AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿದ ಬಿಎಂಟಿಸಿ ಬಸ್​ಗಳಲ್ಲಿ ಟಿಕೆಟ್ ಪಡೆಯದಿದ್ದರೆ ಪ್ರಯಾಣಿಕರೇ ಹೊಣೆ: ಕಂಡಕ್ಟರ್​ಗೆ ಇಲ್ಲ ದಂಡ

ಬಸ್ ಸೀಟ್ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಪ್ರಯಾಣಿಕರು ಇರುವ ಸಂದರ್ಭಗಳಲ್ಲಿ ಮಾತ್ರ ಈ ನಿಯಮ ಅನ್ವಯವಾಗುತ್ತದೆ. ವೋಲ್ವೊ ಬಸ್​ಗಳಿಗೆ ಈ ಹೊಸ ನಿಯಮ ಅನ್ವಯವಾಗುವುದಿಲ್ಲ.

ತುಂಬಿದ ಬಿಎಂಟಿಸಿ ಬಸ್​ಗಳಲ್ಲಿ ಟಿಕೆಟ್ ಪಡೆಯದಿದ್ದರೆ ಪ್ರಯಾಣಿಕರೇ ಹೊಣೆ: ಕಂಡಕ್ಟರ್​ಗೆ ಇಲ್ಲ ದಂಡ
ಬಿಎಂಟಿಸಿ ಬಸ್​ (ಪ್ರಾತಿನಿಧಿಕ ಚಿತ್ರ)
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 05, 2021 | 8:40 PM

Share

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್​ಗಳಲ್ಲಿ ಟಿಕೆಟ್ ಪಡೆಯುವುದು ಪ್ರಯಾಣಿಕರ ಹೊಣೆ ಎಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕಿ ಸಿ.ಶಿಖಾ ಆದೇಶ ಹೊರಡಿಸಿದ್ದಾರೆ. ಪರಿಷ್ಕೃತ ಆದೇಶದ ಪ್ರಕಾರ ತಪಾಸಣೆ ವೇಳೆ ಟಿಕೆಟ್ ಇಲ್ಲದ ಪ್ರಯಾಣಿಕರು ಸಿಕ್ಕಿಬಿದ್ದರೆ ಕಂಡಕ್ಟರ್​ಗೆ ಇನ್ನು ಮುಂದೆ ದಂಡ ವಿಧಿಸುವುದಿಲ್ಲ. ಪ್ರಯಾಣಿಕರೇ ದಂಡ ಪಾವತಿಸಬೇಕಾಗುತ್ತದೆ.

ಬಸ್ ಸೀಟ್ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಪ್ರಯಾಣಿಕರು ಇರುವ ಸಂದರ್ಭಗಳಲ್ಲಿ ಮಾತ್ರ ಈ ನಿಯಮ ಅನ್ವಯವಾಗುತ್ತದೆ. ವೋಲ್ವೊ ಬಸ್​ಗಳಿಗೆ ಈ ಹೊಸ ನಿಯಮ ಅನ್ವಯವಾಗುವುದಿಲ್ಲ.

ಬಸ್ ಹತ್ತುವ ಪ್ರಯಾಣಿಕರು ಟಿಕೆಟ್ ಕೇಳಿ ಪಡೆಯಬೇಕು. ತಪಾಸಣೆ ವೇಳೆ ಟಿಕೆಟ್ ಇಲ್ಲದ ಪ್ರಯಾಣಿಕರು ಪತ್ತೆಯಾದರೆ ಮೊದಲಿನಂತೆ ಕಂಡಕ್ಟರ್ ವಿರುದ್ಧ ಕರ್ತವ್ಯಲೋಪ ಪ್ರಕರಣ ದಾಖಲಿಸಿ, ವಿಚಾರಣೆ ನಡೆಸುವುದಿಲ್ಲ. ಕಂಡಕ್ಟರ್​ಗೆ ದಂಡವನ್ನೂ ವಿಧಿಸುವುದಿಲ್ಲ. ಟಿಕೆಟ್ ಪಡೆಯುವುದು ಪ್ರಯಾಣಿಕರ ಹೊಣೆಯಾಗಿರುತ್ತದೆ.

ಕೆಲ ಪ್ರಯಾಣಿಕರು ಟಿಕೆಟ್ ಖರೀದಿಸದೆ ಮುಗುಮ್ಮಾಗಿ ಕುಳಿತುಬಿಡುತ್ತಿದ್ದರು. ತಪಾಸಣೆ ವೇಳೆ ಸಿಕ್ಕಿಬಿದ್ದಾಗ, ‘ಕಂಡಕ್ಟರ್​ ಈ ಕಡೆಗೆ ಬರಲೇ ಇಲ್ಲ. ಹಣಕೊಟ್ಟರೂ ಟಿಕೆಟ್ ಕೊಟ್ಟಿಲ್ಲ’ ಎಂದೆಲ್ಲಾ ದೂರುತ್ತಿದ್ದರು. ಇಂಥ ಸಂದರ್ಭಗಳಲ್ಲಿ ತಪಾಸಣೆಗೆ ಬಂದ ಅಧಿಕಾರಿಗಳು ಪ್ರಯಾಣಿಕರಿಗೆ ದಂಡ ವಿಧಿಸಿ, ಕಂಡಕ್ಟರ್​ಗಳನ್ನು ಹೊಣೆ ಮಾಡಿ ವಿಚಾರಣೆಗೆ ಸೂಚಿಸುತ್ತಿದ್ದರು.

ಆದರೆ ಇದೀಗ ಎನ್​ಐಎನ್​ಸಿ ನಿಯಮ ರದ್ದು ಮಾಡಿರುವುದರಿಂದ ಕಂಡಕ್ಟರ್​ ಇಂಥ ಕಂಟಕಗಳಿಂದ ತಪ್ಪಿಸಿಕೊಂಡಂತೆ ಆಗಿದೆ. ಈ ಹಿಂದೆ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾಗ ಎನ್​ಐಎಸಿ ರದ್ದತಿಯ ಬೇಡಿಕೆಯನ್ನೂ ಮುಂದಿಟ್ಟಿದ್ದರು. ಇದೀಗ ನೌಕರರ ಬೇಡಿಕೆಗೆ ಬಿಎಂಟಿಸಿ ಒಪ್ಪಿಕೊಂಡಿದೆ.

ಇದನ್ನೂ ಓದಿ: ಆಟಕ್ಕುಂಟು ಲೆಕ್ಕಕ್ಕಿಲ್ಲ ಬಿಎಂಟಿಸಿ ಆ್ಯಪ್! ಇದು MyBMTC ಅಲ್ಲ! Why ಬಿಎಂಟಿಸಿ ಆ್ಯಪ್?

ಇದನ್ನೂ ಓದಿ: Bus Priority Lane: ಆದ್ಯತಾ ಪಥದಲ್ಲಿ ಚಲಿಸದೆ ಟ್ರಾಫಿಕ್ ಸಮಸ್ಯೆಗೆ ಪುಷ್ಟಿ ನೀಡುತ್ತಿರುವ BMTC ಬಸ್ ಸಮಸ್ಯೆಗೆ ಪರಿಹಾರವೇನು?

Published On - 8:36 pm, Fri, 5 March 21

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ