಸಿಕೊಳ್ಳುತ್ತಿಲ್ಲ. ಸಂಸ್ಥೆಯ ನೆರವಿಗೆ ನಿಲ್ಲುತ್ತಿಲ್ಲ. ಈ ಬಗ್ಗೆ ಸಿಬ್ಬಂದಿ ಅಸಮಾಧಾನ ಹೊರ ಹಾಕಿದ್ದು ಅಧಿಕಾರಿಗಳು ಸಾಲಕ್ಕಾಗಿ ಬ್ಯಾಂಕ್​ಗಳ ಮೊರೆ ಹೋಗಿದ್ದಾರೆ.

ಸಲಕ್ಕಾಗಿ ಬ್ಯಾಂಕ್​ಗಳ ಹುಡುಕಾಟ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ನಷ್ಟದಿಂದ ಅಕ್ಷರಶಃ ಮುಳುಗಿದ ಹಡಗಿನಂತಾಗಿದೆ. ಸಚಿವ ಲಕ್ಷ್ಮಣ ಸವದಿ ಪ್ರಮಾಣಿಕವಾಗಿ ಕೆಲಸ ಮಾಡಿದ್ದರೆ ಬಿಎಂಟಿಸಿಗೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಸಚಿವರ ನಿರ್ಲಕ್ಷ್ಯ ಹಾಗೂ ಅಧಿಕಾರಗಳ ಅನಗತ್ಯ ನಿರ್ಧಾರದಿಂದ ಬಿಎಂಟಿಸಿ ಬರ್ಬಾದ್ ಆಗ್ತಿದೆ. ನೌಕರರಿಗೆ ಸಂಬಳ, ಬ್ಯಾಟರಿ, ಡೀಸೆಲ್ ಖರೀದಿ ಮಾಡಲು ಬಿಎಂಟಿಸಿ ಬಳಿ ಹಣವಿಲ್ಲವಂತೆ. ಸಾಲಕ್ಕಾಗಿ ಬಿಎಂಟಿಸಿ ಬಸ್, ಡಿಪೋ, ಟಿಟಿಎಂಸಿಗಳನ್ನ ಅಡಮಾನ ಇಡಲು ಬಿಎಂಟಿಸಿ ಅಧಿಕಾರಿಗಳು ಮುಂದಾಗಿದ್ದಾರೆ. ಆರ್ಥಿಕ ಸಂಕಷ್ಟದಿಂದ 230 ಕೋಟಿ ಸಾಲ ಪಡೆಯಲು ಬ್ಯಾಂಕ್​ಗಳಿಗೆ ಹುಡುಕಾಟ ನಡೆಸುತ್ತಿದ್ದಾರೆ.

ಕಡಿಮೆ ಬಡ್ಡಿದರಲ್ಲಿ ಸಾಲ ನೀಡುವ ಬ್ಯಾಂಕ್​ಗಳ ಬಾಗಿಲು ತಟ್ಟಲು ಮುಂದಾಗಿದ್ದಾರೆ. ನಮ್ಮ ಷರತ್ತುಗಳ ಅನ್ವಯ ಆಸಕ್ತ ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ಶೆಡ್ಯೂಲ್ಡ್ ಕಮರ್ಷಿಯಲ್ ಬ್ಯಾಂಕ್​ಗಳು ಟೆಂಡರ್​ನಲ್ಲಿ ಭಾಗವಹಿಸಿ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವಂತೆ BMTC ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ನಷ್ಟದ ಸುಳಿಯಲಿ ಬಿಎಂಟಿಸಿ 2012-13: 147 ಕೋಟಿ ನಷ್ಟ 2013-14: 147 ಕೋಟಿ ನಷ್ಟ 2014-15: 64 ಕೋಟಿ ನಷ್ಟ 2015-16: 13 ಕೋಟಿ ನಷ್ಟ 2016-17: 260 ಕೋಟಿ ನಷ್ಟ 2017-18: 216 ಕೋಟಿ ನಷ್ಟ 2018-19: 300 ಕೋಟಿ ನಷ್ಟ 2019-2020: 500 ಕೋಟಿ ನಷ್ಟ

ರಾತ್ರಿ​ ಕರ್ಫ್ಯೂ | ಬೆಂಗಳೂರಿನಲ್ಲಿ ಬಸ್​ ಸಂಚಾರದ ಗೊಂದಲ; ಮಾರ್ಗಸೂಚಿಗೆ ಕಾಯುತ್ತಿರುವ ಕೆಎಸ್​ಆರ್​ಟಿಸಿ, ಬಿಎಂಟಿಸಿ

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?