AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿದ ಬಿಎಂಟಿಸಿ ಬಸ್​ಗಳಲ್ಲಿ ಟಿಕೆಟ್ ಪಡೆಯದಿದ್ದರೆ ಪ್ರಯಾಣಿಕರೇ ಹೊಣೆ: ಕಂಡಕ್ಟರ್​ಗೆ ಇಲ್ಲ ದಂಡ

ಬಸ್ ಸೀಟ್ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಪ್ರಯಾಣಿಕರು ಇರುವ ಸಂದರ್ಭಗಳಲ್ಲಿ ಮಾತ್ರ ಈ ನಿಯಮ ಅನ್ವಯವಾಗುತ್ತದೆ. ವೋಲ್ವೊ ಬಸ್​ಗಳಿಗೆ ಈ ಹೊಸ ನಿಯಮ ಅನ್ವಯವಾಗುವುದಿಲ್ಲ.

ತುಂಬಿದ ಬಿಎಂಟಿಸಿ ಬಸ್​ಗಳಲ್ಲಿ ಟಿಕೆಟ್ ಪಡೆಯದಿದ್ದರೆ ಪ್ರಯಾಣಿಕರೇ ಹೊಣೆ: ಕಂಡಕ್ಟರ್​ಗೆ ಇಲ್ಲ ದಂಡ
ಬಿಎಂಟಿಸಿ ಬಸ್​ (ಪ್ರಾತಿನಿಧಿಕ ಚಿತ್ರ)
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 05, 2021 | 8:40 PM

Share

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್​ಗಳಲ್ಲಿ ಟಿಕೆಟ್ ಪಡೆಯುವುದು ಪ್ರಯಾಣಿಕರ ಹೊಣೆ ಎಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕಿ ಸಿ.ಶಿಖಾ ಆದೇಶ ಹೊರಡಿಸಿದ್ದಾರೆ. ಪರಿಷ್ಕೃತ ಆದೇಶದ ಪ್ರಕಾರ ತಪಾಸಣೆ ವೇಳೆ ಟಿಕೆಟ್ ಇಲ್ಲದ ಪ್ರಯಾಣಿಕರು ಸಿಕ್ಕಿಬಿದ್ದರೆ ಕಂಡಕ್ಟರ್​ಗೆ ಇನ್ನು ಮುಂದೆ ದಂಡ ವಿಧಿಸುವುದಿಲ್ಲ. ಪ್ರಯಾಣಿಕರೇ ದಂಡ ಪಾವತಿಸಬೇಕಾಗುತ್ತದೆ.

ಬಸ್ ಸೀಟ್ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಪ್ರಯಾಣಿಕರು ಇರುವ ಸಂದರ್ಭಗಳಲ್ಲಿ ಮಾತ್ರ ಈ ನಿಯಮ ಅನ್ವಯವಾಗುತ್ತದೆ. ವೋಲ್ವೊ ಬಸ್​ಗಳಿಗೆ ಈ ಹೊಸ ನಿಯಮ ಅನ್ವಯವಾಗುವುದಿಲ್ಲ.

ಬಸ್ ಹತ್ತುವ ಪ್ರಯಾಣಿಕರು ಟಿಕೆಟ್ ಕೇಳಿ ಪಡೆಯಬೇಕು. ತಪಾಸಣೆ ವೇಳೆ ಟಿಕೆಟ್ ಇಲ್ಲದ ಪ್ರಯಾಣಿಕರು ಪತ್ತೆಯಾದರೆ ಮೊದಲಿನಂತೆ ಕಂಡಕ್ಟರ್ ವಿರುದ್ಧ ಕರ್ತವ್ಯಲೋಪ ಪ್ರಕರಣ ದಾಖಲಿಸಿ, ವಿಚಾರಣೆ ನಡೆಸುವುದಿಲ್ಲ. ಕಂಡಕ್ಟರ್​ಗೆ ದಂಡವನ್ನೂ ವಿಧಿಸುವುದಿಲ್ಲ. ಟಿಕೆಟ್ ಪಡೆಯುವುದು ಪ್ರಯಾಣಿಕರ ಹೊಣೆಯಾಗಿರುತ್ತದೆ.

ಕೆಲ ಪ್ರಯಾಣಿಕರು ಟಿಕೆಟ್ ಖರೀದಿಸದೆ ಮುಗುಮ್ಮಾಗಿ ಕುಳಿತುಬಿಡುತ್ತಿದ್ದರು. ತಪಾಸಣೆ ವೇಳೆ ಸಿಕ್ಕಿಬಿದ್ದಾಗ, ‘ಕಂಡಕ್ಟರ್​ ಈ ಕಡೆಗೆ ಬರಲೇ ಇಲ್ಲ. ಹಣಕೊಟ್ಟರೂ ಟಿಕೆಟ್ ಕೊಟ್ಟಿಲ್ಲ’ ಎಂದೆಲ್ಲಾ ದೂರುತ್ತಿದ್ದರು. ಇಂಥ ಸಂದರ್ಭಗಳಲ್ಲಿ ತಪಾಸಣೆಗೆ ಬಂದ ಅಧಿಕಾರಿಗಳು ಪ್ರಯಾಣಿಕರಿಗೆ ದಂಡ ವಿಧಿಸಿ, ಕಂಡಕ್ಟರ್​ಗಳನ್ನು ಹೊಣೆ ಮಾಡಿ ವಿಚಾರಣೆಗೆ ಸೂಚಿಸುತ್ತಿದ್ದರು.

ಆದರೆ ಇದೀಗ ಎನ್​ಐಎನ್​ಸಿ ನಿಯಮ ರದ್ದು ಮಾಡಿರುವುದರಿಂದ ಕಂಡಕ್ಟರ್​ ಇಂಥ ಕಂಟಕಗಳಿಂದ ತಪ್ಪಿಸಿಕೊಂಡಂತೆ ಆಗಿದೆ. ಈ ಹಿಂದೆ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾಗ ಎನ್​ಐಎಸಿ ರದ್ದತಿಯ ಬೇಡಿಕೆಯನ್ನೂ ಮುಂದಿಟ್ಟಿದ್ದರು. ಇದೀಗ ನೌಕರರ ಬೇಡಿಕೆಗೆ ಬಿಎಂಟಿಸಿ ಒಪ್ಪಿಕೊಂಡಿದೆ.

ಇದನ್ನೂ ಓದಿ: ಆಟಕ್ಕುಂಟು ಲೆಕ್ಕಕ್ಕಿಲ್ಲ ಬಿಎಂಟಿಸಿ ಆ್ಯಪ್! ಇದು MyBMTC ಅಲ್ಲ! Why ಬಿಎಂಟಿಸಿ ಆ್ಯಪ್?

ಇದನ್ನೂ ಓದಿ: Bus Priority Lane: ಆದ್ಯತಾ ಪಥದಲ್ಲಿ ಚಲಿಸದೆ ಟ್ರಾಫಿಕ್ ಸಮಸ್ಯೆಗೆ ಪುಷ್ಟಿ ನೀಡುತ್ತಿರುವ BMTC ಬಸ್ ಸಮಸ್ಯೆಗೆ ಪರಿಹಾರವೇನು?

Published On - 8:36 pm, Fri, 5 March 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!