AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿದ ಬಿಎಂಟಿಸಿ ಬಸ್​ಗಳಲ್ಲಿ ಟಿಕೆಟ್ ಪಡೆಯದಿದ್ದರೆ ಪ್ರಯಾಣಿಕರೇ ಹೊಣೆ: ಕಂಡಕ್ಟರ್​ಗೆ ಇಲ್ಲ ದಂಡ

ಬಸ್ ಸೀಟ್ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಪ್ರಯಾಣಿಕರು ಇರುವ ಸಂದರ್ಭಗಳಲ್ಲಿ ಮಾತ್ರ ಈ ನಿಯಮ ಅನ್ವಯವಾಗುತ್ತದೆ. ವೋಲ್ವೊ ಬಸ್​ಗಳಿಗೆ ಈ ಹೊಸ ನಿಯಮ ಅನ್ವಯವಾಗುವುದಿಲ್ಲ.

ತುಂಬಿದ ಬಿಎಂಟಿಸಿ ಬಸ್​ಗಳಲ್ಲಿ ಟಿಕೆಟ್ ಪಡೆಯದಿದ್ದರೆ ಪ್ರಯಾಣಿಕರೇ ಹೊಣೆ: ಕಂಡಕ್ಟರ್​ಗೆ ಇಲ್ಲ ದಂಡ
ಬಿಎಂಟಿಸಿ ಬಸ್​ (ಪ್ರಾತಿನಿಧಿಕ ಚಿತ್ರ)
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 05, 2021 | 8:40 PM

Share

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್​ಗಳಲ್ಲಿ ಟಿಕೆಟ್ ಪಡೆಯುವುದು ಪ್ರಯಾಣಿಕರ ಹೊಣೆ ಎಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕಿ ಸಿ.ಶಿಖಾ ಆದೇಶ ಹೊರಡಿಸಿದ್ದಾರೆ. ಪರಿಷ್ಕೃತ ಆದೇಶದ ಪ್ರಕಾರ ತಪಾಸಣೆ ವೇಳೆ ಟಿಕೆಟ್ ಇಲ್ಲದ ಪ್ರಯಾಣಿಕರು ಸಿಕ್ಕಿಬಿದ್ದರೆ ಕಂಡಕ್ಟರ್​ಗೆ ಇನ್ನು ಮುಂದೆ ದಂಡ ವಿಧಿಸುವುದಿಲ್ಲ. ಪ್ರಯಾಣಿಕರೇ ದಂಡ ಪಾವತಿಸಬೇಕಾಗುತ್ತದೆ.

ಬಸ್ ಸೀಟ್ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಪ್ರಯಾಣಿಕರು ಇರುವ ಸಂದರ್ಭಗಳಲ್ಲಿ ಮಾತ್ರ ಈ ನಿಯಮ ಅನ್ವಯವಾಗುತ್ತದೆ. ವೋಲ್ವೊ ಬಸ್​ಗಳಿಗೆ ಈ ಹೊಸ ನಿಯಮ ಅನ್ವಯವಾಗುವುದಿಲ್ಲ.

ಬಸ್ ಹತ್ತುವ ಪ್ರಯಾಣಿಕರು ಟಿಕೆಟ್ ಕೇಳಿ ಪಡೆಯಬೇಕು. ತಪಾಸಣೆ ವೇಳೆ ಟಿಕೆಟ್ ಇಲ್ಲದ ಪ್ರಯಾಣಿಕರು ಪತ್ತೆಯಾದರೆ ಮೊದಲಿನಂತೆ ಕಂಡಕ್ಟರ್ ವಿರುದ್ಧ ಕರ್ತವ್ಯಲೋಪ ಪ್ರಕರಣ ದಾಖಲಿಸಿ, ವಿಚಾರಣೆ ನಡೆಸುವುದಿಲ್ಲ. ಕಂಡಕ್ಟರ್​ಗೆ ದಂಡವನ್ನೂ ವಿಧಿಸುವುದಿಲ್ಲ. ಟಿಕೆಟ್ ಪಡೆಯುವುದು ಪ್ರಯಾಣಿಕರ ಹೊಣೆಯಾಗಿರುತ್ತದೆ.

ಕೆಲ ಪ್ರಯಾಣಿಕರು ಟಿಕೆಟ್ ಖರೀದಿಸದೆ ಮುಗುಮ್ಮಾಗಿ ಕುಳಿತುಬಿಡುತ್ತಿದ್ದರು. ತಪಾಸಣೆ ವೇಳೆ ಸಿಕ್ಕಿಬಿದ್ದಾಗ, ‘ಕಂಡಕ್ಟರ್​ ಈ ಕಡೆಗೆ ಬರಲೇ ಇಲ್ಲ. ಹಣಕೊಟ್ಟರೂ ಟಿಕೆಟ್ ಕೊಟ್ಟಿಲ್ಲ’ ಎಂದೆಲ್ಲಾ ದೂರುತ್ತಿದ್ದರು. ಇಂಥ ಸಂದರ್ಭಗಳಲ್ಲಿ ತಪಾಸಣೆಗೆ ಬಂದ ಅಧಿಕಾರಿಗಳು ಪ್ರಯಾಣಿಕರಿಗೆ ದಂಡ ವಿಧಿಸಿ, ಕಂಡಕ್ಟರ್​ಗಳನ್ನು ಹೊಣೆ ಮಾಡಿ ವಿಚಾರಣೆಗೆ ಸೂಚಿಸುತ್ತಿದ್ದರು.

ಆದರೆ ಇದೀಗ ಎನ್​ಐಎನ್​ಸಿ ನಿಯಮ ರದ್ದು ಮಾಡಿರುವುದರಿಂದ ಕಂಡಕ್ಟರ್​ ಇಂಥ ಕಂಟಕಗಳಿಂದ ತಪ್ಪಿಸಿಕೊಂಡಂತೆ ಆಗಿದೆ. ಈ ಹಿಂದೆ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾಗ ಎನ್​ಐಎಸಿ ರದ್ದತಿಯ ಬೇಡಿಕೆಯನ್ನೂ ಮುಂದಿಟ್ಟಿದ್ದರು. ಇದೀಗ ನೌಕರರ ಬೇಡಿಕೆಗೆ ಬಿಎಂಟಿಸಿ ಒಪ್ಪಿಕೊಂಡಿದೆ.

ಇದನ್ನೂ ಓದಿ: ಆಟಕ್ಕುಂಟು ಲೆಕ್ಕಕ್ಕಿಲ್ಲ ಬಿಎಂಟಿಸಿ ಆ್ಯಪ್! ಇದು MyBMTC ಅಲ್ಲ! Why ಬಿಎಂಟಿಸಿ ಆ್ಯಪ್?

ಇದನ್ನೂ ಓದಿ: Bus Priority Lane: ಆದ್ಯತಾ ಪಥದಲ್ಲಿ ಚಲಿಸದೆ ಟ್ರಾಫಿಕ್ ಸಮಸ್ಯೆಗೆ ಪುಷ್ಟಿ ನೀಡುತ್ತಿರುವ BMTC ಬಸ್ ಸಮಸ್ಯೆಗೆ ಪರಿಹಾರವೇನು?

Published On - 8:36 pm, Fri, 5 March 21

ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ